Homeಮುಖಪುಟಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ...

ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ದೆಹಲಿಯ ಹಲವು ಆಸ್ಪತ್ರೆಗಳು ಆಮ್ಲಜನಕದ ಕೊರತೆಯಿಂದಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ಗಂಟೆಗಳಲ್ಲಿ ಇರುವ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ‘ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ” ಎಂದು ಒತ್ತಿ ಹೇಳಿರುವ ದೆಹಲಿ ಹೈಕೋರ್ಟ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದೆ.

‘ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಎಂದು ಆಮ್ಲಜನಕ ಪೂರೈಕೆಯ ಕುರಿತು ಕೇಂದ್ರವನ್ನು ಕೋರ್ಟ್ ಎಚ್ಚರಿಸಿದೆ. ದೆಹಲಿಯ ಆಮ್ಲಜನಕ ಬಿಕ್ಕಟ್ಟನ್ನು ನಿಭಾಯಿಸಿದ ಬಗ್ಗೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರವನ್ನು ಕಟುಪದಗಳಲ್ಲಿ ಟೀಕಿಸಿದೆ.

ದೆಹಲಿ ಹೈಕೋರ್ಟ್‌ನ ತೀಕ್ಷ್ಣವಾದ ಪ್ರತಿಕ್ರಿಯೆಗಳು ಇವು:

1. ನಾಗರಿಕನು ಸರ್ಕಾರ/ಪ್ರಭುತ್ವದ ಮೇಲೆ ಮಾತ್ರ ಆಶ್ರಯಿತನಾಗಿರುತ್ತಾನೆ.. ಅದು ಸರ್ಕಾರದ ಜವಾಬ್ದಾರಿ. ಆಮ್ಲಜನಕಕ್ಕಾಗಿ ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಅದು ನಿಮ್ಮ (ಕೇಂದ್ರ ಆರೋಗ್ಯ ಇಲಾಖೆ) ಕೆಲಸ.

2. ನಿತ್ಯದ ಕಠಿಣ ವಾಸ್ತವ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಮರೆತುಬಿಡುತ್ತದೆ? ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ. ನಿಮ್ಮ ಸ್ವಂತ ಸುಖಕ್ಕಾಗಿ ಸಮಯ ತೆಗೆದುಕೊಳ್ಳುತ್ತೀರಿ ಮತ್ತು ಜನರು ಸಾಯುತ್ತಾರೆ.

3. ಜನರು ಸಾಯುವಾಗ ನೀವು ಕೈಗಾರಿಕೆಗಳ ಬಗ್ಗೆ ಕಾಳಜಿ ವಹಿಸುತ್ತೀರಿ. ಇದು ನೈಸರ್ಗಿಕ ತುರ್ತು. ಆದರೆ ಮಾನವ ಜೀವನವು ಸರ್ಕಾರಕ್ಕೆ ಅಪ್ರಸ್ತುತವಾಗುತ್ತದೆ.

4. ಇಂದು ಆಸ್ಪತ್ರೆಗಳು ಒಣಗಿವೆ. (ಆಮ್ಲಜನಕವಿಲ್ಲದೇ ಉಸಿರುಗಟ್ಟಿವೆ) ಇದು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ. ನಮ್ಮ ಕಾಳಜಿ ಕೇವಲ ದೆಹಲಿಯಲ್ಲ. ಭಾರತದಾದ್ಯಂತ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರವು ಏನು ಮಾಡುತ್ತಿದೆ ಎಂದು ತಿಳಿಯಲು ನಾವು ಬಯಸುತ್ತೇವೆ.

5. ಆಮ್ಲಜನಕದ ಅವಶ್ಯಕತೆ ಹಲವಾರು ಪಟ್ಟು ಹೆಚ್ಚಾಗಿದೆ. ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರದ ಜವಾಬ್ದಾರಿಯಾಗಿದೆ. ಜೀವನ ವಿಧಾನದ ಮೂಲಭೂತ ಹಕ್ಕನ್ನು ರಕ್ಷಿಸಲು ಯಾವುದೇ ವಿಧಾನದಿಂದಲಾದರೂ ನಾವು ಸರ್ಕಾರವನ್ನು ನಿರ್ದೇಶಿಸುತ್ತೇವೆ.

