Homeಮುಖಪುಟಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ...

ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

- Advertisement -
- Advertisement -

ದೆಹಲಿಯ ಹಲವು ಆಸ್ಪತ್ರೆಗಳು ಆಮ್ಲಜನಕದ ಕೊರತೆಯಿಂದಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ಗಂಟೆಗಳಲ್ಲಿ ಇರುವ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ‘ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ” ಎಂದು ಒತ್ತಿ ಹೇಳಿರುವ ದೆಹಲಿ ಹೈಕೋರ್ಟ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಕಿಡಿಕಾರಿದೆ.

‘ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಎಂದು ಆಮ್ಲಜನಕ ಪೂರೈಕೆಯ ಕುರಿತು ಕೇಂದ್ರವನ್ನು ಕೋರ್ಟ್ ಎಚ್ಚರಿಸಿದೆ. ದೆಹಲಿಯ ಆಮ್ಲಜನಕ ಬಿಕ್ಕಟ್ಟನ್ನು ನಿಭಾಯಿಸಿದ ಬಗ್ಗೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರವನ್ನು ಕಟುಪದಗಳಲ್ಲಿ ಟೀಕಿಸಿದೆ.

ದೆಹಲಿ ಹೈಕೋರ್ಟ್‌ನ ತೀಕ್ಷ್ಣವಾದ ಪ್ರತಿಕ್ರಿಯೆಗಳು ಇವು:

1. ನಾಗರಿಕನು ಸರ್ಕಾರ/ಪ್ರಭುತ್ವದ ಮೇಲೆ ಮಾತ್ರ ಆಶ್ರಯಿತನಾಗಿರುತ್ತಾನೆ.. ಅದು ಸರ್ಕಾರದ ಜವಾಬ್ದಾರಿ. ಆಮ್ಲಜನಕಕ್ಕಾಗಿ ಭಿಕ್ಷೆಯನ್ನಾದರೂ ಬೇಡಿ, ಸಾಲ ಆದರೂ ತನ್ನಿ ಇಲ್ಲವೇ ಕದ್ದುಕೊಂಡಾದರೂ ಬನ್ನಿ ಅದು ನಿಮ್ಮ (ಕೇಂದ್ರ ಆರೋಗ್ಯ ಇಲಾಖೆ) ಕೆಲಸ.

2. ನಿತ್ಯದ ಕಠಿಣ ವಾಸ್ತವ ಪರಿಸ್ಥಿತಿಯನ್ನು ಸರ್ಕಾರ ಹೇಗೆ ಮರೆತುಬಿಡುತ್ತದೆ? ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ. ನಿಮ್ಮ ಸ್ವಂತ ಸುಖಕ್ಕಾಗಿ ಸಮಯ ತೆಗೆದುಕೊಳ್ಳುತ್ತೀರಿ ಮತ್ತು ಜನರು ಸಾಯುತ್ತಾರೆ.

3. ಜನರು ಸಾಯುವಾಗ ನೀವು ಕೈಗಾರಿಕೆಗಳ ಬಗ್ಗೆ ಕಾಳಜಿ ವಹಿಸುತ್ತೀರಿ. ಇದು ನೈಸರ್ಗಿಕ ತುರ್ತು. ಆದರೆ ಮಾನವ ಜೀವನವು ಸರ್ಕಾರಕ್ಕೆ ಅಪ್ರಸ್ತುತವಾಗುತ್ತದೆ.

4. ಇಂದು ಆಸ್ಪತ್ರೆಗಳು ಒಣಗಿವೆ. (ಆಮ್ಲಜನಕವಿಲ್ಲದೇ ಉಸಿರುಗಟ್ಟಿವೆ) ಇದು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ. ನಮ್ಮ ಕಾಳಜಿ ಕೇವಲ ದೆಹಲಿಯಲ್ಲ. ಭಾರತದಾದ್ಯಂತ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರವು ಏನು ಮಾಡುತ್ತಿದೆ ಎಂದು ತಿಳಿಯಲು ನಾವು ಬಯಸುತ್ತೇವೆ.

5. ಆಮ್ಲಜನಕದ ಅವಶ್ಯಕತೆ ಹಲವಾರು ಪಟ್ಟು ಹೆಚ್ಚಾಗಿದೆ. ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರದ ಜವಾಬ್ದಾರಿಯಾಗಿದೆ. ಜೀವನ ವಿಧಾನದ ಮೂಲಭೂತ ಹಕ್ಕನ್ನು ರಕ್ಷಿಸಲು ಯಾವುದೇ ವಿಧಾನದಿಂದಲಾದರೂ ನಾವು ಸರ್ಕಾರವನ್ನು ನಿರ್ದೇಶಿಸುತ್ತೇವೆ.

