Homeಮುಖಪುಟಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ...

ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ದೆಹಲಿಯ ಹಲವು ಆಸ್ಪತ್ರೆಗಳು ಆಮ್ಲಜನಕದ ಕೊರತೆಯಿಂದಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ಗಂಟೆಗಳಲ್ಲಿ ಇರುವ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ‘ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ” ಎಂದು ಒತ್ತಿ ಹೇಳಿರುವ ದೆಹಲಿ ಹೈಕೋರ್ಟ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದೆ.

‘ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಎಂದು ಆಮ್ಲಜನಕ ಪೂರೈಕೆಯ ಕುರಿತು ಕೇಂದ್ರವನ್ನು ಕೋರ್ಟ್ ಎಚ್ಚರಿಸಿದೆ. ದೆಹಲಿಯ ಆಮ್ಲಜನಕ ಬಿಕ್ಕಟ್ಟನ್ನು ನಿಭಾಯಿಸಿದ ಬಗ್ಗೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರವನ್ನು ಕಟುಪದಗಳಲ್ಲಿ ಟೀಕಿಸಿದೆ.

ದೆಹಲಿ ಹೈಕೋರ್ಟ್‌ನ ತೀಕ್ಷ್ಣವಾದ ಪ್ರತಿಕ್ರಿಯೆಗಳು ಇವು:

1. ನಾಗರಿಕನು ಸರ್ಕಾರ/ಪ್ರಭುತ್ವದ ಮೇಲೆ ಮಾತ್ರ ಆಶ್ರಯಿತನಾಗಿರುತ್ತಾನೆ.. ಅದು ಸರ್ಕಾರದ ಜವಾಬ್ದಾರಿ. ಆಮ್ಲಜನಕಕ್ಕಾಗಿ ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಅದು ನಿಮ್ಮ (ಕೇಂದ್ರ ಆರೋಗ್ಯ ಇಲಾಖೆ) ಕೆಲಸ.

2. ನಿತ್ಯದ ಕಠಿಣ ವಾಸ್ತವ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಮರೆತುಬಿಡುತ್ತದೆ? ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ. ನಿಮ್ಮ ಸ್ವಂತ ಸುಖಕ್ಕಾಗಿ ಸಮಯ ತೆಗೆದುಕೊಳ್ಳುತ್ತೀರಿ ಮತ್ತು ಜನರು ಸಾಯುತ್ತಾರೆ.

3. ಜನರು ಸಾಯುವಾಗ ನೀವು ಕೈಗಾರಿಕೆಗಳ ಬಗ್ಗೆ ಕಾಳಜಿ ವಹಿಸುತ್ತೀರಿ. ಇದು ನೈಸರ್ಗಿಕ ತುರ್ತು. ಆದರೆ ಮಾನವ ಜೀವನವು ಸರ್ಕಾರಕ್ಕೆ ಅಪ್ರಸ್ತುತವಾಗುತ್ತದೆ.

4. ಇಂದು ಆಸ್ಪತ್ರೆಗಳು ಒಣಗಿವೆ. (ಆಮ್ಲಜನಕವಿಲ್ಲದೇ ಉಸಿರುಗಟ್ಟಿವೆ) ಇದು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ. ನಮ್ಮ ಕಾಳಜಿ ಕೇವಲ ದೆಹಲಿಯಲ್ಲ. ಭಾರತದಾದ್ಯಂತ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರವು ಏನು ಮಾಡುತ್ತಿದೆ ಎಂದು ತಿಳಿಯಲು ನಾವು ಬಯಸುತ್ತೇವೆ.

5. ಆಮ್ಲಜನಕದ ಅವಶ್ಯಕತೆ ಹಲವಾರು ಪಟ್ಟು ಹೆಚ್ಚಾಗಿದೆ. ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರದ ಜವಾಬ್ದಾರಿಯಾಗಿದೆ. ಜೀವನ ವಿಧಾನದ ಮೂಲಭೂತ ಹಕ್ಕನ್ನು ರಕ್ಷಿಸಲು ಯಾವುದೇ ವಿಧಾನದಿಂದಲಾದರೂ ನಾವು ಸರ್ಕಾರವನ್ನು ನಿರ್ದೇಶಿಸುತ್ತೇವೆ.

