Homeಮುಖಪುಟಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ...

ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ದೆಹಲಿಯ ಹಲವು ಆಸ್ಪತ್ರೆಗಳು ಆಮ್ಲಜನಕದ ಕೊರತೆಯಿಂದಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ಗಂಟೆಗಳಲ್ಲಿ ಇರುವ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ‘ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ” ಎಂದು ಒತ್ತಿ ಹೇಳಿರುವ ದೆಹಲಿ ಹೈಕೋರ್ಟ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದೆ.

‘ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಎಂದು ಆಮ್ಲಜನಕ ಪೂರೈಕೆಯ ಕುರಿತು ಕೇಂದ್ರವನ್ನು ಕೋರ್ಟ್ ಎಚ್ಚರಿಸಿದೆ. ದೆಹಲಿಯ ಆಮ್ಲಜನಕ ಬಿಕ್ಕಟ್ಟನ್ನು ನಿಭಾಯಿಸಿದ ಬಗ್ಗೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರವನ್ನು ಕಟುಪದಗಳಲ್ಲಿ ಟೀಕಿಸಿದೆ.

ದೆಹಲಿ ಹೈಕೋರ್ಟ್‌ನ ತೀಕ್ಷ್ಣವಾದ ಪ್ರತಿಕ್ರಿಯೆಗಳು ಇವು:

1. ನಾಗರಿಕನು ಸರ್ಕಾರ/ಪ್ರಭುತ್ವದ ಮೇಲೆ ಮಾತ್ರ ಆಶ್ರಯಿತನಾಗಿರುತ್ತಾನೆ.. ಅದು ಸರ್ಕಾರದ ಜವಾಬ್ದಾರಿ. ಆಮ್ಲಜನಕಕ್ಕಾಗಿ ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಅದು ನಿಮ್ಮ (ಕೇಂದ್ರ ಆರೋಗ್ಯ ಇಲಾಖೆ) ಕೆಲಸ.

2. ನಿತ್ಯದ ಕಠಿಣ ವಾಸ್ತವ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಮರೆತುಬಿಡುತ್ತದೆ? ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ. ನಿಮ್ಮ ಸ್ವಂತ ಸುಖಕ್ಕಾಗಿ ಸಮಯ ತೆಗೆದುಕೊಳ್ಳುತ್ತೀರಿ ಮತ್ತು ಜನರು ಸಾಯುತ್ತಾರೆ.

3. ಜನರು ಸಾಯುವಾಗ ನೀವು ಕೈಗಾರಿಕೆಗಳ ಬಗ್ಗೆ ಕಾಳಜಿ ವಹಿಸುತ್ತೀರಿ. ಇದು ನೈಸರ್ಗಿಕ ತುರ್ತು. ಆದರೆ ಮಾನವ ಜೀವನವು ಸರ್ಕಾರಕ್ಕೆ ಅಪ್ರಸ್ತುತವಾಗುತ್ತದೆ.

4. ಇಂದು ಆಸ್ಪತ್ರೆಗಳು ಒಣಗಿವೆ. (ಆಮ್ಲಜನಕವಿಲ್ಲದೇ ಉಸಿರುಗಟ್ಟಿವೆ) ಇದು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ. ನಮ್ಮ ಕಾಳಜಿ ಕೇವಲ ದೆಹಲಿಯಲ್ಲ. ಭಾರತದಾದ್ಯಂತ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರವು ಏನು ಮಾಡುತ್ತಿದೆ ಎಂದು ತಿಳಿಯಲು ನಾವು ಬಯಸುತ್ತೇವೆ.

5. ಆಮ್ಲಜನಕದ ಅವಶ್ಯಕತೆ ಹಲವಾರು ಪಟ್ಟು ಹೆಚ್ಚಾಗಿದೆ. ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರದ ಜವಾಬ್ದಾರಿಯಾಗಿದೆ. ಜೀವನ ವಿಧಾನದ ಮೂಲಭೂತ ಹಕ್ಕನ್ನು ರಕ್ಷಿಸಲು ಯಾವುದೇ ವಿಧಾನದಿಂದಲಾದರೂ ನಾವು ಸರ್ಕಾರವನ್ನು ನಿರ್ದೇಶಿಸುತ್ತೇವೆ.

