Homeಮುಖಪುಟಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ...

ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ದೆಹಲಿಯ ಹಲವು ಆಸ್ಪತ್ರೆಗಳು ಆಮ್ಲಜನಕದ ಕೊರತೆಯಿಂದಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ಗಂಟೆಗಳಲ್ಲಿ ಇರುವ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ‘ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ” ಎಂದು ಒತ್ತಿ ಹೇಳಿರುವ ದೆಹಲಿ ಹೈಕೋರ್ಟ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದೆ.

‘ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಎಂದು ಆಮ್ಲಜನಕ ಪೂರೈಕೆಯ ಕುರಿತು ಕೇಂದ್ರವನ್ನು ಕೋರ್ಟ್ ಎಚ್ಚರಿಸಿದೆ. ದೆಹಲಿಯ ಆಮ್ಲಜನಕ ಬಿಕ್ಕಟ್ಟನ್ನು ನಿಭಾಯಿಸಿದ ಬಗ್ಗೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರವನ್ನು ಕಟುಪದಗಳಲ್ಲಿ ಟೀಕಿಸಿದೆ.

ದೆಹಲಿ ಹೈಕೋರ್ಟ್‌ನ ತೀಕ್ಷ್ಣವಾದ ಪ್ರತಿಕ್ರಿಯೆಗಳು ಇವು:

1. ನಾಗರಿಕನು ಸರ್ಕಾರ/ಪ್ರಭುತ್ವದ ಮೇಲೆ ಮಾತ್ರ ಆಶ್ರಯಿತನಾಗಿರುತ್ತಾನೆ.. ಅದು ಸರ್ಕಾರದ ಜವಾಬ್ದಾರಿ. ಆಮ್ಲಜನಕಕ್ಕಾಗಿ ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಅದು ನಿಮ್ಮ (ಕೇಂದ್ರ ಆರೋಗ್ಯ ಇಲಾಖೆ) ಕೆಲಸ.

2. ನಿತ್ಯದ ಕಠಿಣ ವಾಸ್ತವ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಮರೆತುಬಿಡುತ್ತದೆ? ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ. ನಿಮ್ಮ ಸ್ವಂತ ಸುಖಕ್ಕಾಗಿ ಸಮಯ ತೆಗೆದುಕೊಳ್ಳುತ್ತೀರಿ ಮತ್ತು ಜನರು ಸಾಯುತ್ತಾರೆ.

3. ಜನರು ಸಾಯುವಾಗ ನೀವು ಕೈಗಾರಿಕೆಗಳ ಬಗ್ಗೆ ಕಾಳಜಿ ವಹಿಸುತ್ತೀರಿ. ಇದು ನೈಸರ್ಗಿಕ ತುರ್ತು. ಆದರೆ ಮಾನವ ಜೀವನವು ಸರ್ಕಾರಕ್ಕೆ ಅಪ್ರಸ್ತುತವಾಗುತ್ತದೆ.

4. ಇಂದು ಆಸ್ಪತ್ರೆಗಳು ಒಣಗಿವೆ. (ಆಮ್ಲಜನಕವಿಲ್ಲದೇ ಉಸಿರುಗಟ್ಟಿವೆ) ಇದು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ. ನಮ್ಮ ಕಾಳಜಿ ಕೇವಲ ದೆಹಲಿಯಲ್ಲ. ಭಾರತದಾದ್ಯಂತ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರವು ಏನು ಮಾಡುತ್ತಿದೆ ಎಂದು ತಿಳಿಯಲು ನಾವು ಬಯಸುತ್ತೇವೆ.

5. ಆಮ್ಲಜನಕದ ಅವಶ್ಯಕತೆ ಹಲವಾರು ಪಟ್ಟು ಹೆಚ್ಚಾಗಿದೆ. ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರದ ಜವಾಬ್ದಾರಿಯಾಗಿದೆ. ಜೀವನ ವಿಧಾನದ ಮೂಲಭೂತ ಹಕ್ಕನ್ನು ರಕ್ಷಿಸಲು ಯಾವುದೇ ವಿಧಾನದಿಂದಲಾದರೂ ನಾವು ಸರ್ಕಾರವನ್ನು ನಿರ್ದೇಶಿಸುತ್ತೇವೆ.

