Homeಮುಖಪುಟಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ...

ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ದೆಹಲಿಯ ಹಲವು ಆಸ್ಪತ್ರೆಗಳು ಆಮ್ಲಜನಕದ ಕೊರತೆಯಿಂದಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ಗಂಟೆಗಳಲ್ಲಿ ಇರುವ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ‘ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ” ಎಂದು ಒತ್ತಿ ಹೇಳಿರುವ ದೆಹಲಿ ಹೈಕೋರ್ಟ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದೆ.

‘ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಎಂದು ಆಮ್ಲಜನಕ ಪೂರೈಕೆಯ ಕುರಿತು ಕೇಂದ್ರವನ್ನು ಕೋರ್ಟ್ ಎಚ್ಚರಿಸಿದೆ. ದೆಹಲಿಯ ಆಮ್ಲಜನಕ ಬಿಕ್ಕಟ್ಟನ್ನು ನಿಭಾಯಿಸಿದ ಬಗ್ಗೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರವನ್ನು ಕಟುಪದಗಳಲ್ಲಿ ಟೀಕಿಸಿದೆ.

ದೆಹಲಿ ಹೈಕೋರ್ಟ್‌ನ ತೀಕ್ಷ್ಣವಾದ ಪ್ರತಿಕ್ರಿಯೆಗಳು ಇವು:

1. ನಾಗರಿಕನು ಸರ್ಕಾರ/ಪ್ರಭುತ್ವದ ಮೇಲೆ ಮಾತ್ರ ಆಶ್ರಯಿತನಾಗಿರುತ್ತಾನೆ.. ಅದು ಸರ್ಕಾರದ ಜವಾಬ್ದಾರಿ. ಆಮ್ಲಜನಕಕ್ಕಾಗಿ ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಅದು ನಿಮ್ಮ (ಕೇಂದ್ರ ಆರೋಗ್ಯ ಇಲಾಖೆ) ಕೆಲಸ.

2. ನಿತ್ಯದ ಕಠಿಣ ವಾಸ್ತವ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಮರೆತುಬಿಡುತ್ತದೆ? ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ. ನಿಮ್ಮ ಸ್ವಂತ ಸುಖಕ್ಕಾಗಿ ಸಮಯ ತೆಗೆದುಕೊಳ್ಳುತ್ತೀರಿ ಮತ್ತು ಜನರು ಸಾಯುತ್ತಾರೆ.

3. ಜನರು ಸಾಯುವಾಗ ನೀವು ಕೈಗಾರಿಕೆಗಳ ಬಗ್ಗೆ ಕಾಳಜಿ ವಹಿಸುತ್ತೀರಿ. ಇದು ನೈಸರ್ಗಿಕ ತುರ್ತು. ಆದರೆ ಮಾನವ ಜೀವನವು ಸರ್ಕಾರಕ್ಕೆ ಅಪ್ರಸ್ತುತವಾಗುತ್ತದೆ.

4. ಇಂದು ಆಸ್ಪತ್ರೆಗಳು ಒಣಗಿವೆ. (ಆಮ್ಲಜನಕವಿಲ್ಲದೇ ಉಸಿರುಗಟ್ಟಿವೆ) ಇದು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ. ನಮ್ಮ ಕಾಳಜಿ ಕೇವಲ ದೆಹಲಿಯಲ್ಲ. ಭಾರತದಾದ್ಯಂತ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರವು ಏನು ಮಾಡುತ್ತಿದೆ ಎಂದು ತಿಳಿಯಲು ನಾವು ಬಯಸುತ್ತೇವೆ.

5. ಆಮ್ಲಜನಕದ ಅವಶ್ಯಕತೆ ಹಲವಾರು ಪಟ್ಟು ಹೆಚ್ಚಾಗಿದೆ. ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರದ ಜವಾಬ್ದಾರಿಯಾಗಿದೆ. ಜೀವನ ವಿಧಾನದ ಮೂಲಭೂತ ಹಕ್ಕನ್ನು ರಕ್ಷಿಸಲು ಯಾವುದೇ ವಿಧಾನದಿಂದಲಾದರೂ ನಾವು ಸರ್ಕಾರವನ್ನು ನಿರ್ದೇಶಿಸುತ್ತೇವೆ.