6. ನಿನ್ನೆ (ಮಂಗಳವಾರ) ನಾವು ನಿಮಗೆ (ಕೇಂದ್ರ ಆರೋಗ್ಯ ಸಚಿವಾಲಯ) ಪೆಟ್ರೋಲಿಯಂ ಮತ್ತು ಉಕ್ಕಿನ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ನಿಲ್ಲಿಸುವಂತೆ ಆದೇಶಿಸಿದ್ದೇವೆ. ನೀವು ಏನು ಮಾಡಿದ್ದೀರಿ? ಫಲಿತಾಂಶ ಏನು …? ನಾವು ಫೈಲ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. (ಇಲಾಖೆಯು ಈ ವಿಷಯದಲ್ಲಿ “ಫೈಲ್‌ಗಳು ಮೂವ್ ಆಗುತ್ತಿವೆ” ಎಂದು ಹೇಳಿದಾಗ).

7. ಟಾಟಾ ಕಂಪನಿ ತಮ್ಮ ಉಕ್ಕಿನ ಸ್ಥಾವರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವನ್ನು ಬೇರೆಡೆಗೆ ತಿರುಗಿಸಲು ಸಾಧ್ಯವಾದರೆ ಇತರರಿಗೆ ಏಕೆ ಸಾಧ್ಯವಿಲ್ಲ? ಮಾನವೀಯತೆಯ ಪ್ರಜ್ಞೆ ಇಲ್ಲವೇ ಅಥವಾ ಏನು? ಅವುಗಳ ಬಳಕೆಗಾಗಿ ಆಮ್ಲಜನಕವನ್ನು ಉತ್ಪಾದಿಸುವ ಉಕ್ಕು ಮತ್ತು ಪೆಟ್ರೋಲಿಯಂ ಕೈಗಾರಿಕೆಗಳಿಂದ ಸರ್ಕಾರವು ಆಮ್ಲಜನಕವನ್ನು ಆರೋಗ್ಯ ಕ್ಷೇತ್ರಕ್ಕೆ ತಿರುಗಿಸಬಹುದು.

8. ಕೈಗಾರಿಕೆಗಳು ಸಹಾಯ ಮಾಡಲು ಸಿದ್ಧವಿವೆ. ಇದು ರಾಷ್ಟ್ರೀಯ ತುರ್ತು. ಆಮ್ಲಜನಕವನ್ನು ತಿರುಗಿಸಲು ನೀವು ಆದೇಶವನ್ನು ರವಾನಿಸಿದರೆ, ಯಾವುದೇ ಕೈಗಾರಿಕೆಗಳು ಇಲ್ಲ ಎಂದು ಹೇಳುವುದಿಲ್ಲ. ಮತ್ತು ನೀವು ನಿಮ್ಮದೇ ಆದ ಸರ್ಕಾರಿ-ಪೆಟ್ರೋಲಿಯಂ ಕಂಪನಿಗಳನ್ನು ಹೊಂದಿದ್ದೀರಿ. ನಾವು ನಿನ್ನೆ ಹಲವಾರು ಆದೇಶಗಳನ್ನು ನೀಡಿದ್ದೇವೆ. ಇಡೀ ದಿನ ನೀವು ಏನು ಮಾಡಿದ್ದೀರಿ?

9. ಸರ್ಕಾರ ವಾಸ್ತವಕ್ಕೆ ಏಕೆ ಎಚ್ಚರಗೊಳ್ಳುತ್ತಿಲ್ಲ. ನಮಗೆ ಆಘಾತವಾಗಿದೆ. ಏನಾಗುತ್ತಿದೆ? ಆಸ್ಪತ್ರೆಗಳಿಗೆ ಈ ಹಂತದಲ್ಲಿ ಆಮ್ಲಜನಕದ ನಿಲುಗಡೆ … ನರಕದರ್ಶನವಾಗುತ್ತಿದೆ…

10. ದಯವಿಟ್ಟು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಿ. ಸಾವಿರಾರು ಜೀವಗಳು ಅಪಾಯದಲ್ಲಿವೆ. ಸಾವಿರಾರು ಜನರು ಸಾಯುವುದನ್ನು ನೀವು ನೋಡಲು ಬಯಸುವಿರಾ?


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...