6. ನಿನ್ನೆ (ಮಂಗಳವಾರ) ನಾವು ನಿಮಗೆ (ಕೇಂದ್ರ ಆರೋಗ್ಯ ಸಚಿವಾಲಯ) ಪೆಟ್ರೋಲಿಯಂ ಮತ್ತು ಉಕ್ಕಿನ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ನಿಲ್ಲಿಸುವಂತೆ ಆದೇಶಿಸಿದ್ದೇವೆ. ನೀವು ಏನು ಮಾಡಿದ್ದೀರಿ? ಫಲಿತಾಂಶ ಏನು …? ನಾವು ಫೈಲ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. (ಇಲಾಖೆಯು ಈ ವಿಷಯದಲ್ಲಿ “ಫೈಲ್‌ಗಳು ಮೂವ್ ಆಗುತ್ತಿವೆ” ಎಂದು ಹೇಳಿದಾಗ).

7. ಟಾಟಾ ಕಂಪನಿ ತಮ್ಮ ಉಕ್ಕಿನ ಸ್ಥಾವರಗಳಿಂದ ಉತ್ಪತ್ತಿಯಾಗುವ ಆಮ್ಲಜನಕವನ್ನು ಬೇರೆಡೆಗೆ ತಿರುಗಿಸಲು ಸಾಧ್ಯವಾದರೆ ಇತರರಿಗೆ ಏಕೆ ಸಾಧ್ಯವಿಲ್ಲ? ಮಾನವೀಯತೆಯ ಪ್ರಜ್ಞೆ ಇಲ್ಲವೇ ಅಥವಾ ಏನು? ಅವುಗಳ ಬಳಕೆಗಾಗಿ ಆಮ್ಲಜನಕವನ್ನು ಉತ್ಪಾದಿಸುವ ಉಕ್ಕು ಮತ್ತು ಪೆಟ್ರೋಲಿಯಂ ಕೈಗಾರಿಕೆಗಳಿಂದ ಸರ್ಕಾರವು ಆಮ್ಲಜನಕವನ್ನು ಆರೋಗ್ಯ ಕ್ಷೇತ್ರಕ್ಕೆ ತಿರುಗಿಸಬಹುದು.

8. ಕೈಗಾರಿಕೆಗಳು ಸಹಾಯ ಮಾಡಲು ಸಿದ್ಧವಿವೆ. ಇದು ರಾಷ್ಟ್ರೀಯ ತುರ್ತು. ಆಮ್ಲಜನಕವನ್ನು ತಿರುಗಿಸಲು ನೀವು ಆದೇಶವನ್ನು ರವಾನಿಸಿದರೆ, ಯಾವುದೇ ಕೈಗಾರಿಕೆಗಳು ಇಲ್ಲ ಎಂದು ಹೇಳುವುದಿಲ್ಲ. ಮತ್ತು ನೀವು ನಿಮ್ಮದೇ ಆದ ಸರ್ಕಾರಿ-ಪೆಟ್ರೋಲಿಯಂ ಕಂಪನಿಗಳನ್ನು ಹೊಂದಿದ್ದೀರಿ. ನಾವು ನಿನ್ನೆ ಹಲವಾರು ಆದೇಶಗಳನ್ನು ನೀಡಿದ್ದೇವೆ. ಇಡೀ ದಿನ ನೀವು ಏನು ಮಾಡಿದ್ದೀರಿ?

9. ಸರ್ಕಾರ ವಾಸ್ತವಕ್ಕೆ ಏಕೆ ಎಚ್ಚರಗೊಳ್ಳುತ್ತಿಲ್ಲ. ನಮಗೆ ಆಘಾತವಾಗಿದೆ. ಏನಾಗುತ್ತಿದೆ? ಆಸ್ಪತ್ರೆಗಳಿಗೆ ಈ ಹಂತದಲ್ಲಿ ಆಮ್ಲಜನಕದ ನಿಲುಗಡೆ … ನರಕದರ್ಶನವಾಗುತ್ತಿದೆ…

10. ದಯವಿಟ್ಟು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಿ. ಸಾವಿರಾರು ಜೀವಗಳು ಅಪಾಯದಲ್ಲಿವೆ. ಸಾವಿರಾರು ಜನರು ಸಾಯುವುದನ್ನು ನೀವು ನೋಡಲು ಬಯಸುವಿರಾ?


ಇದನ್ನೂ ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...