Homeಮುಖಪುಟನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು...

ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ನಿಮ್ಮ ಮಾತು ಕೇಳಬೇಕು ಎಂಬುವುದಕ್ಕೆ ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿಲ್ಲ, ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ, ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ಎಂದು ಅವರು ಹೇಳಿದ್ದಾರೆ

- Advertisement -
- Advertisement -

“ನಾನು ಇನ್ನೊಬ್ಬರ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ನಾನು ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ. ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಯ ದೊಡ್ಡ ಕೊಡುಗೆದಾರರಾಗಿದ್ದೇವೆ. ನಮ್ಮಿಂದ ನಿಮಗೆ ಇನ್ನೇನು ಬೇಕು? ನಾನು ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು?” ಎಂದು ತಮಿಳುನಾಡು ಹಣಕಾಸು ಸಚಿವ ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂಡಿಯಾ ಟುಡೆ ಮಾಧ್ಯಮದಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರಿಗೆ ಉಚಿತ ಸವಲತ್ತುಗಳು ನೀಡುವುದನ್ನು ‘ಪುಕ್ಕಟೆ ಕೊಡುಗೆ’ಗಳು ಎಂದು ಹೇಳುತ್ತಿರುವ ಮೋದಿ ನೇತೃತ್ವದ ಸರ್ಕಾರದ ನಿಲುವಿನ ಬಗ್ಗೆ ಅವರು ಮಾಡಿರುವ ವಾಗ್ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಗಳು ಏನು ಮಾಡಬಹುದು ಎಂಬುದನ್ನು ಒಕ್ಕೂಟ ಸರ್ಕಾರ ಯಾಕೆ ನಿರ್ಧರಿಸಬೇಕು ಎಂದು ತ್ಯಾಗ ರಾಜನ್ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತ್ಯಾಗ ರಾಜನ್, “ನೀವು ಹೇಳಿದ್ದನ್ನು ನಾವು ಕೇಳಬೇಕು ಎಂದು ಹೇಳುವುದಕ್ಕೆ ಒಂದೋ ನೀವು ಸಾಂವಿಧಾನಿಕ ಆಧಾರವನ್ನು ಹೊಂದಿರಬೇಕು ಅಥವಾ ನೀವು ವಿಷಯದಲ್ಲಿ ಪರಿಣತಿ ಹೊಂದಿದ್ದರೆ ಅಥವಾ ಅರ್ಥಶಾಸ್ತ್ರದಲ್ಲಿ ಡಬ್ಬಲ್ ಪಿಎಚ್‌ಡಿ ಹೊಂದಿದ್ದರೆ, ನೋಬೆಲ್ ಪ್ರಶಸ್ತಿ ಪಡೆದಿದ್ದರೆ, ನಮಗಿಂತ ಚೆನ್ನಾಗಿ ನೀವು ಕೆಲಸ ಮಾಡುತ್ತಿದ್ದರೆ, ನೀವು ಆರ್ಥಿಕತೆಯನ್ನು ಬೆಳೆಸಿದ್ದೀರಿ ಎಂದಾದರೆ, ಸಾಲವನ್ನು ಕಡಿಮೆ ಮಾಡಿದ್ದೀರಿ ಎಂದಾದರೆ, ನೀವು ಉದ್ಯೋಗಗಳನ್ನು ಸೃಷ್ಟಿಸಿದ್ಧೀರಿ ಎಂದು ತೋರಿಸುವ ಕೆಲವು ಕಾರ್ಯಕ್ಷಮತೆಯ ಹಿನ್ನಲೆಯನ್ನು ನೀವು ಹೊಂದಿದ್ದರೆ ನಾವು ನೀವು ಹೇಳುವುದನ್ನು ಕೇಳುತ್ತೇವೆ. ಆದರೆ ಇದು ಯಾವುದೂ ಇಲ್ಲದೆ, ನಾವು ಯಾಕೆ ಇನ್ನೊಬ್ಬರ ಅಭಿಪ್ರಾಯವನ್ನು ಕೇಳಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ತಮಿಳುನಾಡು ಸರ್ಕಾರವು ಒಕ್ಕೂಟ ಸರ್ಕಾರದ ಸಾಧನೆಗಿಂತ ಹೆಚ್ಚಿನ ಸಾಧನೆ ಮಾಡಿದೆ ಎಂದು ತ್ಯಾಗ ರಾಜನ್ ಅವರು ಪ್ರತಿಪಾದಿಸಿದ್ದಾರೆ.

