Homeಮುಖಪುಟನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು...

ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ನಿಮ್ಮ ಮಾತು ಕೇಳಬೇಕು ಎಂಬುವುದಕ್ಕೆ ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿಲ್ಲ, ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ, ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ಎಂದು ಅವರು ಹೇಳಿದ್ದಾರೆ

- Advertisement -
- Advertisement -

“ನಾನು ಇನ್ನೊಬ್ಬರ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ನಾನು ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ. ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಯ ದೊಡ್ಡ ಕೊಡುಗೆದಾರರಾಗಿದ್ದೇವೆ. ನಮ್ಮಿಂದ ನಿಮಗೆ ಇನ್ನೇನು ಬೇಕು? ನಾನು ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು?” ಎಂದು ತಮಿಳುನಾಡು ಹಣಕಾಸು ಸಚಿವ ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂಡಿಯಾ ಟುಡೆ ಮಾಧ್ಯಮದಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರಿಗೆ ಉಚಿತ ಸವಲತ್ತುಗಳು ನೀಡುವುದನ್ನು ‘ಪುಕ್ಕಟೆ ಕೊಡುಗೆ’ಗಳು ಎಂದು ಹೇಳುತ್ತಿರುವ ಮೋದಿ ನೇತೃತ್ವದ ಸರ್ಕಾರದ ನಿಲುವಿನ ಬಗ್ಗೆ ಅವರು ಮಾಡಿರುವ ವಾಗ್ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಗಳು ಏನು ಮಾಡಬಹುದು ಎಂಬುದನ್ನು ಒಕ್ಕೂಟ ಸರ್ಕಾರ ಯಾಕೆ ನಿರ್ಧರಿಸಬೇಕು ಎಂದು ತ್ಯಾಗ ರಾಜನ್ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತ್ಯಾಗ ರಾಜನ್, “ನೀವು ಹೇಳಿದ್ದನ್ನು ನಾವು ಕೇಳಬೇಕು ಎಂದು ಹೇಳುವುದಕ್ಕೆ ಒಂದೋ ನೀವು ಸಾಂವಿಧಾನಿಕ ಆಧಾರವನ್ನು ಹೊಂದಿರಬೇಕು ಅಥವಾ ನೀವು ವಿಷಯದಲ್ಲಿ ಪರಿಣತಿ ಹೊಂದಿದ್ದರೆ ಅಥವಾ ಅರ್ಥಶಾಸ್ತ್ರದಲ್ಲಿ ಡಬ್ಬಲ್ ಪಿಎಚ್‌ಡಿ ಹೊಂದಿದ್ದರೆ, ನೋಬೆಲ್ ಪ್ರಶಸ್ತಿ ಪಡೆದಿದ್ದರೆ, ನಮಗಿಂತ ಚೆನ್ನಾಗಿ ನೀವು ಕೆಲಸ ಮಾಡುತ್ತಿದ್ದರೆ, ನೀವು ಆರ್ಥಿಕತೆಯನ್ನು ಬೆಳೆಸಿದ್ದೀರಿ ಎಂದಾದರೆ, ಸಾಲವನ್ನು ಕಡಿಮೆ ಮಾಡಿದ್ದೀರಿ ಎಂದಾದರೆ, ನೀವು ಉದ್ಯೋಗಗಳನ್ನು ಸೃಷ್ಟಿಸಿದ್ಧೀರಿ ಎಂದು ತೋರಿಸುವ ಕೆಲವು ಕಾರ್ಯಕ್ಷಮತೆಯ ಹಿನ್ನಲೆಯನ್ನು ನೀವು ಹೊಂದಿದ್ದರೆ ನಾವು ನೀವು ಹೇಳುವುದನ್ನು ಕೇಳುತ್ತೇವೆ. ಆದರೆ ಇದು ಯಾವುದೂ ಇಲ್ಲದೆ, ನಾವು ಯಾಕೆ ಇನ್ನೊಬ್ಬರ ಅಭಿಪ್ರಾಯವನ್ನು ಕೇಳಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ತಮಿಳುನಾಡು ಸರ್ಕಾರವು ಒಕ್ಕೂಟ ಸರ್ಕಾರದ ಸಾಧನೆಗಿಂತ ಹೆಚ್ಚಿನ ಸಾಧನೆ ಮಾಡಿದೆ ಎಂದು ತ್ಯಾಗ ರಾಜನ್ ಅವರು ಪ್ರತಿಪಾದಿಸಿದ್ದಾರೆ.

