Homeಮುಖಪುಟನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು...

ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ನಿಮ್ಮ ಮಾತು ಕೇಳಬೇಕು ಎಂಬುವುದಕ್ಕೆ ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿಲ್ಲ, ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ, ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ಎಂದು ಅವರು ಹೇಳಿದ್ದಾರೆ

- Advertisement -
- Advertisement -

“ನಾನು ಇನ್ನೊಬ್ಬರ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ನಾನು ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ. ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಯ ದೊಡ್ಡ ಕೊಡುಗೆದಾರರಾಗಿದ್ದೇವೆ. ನಮ್ಮಿಂದ ನಿಮಗೆ ಇನ್ನೇನು ಬೇಕು? ನಾನು ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು?” ಎಂದು ತಮಿಳುನಾಡು ಹಣಕಾಸು ಸಚಿವ ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂಡಿಯಾ ಟುಡೆ ಮಾಧ್ಯಮದಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರಿಗೆ ಉಚಿತ ಸವಲತ್ತುಗಳು ನೀಡುವುದನ್ನು ‘ಪುಕ್ಕಟೆ ಕೊಡುಗೆ’ಗಳು ಎಂದು ಹೇಳುತ್ತಿರುವ ಮೋದಿ ನೇತೃತ್ವದ ಸರ್ಕಾರದ ನಿಲುವಿನ ಬಗ್ಗೆ ಅವರು ಮಾಡಿರುವ ವಾಗ್ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಗಳು ಏನು ಮಾಡಬಹುದು ಎಂಬುದನ್ನು ಒಕ್ಕೂಟ ಸರ್ಕಾರ ಯಾಕೆ ನಿರ್ಧರಿಸಬೇಕು ಎಂದು ತ್ಯಾಗ ರಾಜನ್ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತ್ಯಾಗ ರಾಜನ್, “ನೀವು ಹೇಳಿದ್ದನ್ನು ನಾವು ಕೇಳಬೇಕು ಎಂದು ಹೇಳುವುದಕ್ಕೆ ಒಂದೋ ನೀವು ಸಾಂವಿಧಾನಿಕ ಆಧಾರವನ್ನು ಹೊಂದಿರಬೇಕು ಅಥವಾ ನೀವು ವಿಷಯದಲ್ಲಿ ಪರಿಣತಿ ಹೊಂದಿದ್ದರೆ ಅಥವಾ ಅರ್ಥಶಾಸ್ತ್ರದಲ್ಲಿ ಡಬ್ಬಲ್ ಪಿಎಚ್‌ಡಿ ಹೊಂದಿದ್ದರೆ, ನೋಬೆಲ್ ಪ್ರಶಸ್ತಿ ಪಡೆದಿದ್ದರೆ, ನಮಗಿಂತ ಚೆನ್ನಾಗಿ ನೀವು ಕೆಲಸ ಮಾಡುತ್ತಿದ್ದರೆ, ನೀವು ಆರ್ಥಿಕತೆಯನ್ನು ಬೆಳೆಸಿದ್ದೀರಿ ಎಂದಾದರೆ, ಸಾಲವನ್ನು ಕಡಿಮೆ ಮಾಡಿದ್ದೀರಿ ಎಂದಾದರೆ, ನೀವು ಉದ್ಯೋಗಗಳನ್ನು ಸೃಷ್ಟಿಸಿದ್ಧೀರಿ ಎಂದು ತೋರಿಸುವ ಕೆಲವು ಕಾರ್ಯಕ್ಷಮತೆಯ ಹಿನ್ನಲೆಯನ್ನು ನೀವು ಹೊಂದಿದ್ದರೆ ನಾವು ನೀವು ಹೇಳುವುದನ್ನು ಕೇಳುತ್ತೇವೆ. ಆದರೆ ಇದು ಯಾವುದೂ ಇಲ್ಲದೆ, ನಾವು ಯಾಕೆ ಇನ್ನೊಬ್ಬರ ಅಭಿಪ್ರಾಯವನ್ನು ಕೇಳಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ತಮಿಳುನಾಡು ಸರ್ಕಾರವು ಒಕ್ಕೂಟ ಸರ್ಕಾರದ ಸಾಧನೆಗಿಂತ ಹೆಚ್ಚಿನ ಸಾಧನೆ ಮಾಡಿದೆ ಎಂದು ತ್ಯಾಗ ರಾಜನ್ ಅವರು ಪ್ರತಿಪಾದಿಸಿದ್ದಾರೆ.