“ನಾನು ಯಾರದೊ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ಅದು ದೇವರ ವಾಕ್ಯವೇ? ನಾನು ದೇವರನ್ನು ನಂಬುತ್ತೇನೆ, ಆದರೆ ಮನುಷ್ಯನೊಬ್ಬ ದೇವರು ಎಂದು ನಾನು ನಂಬುವುದಿಲ್ಲ. ಇನ್ನೊಬ್ಬರ ದೃಷ್ಟಿಕೋನವನ್ನು ನಾನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

“ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ಮುಂದಿನ ಮೂರು ವರ್ಷವೂ ನಾನು ಚೆನ್ನಾಗಿ ಕೆಲಸ ಮಾಡುತ್ತೇನೆ ಎಂಬುವುದನ್ನು ಖಚಿತಪಡಿಸುತ್ತೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಗೆ ದೊಡ್ಡ ಕೊಡುಗೆದಾರರಾಗಿದ್ದು, ಅದಕ್ಕೆ ದೊಡ್ಡ ಮೊತ್ತವನ್ನು ನೀಡುತ್ತಿದ್ದೇವೆ. ಉದಾಹರಣೆಗೆ ಒಂದು ರುಪಾಯಿ ನಾವು ಒಕ್ಕೂಟ ಸರ್ಕಾರಕ್ಕೆ ನೀಡಿದರೆ ಅದು ನಮಗೆ 33-35 ಪೈಸೆ ಅಷ್ಟೆ ವಾಪಾಸು ನೀಡುತ್ತಿದೆ. ಇನ್ನೂ ನಮ್ಮಿಂದ ನಿಮಗೆ ಏನು ಬೇಕು?” ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

“ಇಷ್ಟೆಲ್ಲಾ ಆಗಿಯೂ ನಾನು ಯಾಕೆ ನಿಮ್ಮ ಮಾತನ್ನು ಪಾಲಿಸಬೇಕು? ನಿಮ್ಮ ಮಾತನ್ನು ನಾನು ಪಾಲಿಸಬೇಕು ಎಂಬುವುದಕ್ಕೆ ಯಾವ ಆಧಾರವಿದೆ? ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿದೆಯೆ? ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ. ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ದೇವಲೋಕದಿಂದ ಹೆಚ್ಚುವರಿ ಸಾಂವಿಧಾನಿಕ ಆದೇಶಗಳೇನಾದರೂ ಬರುತ್ತಿದೆಯೆ? ನೀವು ಏನು ಹೇಳುತ್ತಿದ್ದೀರಿ?” ಎಂದು ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಉಚಿತ ಕೊಡುಗೆ’ ಸಂಸ್ಕೃತಿಯ ಚರ್ಚೆ ಇತ್ತೀಚೆಗೆ ರಾಜಕೀಯ ಚರ್ಚೆಯನ್ನು ಪಡೆದುಕೊಂಡಿದೆ. ಕಳೆದ ವಾರದ ಆರಂಭದಲ್ಲಿ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಹಣಕಾಸಿನ ಬಲವನ್ನು ಪರೀಕ್ಷಿಸಿ ಅದಕ್ಕೆ ಅನುಗುಣವಾಗಿ ಬಜೆಟ್ ನಿಬಂಧನೆಗಳನ್ನು ಮಾಡಿ ‘ಪುಕ್ಕಟೆ ಕೊಡುಗೆ’ಗಳ ನೀಡುವಂತೆ ರಾಜ್ಯಗಳಿಗೆ ಕೇಳಿಕೊಂಡಿದ್ದರು.

ಈ ಮಧ್ಯೆ, ಹಲವಾರು ಉನ್ನತ ರಾಜಕೀಯ ನಾಯಕರು ‘ಉಚಿತ ಕೊಡುಗೆ’ ನೀತಿಯನ್ನು ಬೆಂಬಲಿಸಿದ್ದು, ಇದು ಜನ ಕಲ್ಯಾಣಕ್ಕಾಗಿ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಉಚಿತ ಶಿಕ್ಷಣ ಮತ್ತು ಆರೋಗ್ಯ ‘ಉಚಿತ ಕೊಡುಗೆ’ಯಲ್ಲ ಎಂದು ಪ್ರತಿಪಾದಿಸಿದ್ದು, ಇವುಗಳು ಜನರಿಗೆ ಸಿಕ್ಕರೆ ಭಾರತವು ವಿಶ್ವದ ಅಗ್ರ ರಾಷ್ಟ್ರವಾಗಬಹುದು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...