“ನಾನು ಯಾರದೊ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ಅದು ದೇವರ ವಾಕ್ಯವೇ? ನಾನು ದೇವರನ್ನು ನಂಬುತ್ತೇನೆ, ಆದರೆ ಮನುಷ್ಯನೊಬ್ಬ ದೇವರು ಎಂದು ನಾನು ನಂಬುವುದಿಲ್ಲ. ಇನ್ನೊಬ್ಬರ ದೃಷ್ಟಿಕೋನವನ್ನು ನಾನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

“ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ಮುಂದಿನ ಮೂರು ವರ್ಷವೂ ನಾನು ಚೆನ್ನಾಗಿ ಕೆಲಸ ಮಾಡುತ್ತೇನೆ ಎಂಬುವುದನ್ನು ಖಚಿತಪಡಿಸುತ್ತೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಗೆ ದೊಡ್ಡ ಕೊಡುಗೆದಾರರಾಗಿದ್ದು, ಅದಕ್ಕೆ ದೊಡ್ಡ ಮೊತ್ತವನ್ನು ನೀಡುತ್ತಿದ್ದೇವೆ. ಉದಾಹರಣೆಗೆ ಒಂದು ರುಪಾಯಿ ನಾವು ಒಕ್ಕೂಟ ಸರ್ಕಾರಕ್ಕೆ ನೀಡಿದರೆ ಅದು ನಮಗೆ 33-35 ಪೈಸೆ ಅಷ್ಟೆ ವಾಪಾಸು ನೀಡುತ್ತಿದೆ. ಇನ್ನೂ ನಮ್ಮಿಂದ ನಿಮಗೆ ಏನು ಬೇಕು?” ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

“ಇಷ್ಟೆಲ್ಲಾ ಆಗಿಯೂ ನಾನು ಯಾಕೆ ನಿಮ್ಮ ಮಾತನ್ನು ಪಾಲಿಸಬೇಕು? ನಿಮ್ಮ ಮಾತನ್ನು ನಾನು ಪಾಲಿಸಬೇಕು ಎಂಬುವುದಕ್ಕೆ ಯಾವ ಆಧಾರವಿದೆ? ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿದೆಯೆ? ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ. ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ದೇವಲೋಕದಿಂದ ಹೆಚ್ಚುವರಿ ಸಾಂವಿಧಾನಿಕ ಆದೇಶಗಳೇನಾದರೂ ಬರುತ್ತಿದೆಯೆ? ನೀವು ಏನು ಹೇಳುತ್ತಿದ್ದೀರಿ?” ಎಂದು ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಉಚಿತ ಕೊಡುಗೆ’ ಸಂಸ್ಕೃತಿಯ ಚರ್ಚೆ ಇತ್ತೀಚೆಗೆ ರಾಜಕೀಯ ಚರ್ಚೆಯನ್ನು ಪಡೆದುಕೊಂಡಿದೆ. ಕಳೆದ ವಾರದ ಆರಂಭದಲ್ಲಿ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಹಣಕಾಸಿನ ಬಲವನ್ನು ಪರೀಕ್ಷಿಸಿ ಅದಕ್ಕೆ ಅನುಗುಣವಾಗಿ ಬಜೆಟ್ ನಿಬಂಧನೆಗಳನ್ನು ಮಾಡಿ ‘ಪುಕ್ಕಟೆ ಕೊಡುಗೆ’ಗಳ ನೀಡುವಂತೆ ರಾಜ್ಯಗಳಿಗೆ ಕೇಳಿಕೊಂಡಿದ್ದರು.

ಈ ಮಧ್ಯೆ, ಹಲವಾರು ಉನ್ನತ ರಾಜಕೀಯ ನಾಯಕರು ‘ಉಚಿತ ಕೊಡುಗೆ’ ನೀತಿಯನ್ನು ಬೆಂಬಲಿಸಿದ್ದು, ಇದು ಜನ ಕಲ್ಯಾಣಕ್ಕಾಗಿ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಉಚಿತ ಶಿಕ್ಷಣ ಮತ್ತು ಆರೋಗ್ಯ ‘ಉಚಿತ ಕೊಡುಗೆ’ಯಲ್ಲ ಎಂದು ಪ್ರತಿಪಾದಿಸಿದ್ದು, ಇವುಗಳು ಜನರಿಗೆ ಸಿಕ್ಕರೆ ಭಾರತವು ವಿಶ್ವದ ಅಗ್ರ ರಾಷ್ಟ್ರವಾಗಬಹುದು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...