Homeಮುಖಪುಟಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ...

ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ದೆಹಲಿಯ ಹಲವು ಆಸ್ಪತ್ರೆಗಳು ಆಮ್ಲಜನಕದ ಕೊರತೆಯಿಂದಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ಗಂಟೆಗಳಲ್ಲಿ ಇರುವ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ‘ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ” ಎಂದು ಒತ್ತಿ ಹೇಳಿರುವ ದೆಹಲಿ ಹೈಕೋರ್ಟ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದೆ.

‘ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಎಂದು ಆಮ್ಲಜನಕ ಪೂರೈಕೆಯ ಕುರಿತು ಕೇಂದ್ರವನ್ನು ಕೋರ್ಟ್ ಎಚ್ಚರಿಸಿದೆ. ದೆಹಲಿಯ ಆಮ್ಲಜನಕ ಬಿಕ್ಕಟ್ಟನ್ನು ನಿಭಾಯಿಸಿದ ಬಗ್ಗೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರವನ್ನು ಕಟುಪದಗಳಲ್ಲಿ ಟೀಕಿಸಿದೆ.

ದೆಹಲಿ ಹೈಕೋರ್ಟ್‌ನ ತೀಕ್ಷ್ಣವಾದ ಪ್ರತಿಕ್ರಿಯೆಗಳು ಇವು:

1. ನಾಗರಿಕನು ಸರ್ಕಾರ/ಪ್ರಭುತ್ವದ ಮೇಲೆ ಮಾತ್ರ ಆಶ್ರಯಿತನಾಗಿರುತ್ತಾನೆ.. ಅದು ಸರ್ಕಾರದ ಜವಾಬ್ದಾರಿ. ಆಮ್ಲಜನಕಕ್ಕಾಗಿ ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಅದು ನಿಮ್ಮ (ಕೇಂದ್ರ ಆರೋಗ್ಯ ಇಲಾಖೆ) ಕೆಲಸ.

2. ನಿತ್ಯದ ಕಠಿಣ ವಾಸ್ತವ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಮರೆತುಬಿಡುತ್ತದೆ? ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ. ನಿಮ್ಮ ಸ್ವಂತ ಸುಖಕ್ಕಾಗಿ ಸಮಯ ತೆಗೆದುಕೊಳ್ಳುತ್ತೀರಿ ಮತ್ತು ಜನರು ಸಾಯುತ್ತಾರೆ.

3. ಜನರು ಸಾಯುವಾಗ ನೀವು ಕೈಗಾರಿಕೆಗಳ ಬಗ್ಗೆ ಕಾಳಜಿ ವಹಿಸುತ್ತೀರಿ. ಇದು ನೈಸರ್ಗಿಕ ತುರ್ತು. ಆದರೆ ಮಾನವ ಜೀವನವು ಸರ್ಕಾರಕ್ಕೆ ಅಪ್ರಸ್ತುತವಾಗುತ್ತದೆ.

4. ಇಂದು ಆಸ್ಪತ್ರೆಗಳು ಒಣಗಿವೆ. (ಆಮ್ಲಜನಕವಿಲ್ಲದೇ ಉಸಿರುಗಟ್ಟಿವೆ) ಇದು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ. ನಮ್ಮ ಕಾಳಜಿ ಕೇವಲ ದೆಹಲಿಯಲ್ಲ. ಭಾರತದಾದ್ಯಂತ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರವು ಏನು ಮಾಡುತ್ತಿದೆ ಎಂದು ತಿಳಿಯಲು ನಾವು ಬಯಸುತ್ತೇವೆ.

5. ಆಮ್ಲಜನಕದ ಅವಶ್ಯಕತೆ ಹಲವಾರು ಪಟ್ಟು ಹೆಚ್ಚಾಗಿದೆ. ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರದ ಜವಾಬ್ದಾರಿಯಾಗಿದೆ. ಜೀವನ ವಿಧಾನದ ಮೂಲಭೂತ ಹಕ್ಕನ್ನು ರಕ್ಷಿಸಲು ಯಾವುದೇ ವಿಧಾನದಿಂದಲಾದರೂ ನಾವು ಸರ್ಕಾರವನ್ನು ನಿರ್ದೇಶಿಸುತ್ತೇವೆ.