6. ನಿನ್ನೆ (ಮಂಗಳವಾರ) ನಾವು ನಿಮಗೆ (ಕೇಂದ್ರ ಆರೋಗ್ಯ ಸಚಿವಾಲಯ) ಪೆಟ್ರೋಲಿಯಂ ಮತ್ತು ಉಕ್ಕಿನ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ನಿಲ್ಲಿಸುವಂತೆ ಆದೇಶಿಸಿದ್ದೇವೆ. ನೀವು ಏನು ಮಾಡಿದ್ದೀರಿ? ಫಲಿತಾಂಶ ಏನು …? ನಾವು ಫೈಲ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. (ಇಲಾಖೆಯು ಈ ವಿಷಯದಲ್ಲಿ “ಫೈಲ್‌ಗಳು ಮೂವ್ ಆಗುತ್ತಿವೆ” ಎಂದು ಹೇಳಿದಾಗ).

7. ಟಾಟಾ ಕಂಪನಿ ತಮ್ಮ ಉಕ್ಕಿನ ಸ್ಥಾವರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವನ್ನು ಬೇರೆಡೆಗೆ ತಿರುಗಿಸಲು ಸಾಧ್ಯವಾದರೆ ಇತರರಿಗೆ ಏಕೆ ಸಾಧ್ಯವಿಲ್ಲ? ಮಾನವೀಯತೆಯ ಪ್ರಜ್ಞೆ ಇಲ್ಲವೇ ಅಥವಾ ಏನು? ಅವುಗಳ ಬಳಕೆಗಾಗಿ ಆಮ್ಲಜನಕವನ್ನು ಉತ್ಪಾದಿಸುವ ಉಕ್ಕು ಮತ್ತು ಪೆಟ್ರೋಲಿಯಂ ಕೈಗಾರಿಕೆಗಳಿಂದ ಸರ್ಕಾರವು ಆಮ್ಲಜನಕವನ್ನು ಆರೋಗ್ಯ ಕ್ಷೇತ್ರಕ್ಕೆ ತಿರುಗಿಸಬಹುದು.

8. ಕೈಗಾರಿಕೆಗಳು ಸಹಾಯ ಮಾಡಲು ಸಿದ್ಧವಿವೆ. ಇದು ರಾಷ್ಟ್ರೀಯ ತುರ್ತು. ಆಮ್ಲಜನಕವನ್ನು ತಿರುಗಿಸಲು ನೀವು ಆದೇಶವನ್ನು ರವಾನಿಸಿದರೆ, ಯಾವುದೇ ಕೈಗಾರಿಕೆಗಳು ಇಲ್ಲ ಎಂದು ಹೇಳುವುದಿಲ್ಲ. ಮತ್ತು ನೀವು ನಿಮ್ಮದೇ ಆದ ಸರ್ಕಾರಿ-ಪೆಟ್ರೋಲಿಯಂ ಕಂಪನಿಗಳನ್ನು ಹೊಂದಿದ್ದೀರಿ. ನಾವು ನಿನ್ನೆ ಹಲವಾರು ಆದೇಶಗಳನ್ನು ನೀಡಿದ್ದೇವೆ. ಇಡೀ ದಿನ ನೀವು ಏನು ಮಾಡಿದ್ದೀರಿ?

9. ಸರ್ಕಾರ ವಾಸ್ತವಕ್ಕೆ ಏಕೆ ಎಚ್ಚರಗೊಳ್ಳುತ್ತಿಲ್ಲ. ನಮಗೆ ಆಘಾತವಾಗಿದೆ. ಏನಾಗುತ್ತಿದೆ? ಆಸ್ಪತ್ರೆಗಳಿಗೆ ಈ ಹಂತದಲ್ಲಿ ಆಮ್ಲಜನಕದ ನಿಲುಗಡೆ … ನರಕದರ್ಶನವಾಗುತ್ತಿದೆ…

10. ದಯವಿಟ್ಟು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಿ. ಸಾವಿರಾರು ಜೀವಗಳು ಅಪಾಯದಲ್ಲಿವೆ. ಸಾವಿರಾರು ಜನರು ಸಾಯುವುದನ್ನು ನೀವು ನೋಡಲು ಬಯಸುವಿರಾ?


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...