“ನಾನು ಯಾರದೊ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ಅದು ದೇವರ ವಾಕ್ಯವೇ? ನಾನು ದೇವರನ್ನು ನಂಬುತ್ತೇನೆ, ಆದರೆ ಮನುಷ್ಯನೊಬ್ಬ ದೇವರು ಎಂದು ನಾನು ನಂಬುವುದಿಲ್ಲ. ಇನ್ನೊಬ್ಬರ ದೃಷ್ಟಿಕೋನವನ್ನು ನಾನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

“ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ಮುಂದಿನ ಮೂರು ವರ್ಷವೂ ನಾನು ಚೆನ್ನಾಗಿ ಕೆಲಸ ಮಾಡುತ್ತೇನೆ ಎಂಬುವುದನ್ನು ಖಚಿತಪಡಿಸುತ್ತೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಗೆ ದೊಡ್ಡ ಕೊಡುಗೆದಾರರಾಗಿದ್ದು, ಅದಕ್ಕೆ ದೊಡ್ಡ ಮೊತ್ತವನ್ನು ನೀಡುತ್ತಿದ್ದೇವೆ. ಉದಾಹರಣೆಗೆ ಒಂದು ರುಪಾಯಿ ನಾವು ಒಕ್ಕೂಟ ಸರ್ಕಾರಕ್ಕೆ ನೀಡಿದರೆ ಅದು ನಮಗೆ 33-35 ಪೈಸೆ ಅಷ್ಟೆ ವಾಪಾಸು ನೀಡುತ್ತಿದೆ. ಇನ್ನೂ ನಮ್ಮಿಂದ ನಿಮಗೆ ಏನು ಬೇಕು?” ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

“ಇಷ್ಟೆಲ್ಲಾ ಆಗಿಯೂ ನಾನು ಯಾಕೆ ನಿಮ್ಮ ಮಾತನ್ನು ಪಾಲಿಸಬೇಕು? ನಿಮ್ಮ ಮಾತನ್ನು ನಾನು ಪಾಲಿಸಬೇಕು ಎಂಬುವುದಕ್ಕೆ ಯಾವ ಆಧಾರವಿದೆ? ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿದೆಯೆ? ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ. ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ದೇವಲೋಕದಿಂದ ಹೆಚ್ಚುವರಿ ಸಾಂವಿಧಾನಿಕ ಆದೇಶಗಳೇನಾದರೂ ಬರುತ್ತಿದೆಯೆ? ನೀವು ಏನು ಹೇಳುತ್ತಿದ್ದೀರಿ?” ಎಂದು ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಉಚಿತ ಕೊಡುಗೆ’ ಸಂಸ್ಕೃತಿಯ ಚರ್ಚೆ ಇತ್ತೀಚೆಗೆ ರಾಜಕೀಯ ಚರ್ಚೆಯನ್ನು ಪಡೆದುಕೊಂಡಿದೆ. ಕಳೆದ ವಾರದ ಆರಂಭದಲ್ಲಿ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಹಣಕಾಸಿನ ಬಲವನ್ನು ಪರೀಕ್ಷಿಸಿ ಅದಕ್ಕೆ ಅನುಗುಣವಾಗಿ ಬಜೆಟ್ ನಿಬಂಧನೆಗಳನ್ನು ಮಾಡಿ ‘ಪುಕ್ಕಟೆ ಕೊಡುಗೆ’ಗಳ ನೀಡುವಂತೆ ರಾಜ್ಯಗಳಿಗೆ ಕೇಳಿಕೊಂಡಿದ್ದರು.

ಈ ಮಧ್ಯೆ, ಹಲವಾರು ಉನ್ನತ ರಾಜಕೀಯ ನಾಯಕರು ‘ಉಚಿತ ಕೊಡುಗೆ’ ನೀತಿಯನ್ನು ಬೆಂಬಲಿಸಿದ್ದು, ಇದು ಜನ ಕಲ್ಯಾಣಕ್ಕಾಗಿ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಉಚಿತ ಶಿಕ್ಷಣ ಮತ್ತು ಆರೋಗ್ಯ ‘ಉಚಿತ ಕೊಡುಗೆ’ಯಲ್ಲ ಎಂದು ಪ್ರತಿಪಾದಿಸಿದ್ದು, ಇವುಗಳು ಜನರಿಗೆ ಸಿಕ್ಕರೆ ಭಾರತವು ವಿಶ್ವದ ಅಗ್ರ ರಾಷ್ಟ್ರವಾಗಬಹುದು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....