Homeಮುಖಪುಟಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ...

ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ದೆಹಲಿಯ ಹಲವು ಆಸ್ಪತ್ರೆಗಳು ಆಮ್ಲಜನಕದ ಕೊರತೆಯಿಂದಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ಗಂಟೆಗಳಲ್ಲಿ ಇರುವ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ‘ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ” ಎಂದು ಒತ್ತಿ ಹೇಳಿರುವ ದೆಹಲಿ ಹೈಕೋರ್ಟ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದೆ.

‘ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಎಂದು ಆಮ್ಲಜನಕ ಪೂರೈಕೆಯ ಕುರಿತು ಕೇಂದ್ರವನ್ನು ಕೋರ್ಟ್ ಎಚ್ಚರಿಸಿದೆ. ದೆಹಲಿಯ ಆಮ್ಲಜನಕ ಬಿಕ್ಕಟ್ಟನ್ನು ನಿಭಾಯಿಸಿದ ಬಗ್ಗೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರವನ್ನು ಕಟುಪದಗಳಲ್ಲಿ ಟೀಕಿಸಿದೆ.

ದೆಹಲಿ ಹೈಕೋರ್ಟ್‌ನ ತೀಕ್ಷ್ಣವಾದ ಪ್ರತಿಕ್ರಿಯೆಗಳು ಇವು:

1. ನಾಗರಿಕನು ಸರ್ಕಾರ/ಪ್ರಭುತ್ವದ ಮೇಲೆ ಮಾತ್ರ ಆಶ್ರಯಿತನಾಗಿರುತ್ತಾನೆ.. ಅದು ಸರ್ಕಾರದ ಜವಾಬ್ದಾರಿ. ಆಮ್ಲಜನಕಕ್ಕಾಗಿ ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಅದು ನಿಮ್ಮ (ಕೇಂದ್ರ ಆರೋಗ್ಯ ಇಲಾಖೆ) ಕೆಲಸ.

2. ನಿತ್ಯದ ಕಠಿಣ ವಾಸ್ತವ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಮರೆತುಬಿಡುತ್ತದೆ? ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ. ನಿಮ್ಮ ಸ್ವಂತ ಸುಖಕ್ಕಾಗಿ ಸಮಯ ತೆಗೆದುಕೊಳ್ಳುತ್ತೀರಿ ಮತ್ತು ಜನರು ಸಾಯುತ್ತಾರೆ.

3. ಜನರು ಸಾಯುವಾಗ ನೀವು ಕೈಗಾರಿಕೆಗಳ ಬಗ್ಗೆ ಕಾಳಜಿ ವಹಿಸುತ್ತೀರಿ. ಇದು ನೈಸರ್ಗಿಕ ತುರ್ತು. ಆದರೆ ಮಾನವ ಜೀವನವು ಸರ್ಕಾರಕ್ಕೆ ಅಪ್ರಸ್ತುತವಾಗುತ್ತದೆ.

4. ಇಂದು ಆಸ್ಪತ್ರೆಗಳು ಒಣಗಿವೆ. (ಆಮ್ಲಜನಕವಿಲ್ಲದೇ ಉಸಿರುಗಟ್ಟಿವೆ) ಇದು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ. ನಮ್ಮ ಕಾಳಜಿ ಕೇವಲ ದೆಹಲಿಯಲ್ಲ. ಭಾರತದಾದ್ಯಂತ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರವು ಏನು ಮಾಡುತ್ತಿದೆ ಎಂದು ತಿಳಿಯಲು ನಾವು ಬಯಸುತ್ತೇವೆ.

5. ಆಮ್ಲಜನಕದ ಅವಶ್ಯಕತೆ ಹಲವಾರು ಪಟ್ಟು ಹೆಚ್ಚಾಗಿದೆ. ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರದ ಜವಾಬ್ದಾರಿಯಾಗಿದೆ. ಜೀವನ ವಿಧಾನದ ಮೂಲಭೂತ ಹಕ್ಕನ್ನು ರಕ್ಷಿಸಲು ಯಾವುದೇ ವಿಧಾನದಿಂದಲಾದರೂ ನಾವು ಸರ್ಕಾರವನ್ನು ನಿರ್ದೇಶಿಸುತ್ತೇವೆ.

