Homeಮುಖಪುಟನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು...

ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ನಿಮ್ಮ ಮಾತು ಕೇಳಬೇಕು ಎಂಬುವುದಕ್ಕೆ ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿಲ್ಲ, ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ, ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ಎಂದು ಅವರು ಹೇಳಿದ್ದಾರೆ

- Advertisement -
- Advertisement -

“ನಾನು ಇನ್ನೊಬ್ಬರ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ನಾನು ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ. ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಯ ದೊಡ್ಡ ಕೊಡುಗೆದಾರರಾಗಿದ್ದೇವೆ. ನಮ್ಮಿಂದ ನಿಮಗೆ ಇನ್ನೇನು ಬೇಕು? ನಾನು ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು?” ಎಂದು ತಮಿಳುನಾಡು ಹಣಕಾಸು ಸಚಿವ ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂಡಿಯಾ ಟುಡೆ ಮಾಧ್ಯಮದಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರಿಗೆ ಉಚಿತ ಸವಲತ್ತುಗಳು ನೀಡುವುದನ್ನು ‘ಪುಕ್ಕಟೆ ಕೊಡುಗೆ’ಗಳು ಎಂದು ಹೇಳುತ್ತಿರುವ ಮೋದಿ ನೇತೃತ್ವದ ಸರ್ಕಾರದ ನಿಲುವಿನ ಬಗ್ಗೆ ಅವರು ಮಾಡಿರುವ ವಾಗ್ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಗಳು ಏನು ಮಾಡಬಹುದು ಎಂಬುದನ್ನು ಒಕ್ಕೂಟ ಸರ್ಕಾರ ಯಾಕೆ ನಿರ್ಧರಿಸಬೇಕು ಎಂದು ತ್ಯಾಗ ರಾಜನ್ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತ್ಯಾಗ ರಾಜನ್, “ನೀವು ಹೇಳಿದ್ದನ್ನು ನಾವು ಕೇಳಬೇಕು ಎಂದು ಹೇಳುವುದಕ್ಕೆ ಒಂದೋ ನೀವು ಸಾಂವಿಧಾನಿಕ ಆಧಾರವನ್ನು ಹೊಂದಿರಬೇಕು ಅಥವಾ ನೀವು ವಿಷಯದಲ್ಲಿ ಪರಿಣತಿ ಹೊಂದಿದ್ದರೆ ಅಥವಾ ಅರ್ಥಶಾಸ್ತ್ರದಲ್ಲಿ ಡಬ್ಬಲ್ ಪಿಎಚ್‌ಡಿ ಹೊಂದಿದ್ದರೆ, ನೋಬೆಲ್ ಪ್ರಶಸ್ತಿ ಪಡೆದಿದ್ದರೆ, ನಮಗಿಂತ ಚೆನ್ನಾಗಿ ನೀವು ಕೆಲಸ ಮಾಡುತ್ತಿದ್ದರೆ, ನೀವು ಆರ್ಥಿಕತೆಯನ್ನು ಬೆಳೆಸಿದ್ದೀರಿ ಎಂದಾದರೆ, ಸಾಲವನ್ನು ಕಡಿಮೆ ಮಾಡಿದ್ದೀರಿ ಎಂದಾದರೆ, ನೀವು ಉದ್ಯೋಗಗಳನ್ನು ಸೃಷ್ಟಿಸಿದ್ಧೀರಿ ಎಂದು ತೋರಿಸುವ ಕೆಲವು ಕಾರ್ಯಕ್ಷಮತೆಯ ಹಿನ್ನಲೆಯನ್ನು ನೀವು ಹೊಂದಿದ್ದರೆ ನಾವು ನೀವು ಹೇಳುವುದನ್ನು ಕೇಳುತ್ತೇವೆ. ಆದರೆ ಇದು ಯಾವುದೂ ಇಲ್ಲದೆ, ನಾವು ಯಾಕೆ ಇನ್ನೊಬ್ಬರ ಅಭಿಪ್ರಾಯವನ್ನು ಕೇಳಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ತಮಿಳುನಾಡು ಸರ್ಕಾರವು ಒಕ್ಕೂಟ ಸರ್ಕಾರದ ಸಾಧನೆಗಿಂತ ಹೆಚ್ಚಿನ ಸಾಧನೆ ಮಾಡಿದೆ ಎಂದು ತ್ಯಾಗ ರಾಜನ್ ಅವರು ಪ್ರತಿಪಾದಿಸಿದ್ದಾರೆ.

