Homeಮುಖಪುಟನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು...

ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ನಿಮ್ಮ ಮಾತು ಕೇಳಬೇಕು ಎಂಬುವುದಕ್ಕೆ ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿಲ್ಲ, ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ, ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ಎಂದು ಅವರು ಹೇಳಿದ್ದಾರೆ

- Advertisement -
- Advertisement -

“ನಾನು ಇನ್ನೊಬ್ಬರ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ನಾನು ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ. ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಯ ದೊಡ್ಡ ಕೊಡುಗೆದಾರರಾಗಿದ್ದೇವೆ. ನಮ್ಮಿಂದ ನಿಮಗೆ ಇನ್ನೇನು ಬೇಕು? ನಾನು ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು?” ಎಂದು ತಮಿಳುನಾಡು ಹಣಕಾಸು ಸಚಿವ ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂಡಿಯಾ ಟುಡೆ ಮಾಧ್ಯಮದಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರಿಗೆ ಉಚಿತ ಸವಲತ್ತುಗಳು ನೀಡುವುದನ್ನು ‘ಪುಕ್ಕಟೆ ಕೊಡುಗೆ’ಗಳು ಎಂದು ಹೇಳುತ್ತಿರುವ ಮೋದಿ ನೇತೃತ್ವದ ಸರ್ಕಾರದ ನಿಲುವಿನ ಬಗ್ಗೆ ಅವರು ಮಾಡಿರುವ ವಾಗ್ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಗಳು ಏನು ಮಾಡಬಹುದು ಎಂಬುದನ್ನು ಒಕ್ಕೂಟ ಸರ್ಕಾರ ಯಾಕೆ ನಿರ್ಧರಿಸಬೇಕು ಎಂದು ತ್ಯಾಗ ರಾಜನ್ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತ್ಯಾಗ ರಾಜನ್, “ನೀವು ಹೇಳಿದ್ದನ್ನು ನಾವು ಕೇಳಬೇಕು ಎಂದು ಹೇಳುವುದಕ್ಕೆ ಒಂದೋ ನೀವು ಸಾಂವಿಧಾನಿಕ ಆಧಾರವನ್ನು ಹೊಂದಿರಬೇಕು ಅಥವಾ ನೀವು ವಿಷಯದಲ್ಲಿ ಪರಿಣತಿ ಹೊಂದಿದ್ದರೆ ಅಥವಾ ಅರ್ಥಶಾಸ್ತ್ರದಲ್ಲಿ ಡಬ್ಬಲ್ ಪಿಎಚ್‌ಡಿ ಹೊಂದಿದ್ದರೆ, ನೋಬೆಲ್ ಪ್ರಶಸ್ತಿ ಪಡೆದಿದ್ದರೆ, ನಮಗಿಂತ ಚೆನ್ನಾಗಿ ನೀವು ಕೆಲಸ ಮಾಡುತ್ತಿದ್ದರೆ, ನೀವು ಆರ್ಥಿಕತೆಯನ್ನು ಬೆಳೆಸಿದ್ದೀರಿ ಎಂದಾದರೆ, ಸಾಲವನ್ನು ಕಡಿಮೆ ಮಾಡಿದ್ದೀರಿ ಎಂದಾದರೆ, ನೀವು ಉದ್ಯೋಗಗಳನ್ನು ಸೃಷ್ಟಿಸಿದ್ಧೀರಿ ಎಂದು ತೋರಿಸುವ ಕೆಲವು ಕಾರ್ಯಕ್ಷಮತೆಯ ಹಿನ್ನಲೆಯನ್ನು ನೀವು ಹೊಂದಿದ್ದರೆ ನಾವು ನೀವು ಹೇಳುವುದನ್ನು ಕೇಳುತ್ತೇವೆ. ಆದರೆ ಇದು ಯಾವುದೂ ಇಲ್ಲದೆ, ನಾವು ಯಾಕೆ ಇನ್ನೊಬ್ಬರ ಅಭಿಪ್ರಾಯವನ್ನು ಕೇಳಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ತಮಿಳುನಾಡು ಸರ್ಕಾರವು ಒಕ್ಕೂಟ ಸರ್ಕಾರದ ಸಾಧನೆಗಿಂತ ಹೆಚ್ಚಿನ ಸಾಧನೆ ಮಾಡಿದೆ ಎಂದು ತ್ಯಾಗ ರಾಜನ್ ಅವರು ಪ್ರತಿಪಾದಿಸಿದ್ದಾರೆ.

