Homeಮುಖಪುಟಜರ್ಮನಿಯಲ್ಲಿ 2ನೇ ವಿಶ್ವ ಯುದ್ಧದ ಬಾಂಬ್ ಪತ್ತೆ: 13,000 ಜನರಿಗೆ ಮನೆ ತೊರೆಯಲು ಸೂಚನೆ

ಜರ್ಮನಿಯಲ್ಲಿ 2ನೇ ವಿಶ್ವ ಯುದ್ಧದ ಬಾಂಬ್ ಪತ್ತೆ: 13,000 ಜನರಿಗೆ ಮನೆ ತೊರೆಯಲು ಸೂಚನೆ

- Advertisement -
- Advertisement -

ಎರಡನೇ ವಿಶ್ವ ಯುದ್ಧದ ವೇಳೆಯಲ್ಲಿನ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಜರ್ಮನಿಯ ಡಸೆಲ್ಡಾರ್ಫ್‌ನಲ್ಲಿರುವ ಅಧಿಕಾರಿಗಳು ಸರಿಸುಮಾರು 13,000 ಜನರನ್ನು ಮನೆಗಳನ್ನು ತೊರೆಯುವಂತೆ ಸೂಚಿಸಿದ್ದಾರೆ.

ಸಜೀವ  ಬಾಂಬ್‌ನ್ನು ವಿಲೇವಾರಿ ಮಾಡಲು ಪೊಲೀಸ್ ಮತ್ತು ಬಾಂಬ್ ಸ್ಕ್ವಾಡ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಜರ್ಮನ್ ಸುದ್ದಿವಾಹಿನಿ ಡಿಡಬ್ಲ್ಯೂ ಹೇಳಿದೆ.

ಒಂದು ಟನ್ ತೂಕದ ಬಾಂಬ್ ನ್ನು  ಆಗಸ್ಟ್ 7-8 ರಂದು ಪತ್ತೆಹಚ್ಚಲಾಗಿದೆ. ನಗರದ ಮೃಗಾಲಯದ ಬಳಿ ಕೆಲಸದ ಸಮಯದಲ್ಲಿ ಇದು ಪತ್ತೆಯಾಗಿದೆ ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಔಟ್‌ಲೆಟ್  ವರದಿ ಮಾಡಿದೆ.

ಎರಡನೇ ವಿಶ್ವಯುದ್ಧದ ವೇಳೆ ಉಳಿದಿರುವ ಸಾವಿರಾರು ಬಾಂಬ್‌ಗಳನ್ನು ಇನ್ನೂ ಜರ್ಮನಿಯಲ್ಲಿ ಹೂಳಲಾಗಿದೆ ಎಂದು ವರದಿಗಳು ಹೇಳುತ್ತಿವೆ.

ಡಸೆಲ್ಡಾರ್ಫ್‌ನಲ್ಲಿ, ಅಧಿಕಾರಿಗಳು ಬಾಂಬ್‌ ಪತ್ತೆಯಾದ ಸ್ಥಳದ 500-ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ನಿವಾಸಿಗಳಿಗೆ ಪ್ರದೇಶವನ್ನು ತೊರೆಯಲು ಆದೇಶಿಸಿದ್ದಾರೆ. ಬಾಂಬ್ ವಿಲೇವಾರಿ ಕಾರ್ಯಾಚರಣೆಯ ಸಮಯದಲ್ಲಿ ಆ ಭಾಗದ ರಸ್ತೆಗಳನ್ನು ಕೂಡ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಸ್ಥಳೀಯ  ನಿವಾಸಿಗಳು ತಮ್ಮ ಸಾಕುಪ್ರಾಣಿಗಳ  ಜೊತೆ ಮನೆಯನ್ನು ತೊರೆದು ಬೇರೆ ಕಡೆ ಸ್ಥಳಾಂತರವಾಗಿದ್ದಾರೆ. 2017ರಲ್ಲಿ 1.4ಟನ್ ಬಾಂಬ್ ಪತ್ತೆಯಾದ ವೇಳೆ ಸರಿಸುಮಾರು 65,000 ಜನರನ್ನು ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿತ್ತು.

2021ರಲ್ಲಿ ಕೂಡ ಎರಡನೇ ವಿಶ್ವ ಯುದ್ಧದ ವೇಳೆಯಲ್ಲಿನ ಸಜೀವ ಬಾಂಬ್ ವೊಂದು ಕಾಮಗಾರಿ ಕಟ್ಟಡದ ಬಳಿ ಸ್ಪೋಟಗೊಂಡು ನಾಲ್ವರು ಗಾಯಗೊಂಡಿದ್ದರು ಮತ್ತು ರೈಲ್ವೇ ಹಳಿಗಳು ಹಾನಿಯಾಗಿದ್ದವು.

ಇದನ್ನು ಓದಿ: ಚಲುವರಾಯಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪತ್ರ ನಕಲಿ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...