6. ನಿನ್ನೆ (ಮಂಗಳವಾರ) ನಾವು ನಿಮಗೆ (ಕೇಂದ್ರ ಆರೋಗ್ಯ ಸಚಿವಾಲಯ) ಪೆಟ್ರೋಲಿಯಂ ಮತ್ತು ಉಕ್ಕಿನ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ನಿಲ್ಲಿಸುವಂತೆ ಆದೇಶಿಸಿದ್ದೇವೆ. ನೀವು ಏನು ಮಾಡಿದ್ದೀರಿ? ಫಲಿತಾಂಶ ಏನು …? ನಾವು ಫೈಲ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. (ಇಲಾಖೆಯು ಈ ವಿಷಯದಲ್ಲಿ “ಫೈಲ್‌ಗಳು ಮೂವ್ ಆಗುತ್ತಿವೆ” ಎಂದು ಹೇಳಿದಾಗ).

7. ಟಾಟಾ ಕಂಪನಿ ತಮ್ಮ ಉಕ್ಕಿನ ಸ್ಥಾವರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವನ್ನು ಬೇರೆಡೆಗೆ ತಿರುಗಿಸಲು ಸಾಧ್ಯವಾದರೆ ಇತರರಿಗೆ ಏಕೆ ಸಾಧ್ಯವಿಲ್ಲ? ಮಾನವೀಯತೆಯ ಪ್ರಜ್ಞೆ ಇಲ್ಲವೇ ಅಥವಾ ಏನು? ಅವುಗಳ ಬಳಕೆಗಾಗಿ ಆಮ್ಲಜನಕವನ್ನು ಉತ್ಪಾದಿಸುವ ಉಕ್ಕು ಮತ್ತು ಪೆಟ್ರೋಲಿಯಂ ಕೈಗಾರಿಕೆಗಳಿಂದ ಸರ್ಕಾರವು ಆಮ್ಲಜನಕವನ್ನು ಆರೋಗ್ಯ ಕ್ಷೇತ್ರಕ್ಕೆ ತಿರುಗಿಸಬಹುದು.

8. ಕೈಗಾರಿಕೆಗಳು ಸಹಾಯ ಮಾಡಲು ಸಿದ್ಧವಿವೆ. ಇದು ರಾಷ್ಟ್ರೀಯ ತುರ್ತು. ಆಮ್ಲಜನಕವನ್ನು ತಿರುಗಿಸಲು ನೀವು ಆದೇಶವನ್ನು ರವಾನಿಸಿದರೆ, ಯಾವುದೇ ಕೈಗಾರಿಕೆಗಳು ಇಲ್ಲ ಎಂದು ಹೇಳುವುದಿಲ್ಲ. ಮತ್ತು ನೀವು ನಿಮ್ಮದೇ ಆದ ಸರ್ಕಾರಿ-ಪೆಟ್ರೋಲಿಯಂ ಕಂಪನಿಗಳನ್ನು ಹೊಂದಿದ್ದೀರಿ. ನಾವು ನಿನ್ನೆ ಹಲವಾರು ಆದೇಶಗಳನ್ನು ನೀಡಿದ್ದೇವೆ. ಇಡೀ ದಿನ ನೀವು ಏನು ಮಾಡಿದ್ದೀರಿ?

9. ಸರ್ಕಾರ ವಾಸ್ತವಕ್ಕೆ ಏಕೆ ಎಚ್ಚರಗೊಳ್ಳುತ್ತಿಲ್ಲ. ನಮಗೆ ಆಘಾತವಾಗಿದೆ. ಏನಾಗುತ್ತಿದೆ? ಆಸ್ಪತ್ರೆಗಳಿಗೆ ಈ ಹಂತದಲ್ಲಿ ಆಮ್ಲಜನಕದ ನಿಲುಗಡೆ … ನರಕದರ್ಶನವಾಗುತ್ತಿದೆ…

10. ದಯವಿಟ್ಟು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಿ. ಸಾವಿರಾರು ಜೀವಗಳು ಅಪಾಯದಲ್ಲಿವೆ. ಸಾವಿರಾರು ಜನರು ಸಾಯುವುದನ್ನು ನೀವು ನೋಡಲು ಬಯಸುವಿರಾ?


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...