6. ನಿನ್ನೆ (ಮಂಗಳವಾರ) ನಾವು ನಿಮಗೆ (ಕೇಂದ್ರ ಆರೋಗ್ಯ ಸಚಿವಾಲಯ) ಪೆಟ್ರೋಲಿಯಂ ಮತ್ತು ಉಕ್ಕಿನ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ನಿಲ್ಲಿಸುವಂತೆ ಆದೇಶಿಸಿದ್ದೇವೆ. ನೀವು ಏನು ಮಾಡಿದ್ದೀರಿ? ಫಲಿತಾಂಶ ಏನು …? ನಾವು ಫೈಲ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. (ಇಲಾಖೆಯು ಈ ವಿಷಯದಲ್ಲಿ “ಫೈಲ್‌ಗಳು ಮೂವ್ ಆಗುತ್ತಿವೆ” ಎಂದು ಹೇಳಿದಾಗ).

7. ಟಾಟಾ ಕಂಪನಿ ತಮ್ಮ ಉಕ್ಕಿನ ಸ್ಥಾವರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವನ್ನು ಬೇರೆಡೆಗೆ ತಿರುಗಿಸಲು ಸಾಧ್ಯವಾದರೆ ಇತರರಿಗೆ ಏಕೆ ಸಾಧ್ಯವಿಲ್ಲ? ಮಾನವೀಯತೆಯ ಪ್ರಜ್ಞೆ ಇಲ್ಲವೇ ಅಥವಾ ಏನು? ಅವುಗಳ ಬಳಕೆಗಾಗಿ ಆಮ್ಲಜನಕವನ್ನು ಉತ್ಪಾದಿಸುವ ಉಕ್ಕು ಮತ್ತು ಪೆಟ್ರೋಲಿಯಂ ಕೈಗಾರಿಕೆಗಳಿಂದ ಸರ್ಕಾರವು ಆಮ್ಲಜನಕವನ್ನು ಆರೋಗ್ಯ ಕ್ಷೇತ್ರಕ್ಕೆ ತಿರುಗಿಸಬಹುದು.

8. ಕೈಗಾರಿಕೆಗಳು ಸಹಾಯ ಮಾಡಲು ಸಿದ್ಧವಿವೆ. ಇದು ರಾಷ್ಟ್ರೀಯ ತುರ್ತು. ಆಮ್ಲಜನಕವನ್ನು ತಿರುಗಿಸಲು ನೀವು ಆದೇಶವನ್ನು ರವಾನಿಸಿದರೆ, ಯಾವುದೇ ಕೈಗಾರಿಕೆಗಳು ಇಲ್ಲ ಎಂದು ಹೇಳುವುದಿಲ್ಲ. ಮತ್ತು ನೀವು ನಿಮ್ಮದೇ ಆದ ಸರ್ಕಾರಿ-ಪೆಟ್ರೋಲಿಯಂ ಕಂಪನಿಗಳನ್ನು ಹೊಂದಿದ್ದೀರಿ. ನಾವು ನಿನ್ನೆ ಹಲವಾರು ಆದೇಶಗಳನ್ನು ನೀಡಿದ್ದೇವೆ. ಇಡೀ ದಿನ ನೀವು ಏನು ಮಾಡಿದ್ದೀರಿ?

9. ಸರ್ಕಾರ ವಾಸ್ತವಕ್ಕೆ ಏಕೆ ಎಚ್ಚರಗೊಳ್ಳುತ್ತಿಲ್ಲ. ನಮಗೆ ಆಘಾತವಾಗಿದೆ. ಏನಾಗುತ್ತಿದೆ? ಆಸ್ಪತ್ರೆಗಳಿಗೆ ಈ ಹಂತದಲ್ಲಿ ಆಮ್ಲಜನಕದ ನಿಲುಗಡೆ … ನರಕದರ್ಶನವಾಗುತ್ತಿದೆ…

10. ದಯವಿಟ್ಟು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಿ. ಸಾವಿರಾರು ಜೀವಗಳು ಅಪಾಯದಲ್ಲಿವೆ. ಸಾವಿರಾರು ಜನರು ಸಾಯುವುದನ್ನು ನೀವು ನೋಡಲು ಬಯಸುವಿರಾ?


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...