6. ನಿನ್ನೆ (ಮಂಗಳವಾರ) ನಾವು ನಿಮಗೆ (ಕೇಂದ್ರ ಆರೋಗ್ಯ ಸಚಿವಾಲಯ) ಪೆಟ್ರೋಲಿಯಂ ಮತ್ತು ಉಕ್ಕಿನ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ನಿಲ್ಲಿಸುವಂತೆ ಆದೇಶಿಸಿದ್ದೇವೆ. ನೀವು ಏನು ಮಾಡಿದ್ದೀರಿ? ಫಲಿತಾಂಶ ಏನು …? ನಾವು ಫೈಲ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. (ಇಲಾಖೆಯು ಈ ವಿಷಯದಲ್ಲಿ “ಫೈಲ್‌ಗಳು ಮೂವ್ ಆಗುತ್ತಿವೆ” ಎಂದು ಹೇಳಿದಾಗ).

7. ಟಾಟಾ ಕಂಪನಿ ತಮ್ಮ ಉಕ್ಕಿನ ಸ್ಥಾವರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವನ್ನು ಬೇರೆಡೆಗೆ ತಿರುಗಿಸಲು ಸಾಧ್ಯವಾದರೆ ಇತರರಿಗೆ ಏಕೆ ಸಾಧ್ಯವಿಲ್ಲ? ಮಾನವೀಯತೆಯ ಪ್ರಜ್ಞೆ ಇಲ್ಲವೇ ಅಥವಾ ಏನು? ಅವುಗಳ ಬಳಕೆಗಾಗಿ ಆಮ್ಲಜನಕವನ್ನು ಉತ್ಪಾದಿಸುವ ಉಕ್ಕು ಮತ್ತು ಪೆಟ್ರೋಲಿಯಂ ಕೈಗಾರಿಕೆಗಳಿಂದ ಸರ್ಕಾರವು ಆಮ್ಲಜನಕವನ್ನು ಆರೋಗ್ಯ ಕ್ಷೇತ್ರಕ್ಕೆ ತಿರುಗಿಸಬಹುದು.

8. ಕೈಗಾರಿಕೆಗಳು ಸಹಾಯ ಮಾಡಲು ಸಿದ್ಧವಿವೆ. ಇದು ರಾಷ್ಟ್ರೀಯ ತುರ್ತು. ಆಮ್ಲಜನಕವನ್ನು ತಿರುಗಿಸಲು ನೀವು ಆದೇಶವನ್ನು ರವಾನಿಸಿದರೆ, ಯಾವುದೇ ಕೈಗಾರಿಕೆಗಳು ಇಲ್ಲ ಎಂದು ಹೇಳುವುದಿಲ್ಲ. ಮತ್ತು ನೀವು ನಿಮ್ಮದೇ ಆದ ಸರ್ಕಾರಿ-ಪೆಟ್ರೋಲಿಯಂ ಕಂಪನಿಗಳನ್ನು ಹೊಂದಿದ್ದೀರಿ. ನಾವು ನಿನ್ನೆ ಹಲವಾರು ಆದೇಶಗಳನ್ನು ನೀಡಿದ್ದೇವೆ. ಇಡೀ ದಿನ ನೀವು ಏನು ಮಾಡಿದ್ದೀರಿ?

9. ಸರ್ಕಾರ ವಾಸ್ತವಕ್ಕೆ ಏಕೆ ಎಚ್ಚರಗೊಳ್ಳುತ್ತಿಲ್ಲ. ನಮಗೆ ಆಘಾತವಾಗಿದೆ. ಏನಾಗುತ್ತಿದೆ? ಆಸ್ಪತ್ರೆಗಳಿಗೆ ಈ ಹಂತದಲ್ಲಿ ಆಮ್ಲಜನಕದ ನಿಲುಗಡೆ … ನರಕದರ್ಶನವಾಗುತ್ತಿದೆ…

10. ದಯವಿಟ್ಟು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಿ. ಸಾವಿರಾರು ಜೀವಗಳು ಅಪಾಯದಲ್ಲಿವೆ. ಸಾವಿರಾರು ಜನರು ಸಾಯುವುದನ್ನು ನೀವು ನೋಡಲು ಬಯಸುವಿರಾ?


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...