“ನಾನು ಯಾರದೊ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ಅದು ದೇವರ ವಾಕ್ಯವೇ? ನಾನು ದೇವರನ್ನು ನಂಬುತ್ತೇನೆ, ಆದರೆ ಮನುಷ್ಯನೊಬ್ಬ ದೇವರು ಎಂದು ನಾನು ನಂಬುವುದಿಲ್ಲ. ಇನ್ನೊಬ್ಬರ ದೃಷ್ಟಿಕೋನವನ್ನು ನಾನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

“ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ಮುಂದಿನ ಮೂರು ವರ್ಷವೂ ನಾನು ಚೆನ್ನಾಗಿ ಕೆಲಸ ಮಾಡುತ್ತೇನೆ ಎಂಬುವುದನ್ನು ಖಚಿತಪಡಿಸುತ್ತೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಗೆ ದೊಡ್ಡ ಕೊಡುಗೆದಾರರಾಗಿದ್ದು, ಅದಕ್ಕೆ ದೊಡ್ಡ ಮೊತ್ತವನ್ನು ನೀಡುತ್ತಿದ್ದೇವೆ. ಉದಾಹರಣೆಗೆ ಒಂದು ರುಪಾಯಿ ನಾವು ಒಕ್ಕೂಟ ಸರ್ಕಾರಕ್ಕೆ ನೀಡಿದರೆ ಅದು ನಮಗೆ 33-35 ಪೈಸೆ ಅಷ್ಟೆ ವಾಪಾಸು ನೀಡುತ್ತಿದೆ. ಇನ್ನೂ ನಮ್ಮಿಂದ ನಿಮಗೆ ಏನು ಬೇಕು?” ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

“ಇಷ್ಟೆಲ್ಲಾ ಆಗಿಯೂ ನಾನು ಯಾಕೆ ನಿಮ್ಮ ಮಾತನ್ನು ಪಾಲಿಸಬೇಕು? ನಿಮ್ಮ ಮಾತನ್ನು ನಾನು ಪಾಲಿಸಬೇಕು ಎಂಬುವುದಕ್ಕೆ ಯಾವ ಆಧಾರವಿದೆ? ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿದೆಯೆ? ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ. ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ದೇವಲೋಕದಿಂದ ಹೆಚ್ಚುವರಿ ಸಾಂವಿಧಾನಿಕ ಆದೇಶಗಳೇನಾದರೂ ಬರುತ್ತಿದೆಯೆ? ನೀವು ಏನು ಹೇಳುತ್ತಿದ್ದೀರಿ?” ಎಂದು ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಉಚಿತ ಕೊಡುಗೆ’ ಸಂಸ್ಕೃತಿಯ ಚರ್ಚೆ ಇತ್ತೀಚೆಗೆ ರಾಜಕೀಯ ಚರ್ಚೆಯನ್ನು ಪಡೆದುಕೊಂಡಿದೆ. ಕಳೆದ ವಾರದ ಆರಂಭದಲ್ಲಿ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಹಣಕಾಸಿನ ಬಲವನ್ನು ಪರೀಕ್ಷಿಸಿ ಅದಕ್ಕೆ ಅನುಗುಣವಾಗಿ ಬಜೆಟ್ ನಿಬಂಧನೆಗಳನ್ನು ಮಾಡಿ ‘ಪುಕ್ಕಟೆ ಕೊಡುಗೆ’ಗಳ ನೀಡುವಂತೆ ರಾಜ್ಯಗಳಿಗೆ ಕೇಳಿಕೊಂಡಿದ್ದರು.

ಈ ಮಧ್ಯೆ, ಹಲವಾರು ಉನ್ನತ ರಾಜಕೀಯ ನಾಯಕರು ‘ಉಚಿತ ಕೊಡುಗೆ’ ನೀತಿಯನ್ನು ಬೆಂಬಲಿಸಿದ್ದು, ಇದು ಜನ ಕಲ್ಯಾಣಕ್ಕಾಗಿ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಉಚಿತ ಶಿಕ್ಷಣ ಮತ್ತು ಆರೋಗ್ಯ ‘ಉಚಿತ ಕೊಡುಗೆ’ಯಲ್ಲ ಎಂದು ಪ್ರತಿಪಾದಿಸಿದ್ದು, ಇವುಗಳು ಜನರಿಗೆ ಸಿಕ್ಕರೆ ಭಾರತವು ವಿಶ್ವದ ಅಗ್ರ ರಾಷ್ಟ್ರವಾಗಬಹುದು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...