“ನಾನು ಯಾರದೊ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ಅದು ದೇವರ ವಾಕ್ಯವೇ? ನಾನು ದೇವರನ್ನು ನಂಬುತ್ತೇನೆ, ಆದರೆ ಮನುಷ್ಯನೊಬ್ಬ ದೇವರು ಎಂದು ನಾನು ನಂಬುವುದಿಲ್ಲ. ಇನ್ನೊಬ್ಬರ ದೃಷ್ಟಿಕೋನವನ್ನು ನಾನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

“ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ಮುಂದಿನ ಮೂರು ವರ್ಷವೂ ನಾನು ಚೆನ್ನಾಗಿ ಕೆಲಸ ಮಾಡುತ್ತೇನೆ ಎಂಬುವುದನ್ನು ಖಚಿತಪಡಿಸುತ್ತೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಗೆ ದೊಡ್ಡ ಕೊಡುಗೆದಾರರಾಗಿದ್ದು, ಅದಕ್ಕೆ ದೊಡ್ಡ ಮೊತ್ತವನ್ನು ನೀಡುತ್ತಿದ್ದೇವೆ. ಉದಾಹರಣೆಗೆ ಒಂದು ರುಪಾಯಿ ನಾವು ಒಕ್ಕೂಟ ಸರ್ಕಾರಕ್ಕೆ ನೀಡಿದರೆ ಅದು ನಮಗೆ 33-35 ಪೈಸೆ ಅಷ್ಟೆ ವಾಪಾಸು ನೀಡುತ್ತಿದೆ. ಇನ್ನೂ ನಮ್ಮಿಂದ ನಿಮಗೆ ಏನು ಬೇಕು?” ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

“ಇಷ್ಟೆಲ್ಲಾ ಆಗಿಯೂ ನಾನು ಯಾಕೆ ನಿಮ್ಮ ಮಾತನ್ನು ಪಾಲಿಸಬೇಕು? ನಿಮ್ಮ ಮಾತನ್ನು ನಾನು ಪಾಲಿಸಬೇಕು ಎಂಬುವುದಕ್ಕೆ ಯಾವ ಆಧಾರವಿದೆ? ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿದೆಯೆ? ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ. ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ದೇವಲೋಕದಿಂದ ಹೆಚ್ಚುವರಿ ಸಾಂವಿಧಾನಿಕ ಆದೇಶಗಳೇನಾದರೂ ಬರುತ್ತಿದೆಯೆ? ನೀವು ಏನು ಹೇಳುತ್ತಿದ್ದೀರಿ?” ಎಂದು ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಉಚಿತ ಕೊಡುಗೆ’ ಸಂಸ್ಕೃತಿಯ ಚರ್ಚೆ ಇತ್ತೀಚೆಗೆ ರಾಜಕೀಯ ಚರ್ಚೆಯನ್ನು ಪಡೆದುಕೊಂಡಿದೆ. ಕಳೆದ ವಾರದ ಆರಂಭದಲ್ಲಿ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಹಣಕಾಸಿನ ಬಲವನ್ನು ಪರೀಕ್ಷಿಸಿ ಅದಕ್ಕೆ ಅನುಗುಣವಾಗಿ ಬಜೆಟ್ ನಿಬಂಧನೆಗಳನ್ನು ಮಾಡಿ ‘ಪುಕ್ಕಟೆ ಕೊಡುಗೆ’ಗಳ ನೀಡುವಂತೆ ರಾಜ್ಯಗಳಿಗೆ ಕೇಳಿಕೊಂಡಿದ್ದರು.

ಈ ಮಧ್ಯೆ, ಹಲವಾರು ಉನ್ನತ ರಾಜಕೀಯ ನಾಯಕರು ‘ಉಚಿತ ಕೊಡುಗೆ’ ನೀತಿಯನ್ನು ಬೆಂಬಲಿಸಿದ್ದು, ಇದು ಜನ ಕಲ್ಯಾಣಕ್ಕಾಗಿ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಉಚಿತ ಶಿಕ್ಷಣ ಮತ್ತು ಆರೋಗ್ಯ ‘ಉಚಿತ ಕೊಡುಗೆ’ಯಲ್ಲ ಎಂದು ಪ್ರತಿಪಾದಿಸಿದ್ದು, ಇವುಗಳು ಜನರಿಗೆ ಸಿಕ್ಕರೆ ಭಾರತವು ವಿಶ್ವದ ಅಗ್ರ ರಾಷ್ಟ್ರವಾಗಬಹುದು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...