6. ನಿನ್ನೆ (ಮಂಗಳವಾರ) ನಾವು ನಿಮಗೆ (ಕೇಂದ್ರ ಆರೋಗ್ಯ ಸಚಿವಾಲಯ) ಪೆಟ್ರೋಲಿಯಂ ಮತ್ತು ಉಕ್ಕಿನ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ನಿಲ್ಲಿಸುವಂತೆ ಆದೇಶಿಸಿದ್ದೇವೆ. ನೀವು ಏನು ಮಾಡಿದ್ದೀರಿ? ಫಲಿತಾಂಶ ಏನು …? ನಾವು ಫೈಲ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. (ಇಲಾಖೆಯು ಈ ವಿಷಯದಲ್ಲಿ “ಫೈಲ್‌ಗಳು ಮೂವ್ ಆಗುತ್ತಿವೆ” ಎಂದು ಹೇಳಿದಾಗ).

7. ಟಾಟಾ ಕಂಪನಿ ತಮ್ಮ ಉಕ್ಕಿನ ಸ್ಥಾವರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವನ್ನು ಬೇರೆಡೆಗೆ ತಿರುಗಿಸಲು ಸಾಧ್ಯವಾದರೆ ಇತರರಿಗೆ ಏಕೆ ಸಾಧ್ಯವಿಲ್ಲ? ಮಾನವೀಯತೆಯ ಪ್ರಜ್ಞೆ ಇಲ್ಲವೇ ಅಥವಾ ಏನು? ಅವುಗಳ ಬಳಕೆಗಾಗಿ ಆಮ್ಲಜನಕವನ್ನು ಉತ್ಪಾದಿಸುವ ಉಕ್ಕು ಮತ್ತು ಪೆಟ್ರೋಲಿಯಂ ಕೈಗಾರಿಕೆಗಳಿಂದ ಸರ್ಕಾರವು ಆಮ್ಲಜನಕವನ್ನು ಆರೋಗ್ಯ ಕ್ಷೇತ್ರಕ್ಕೆ ತಿರುಗಿಸಬಹುದು.

8. ಕೈಗಾರಿಕೆಗಳು ಸಹಾಯ ಮಾಡಲು ಸಿದ್ಧವಿವೆ. ಇದು ರಾಷ್ಟ್ರೀಯ ತುರ್ತು. ಆಮ್ಲಜನಕವನ್ನು ತಿರುಗಿಸಲು ನೀವು ಆದೇಶವನ್ನು ರವಾನಿಸಿದರೆ, ಯಾವುದೇ ಕೈಗಾರಿಕೆಗಳು ಇಲ್ಲ ಎಂದು ಹೇಳುವುದಿಲ್ಲ. ಮತ್ತು ನೀವು ನಿಮ್ಮದೇ ಆದ ಸರ್ಕಾರಿ-ಪೆಟ್ರೋಲಿಯಂ ಕಂಪನಿಗಳನ್ನು ಹೊಂದಿದ್ದೀರಿ. ನಾವು ನಿನ್ನೆ ಹಲವಾರು ಆದೇಶಗಳನ್ನು ನೀಡಿದ್ದೇವೆ. ಇಡೀ ದಿನ ನೀವು ಏನು ಮಾಡಿದ್ದೀರಿ?

9. ಸರ್ಕಾರ ವಾಸ್ತವಕ್ಕೆ ಏಕೆ ಎಚ್ಚರಗೊಳ್ಳುತ್ತಿಲ್ಲ. ನಮಗೆ ಆಘಾತವಾಗಿದೆ. ಏನಾಗುತ್ತಿದೆ? ಆಸ್ಪತ್ರೆಗಳಿಗೆ ಈ ಹಂತದಲ್ಲಿ ಆಮ್ಲಜನಕದ ನಿಲುಗಡೆ … ನರಕದರ್ಶನವಾಗುತ್ತಿದೆ…

10. ದಯವಿಟ್ಟು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಿ. ಸಾವಿರಾರು ಜೀವಗಳು ಅಪಾಯದಲ್ಲಿವೆ. ಸಾವಿರಾರು ಜನರು ಸಾಯುವುದನ್ನು ನೀವು ನೋಡಲು ಬಯಸುವಿರಾ?


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...