6. ನಿನ್ನೆ (ಮಂಗಳವಾರ) ನಾವು ನಿಮಗೆ (ಕೇಂದ್ರ ಆರೋಗ್ಯ ಸಚಿವಾಲಯ) ಪೆಟ್ರೋಲಿಯಂ ಮತ್ತು ಉಕ್ಕಿನ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ನಿಲ್ಲಿಸುವಂತೆ ಆದೇಶಿಸಿದ್ದೇವೆ. ನೀವು ಏನು ಮಾಡಿದ್ದೀರಿ? ಫಲಿತಾಂಶ ಏನು …? ನಾವು ಫೈಲ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. (ಇಲಾಖೆಯು ಈ ವಿಷಯದಲ್ಲಿ “ಫೈಲ್‌ಗಳು ಮೂವ್ ಆಗುತ್ತಿವೆ” ಎಂದು ಹೇಳಿದಾಗ).

7. ಟಾಟಾ ಕಂಪನಿ ತಮ್ಮ ಉಕ್ಕಿನ ಸ್ಥಾವರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವನ್ನು ಬೇರೆಡೆಗೆ ತಿರುಗಿಸಲು ಸಾಧ್ಯವಾದರೆ ಇತರರಿಗೆ ಏಕೆ ಸಾಧ್ಯವಿಲ್ಲ? ಮಾನವೀಯತೆಯ ಪ್ರಜ್ಞೆ ಇಲ್ಲವೇ ಅಥವಾ ಏನು? ಅವುಗಳ ಬಳಕೆಗಾಗಿ ಆಮ್ಲಜನಕವನ್ನು ಉತ್ಪಾದಿಸುವ ಉಕ್ಕು ಮತ್ತು ಪೆಟ್ರೋಲಿಯಂ ಕೈಗಾರಿಕೆಗಳಿಂದ ಸರ್ಕಾರವು ಆಮ್ಲಜನಕವನ್ನು ಆರೋಗ್ಯ ಕ್ಷೇತ್ರಕ್ಕೆ ತಿರುಗಿಸಬಹುದು.

8. ಕೈಗಾರಿಕೆಗಳು ಸಹಾಯ ಮಾಡಲು ಸಿದ್ಧವಿವೆ. ಇದು ರಾಷ್ಟ್ರೀಯ ತುರ್ತು. ಆಮ್ಲಜನಕವನ್ನು ತಿರುಗಿಸಲು ನೀವು ಆದೇಶವನ್ನು ರವಾನಿಸಿದರೆ, ಯಾವುದೇ ಕೈಗಾರಿಕೆಗಳು ಇಲ್ಲ ಎಂದು ಹೇಳುವುದಿಲ್ಲ. ಮತ್ತು ನೀವು ನಿಮ್ಮದೇ ಆದ ಸರ್ಕಾರಿ-ಪೆಟ್ರೋಲಿಯಂ ಕಂಪನಿಗಳನ್ನು ಹೊಂದಿದ್ದೀರಿ. ನಾವು ನಿನ್ನೆ ಹಲವಾರು ಆದೇಶಗಳನ್ನು ನೀಡಿದ್ದೇವೆ. ಇಡೀ ದಿನ ನೀವು ಏನು ಮಾಡಿದ್ದೀರಿ?

9. ಸರ್ಕಾರ ವಾಸ್ತವಕ್ಕೆ ಏಕೆ ಎಚ್ಚರಗೊಳ್ಳುತ್ತಿಲ್ಲ. ನಮಗೆ ಆಘಾತವಾಗಿದೆ. ಏನಾಗುತ್ತಿದೆ? ಆಸ್ಪತ್ರೆಗಳಿಗೆ ಈ ಹಂತದಲ್ಲಿ ಆಮ್ಲಜನಕದ ನಿಲುಗಡೆ … ನರಕದರ್ಶನವಾಗುತ್ತಿದೆ…

10. ದಯವಿಟ್ಟು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಿ. ಸಾವಿರಾರು ಜೀವಗಳು ಅಪಾಯದಲ್ಲಿವೆ. ಸಾವಿರಾರು ಜನರು ಸಾಯುವುದನ್ನು ನೀವು ನೋಡಲು ಬಯಸುವಿರಾ?


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...