Homeಮುಖಪುಟನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು...

ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ನಿಮ್ಮ ಮಾತು ಕೇಳಬೇಕು ಎಂಬುವುದಕ್ಕೆ ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿಲ್ಲ, ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ, ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ಎಂದು ಅವರು ಹೇಳಿದ್ದಾರೆ

- Advertisement -
- Advertisement -

“ನಾನು ಇನ್ನೊಬ್ಬರ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ನಾನು ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ. ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಯ ದೊಡ್ಡ ಕೊಡುಗೆದಾರರಾಗಿದ್ದೇವೆ. ನಮ್ಮಿಂದ ನಿಮಗೆ ಇನ್ನೇನು ಬೇಕು? ನಾನು ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು?” ಎಂದು ತಮಿಳುನಾಡು ಹಣಕಾಸು ಸಚಿವ ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂಡಿಯಾ ಟುಡೆ ಮಾಧ್ಯಮದಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರಿಗೆ ಉಚಿತ ಸವಲತ್ತುಗಳು ನೀಡುವುದನ್ನು ‘ಪುಕ್ಕಟೆ ಕೊಡುಗೆ’ಗಳು ಎಂದು ಹೇಳುತ್ತಿರುವ ಮೋದಿ ನೇತೃತ್ವದ ಸರ್ಕಾರದ ನಿಲುವಿನ ಬಗ್ಗೆ ಅವರು ಮಾಡಿರುವ ವಾಗ್ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಗಳು ಏನು ಮಾಡಬಹುದು ಎಂಬುದನ್ನು ಒಕ್ಕೂಟ ಸರ್ಕಾರ ಯಾಕೆ ನಿರ್ಧರಿಸಬೇಕು ಎಂದು ತ್ಯಾಗ ರಾಜನ್ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತ್ಯಾಗ ರಾಜನ್, “ನೀವು ಹೇಳಿದ್ದನ್ನು ನಾವು ಕೇಳಬೇಕು ಎಂದು ಹೇಳುವುದಕ್ಕೆ ಒಂದೋ ನೀವು ಸಾಂವಿಧಾನಿಕ ಆಧಾರವನ್ನು ಹೊಂದಿರಬೇಕು ಅಥವಾ ನೀವು ವಿಷಯದಲ್ಲಿ ಪರಿಣತಿ ಹೊಂದಿದ್ದರೆ ಅಥವಾ ಅರ್ಥಶಾಸ್ತ್ರದಲ್ಲಿ ಡಬ್ಬಲ್ ಪಿಎಚ್‌ಡಿ ಹೊಂದಿದ್ದರೆ, ನೋಬೆಲ್ ಪ್ರಶಸ್ತಿ ಪಡೆದಿದ್ದರೆ, ನಮಗಿಂತ ಚೆನ್ನಾಗಿ ನೀವು ಕೆಲಸ ಮಾಡುತ್ತಿದ್ದರೆ, ನೀವು ಆರ್ಥಿಕತೆಯನ್ನು ಬೆಳೆಸಿದ್ದೀರಿ ಎಂದಾದರೆ, ಸಾಲವನ್ನು ಕಡಿಮೆ ಮಾಡಿದ್ದೀರಿ ಎಂದಾದರೆ, ನೀವು ಉದ್ಯೋಗಗಳನ್ನು ಸೃಷ್ಟಿಸಿದ್ಧೀರಿ ಎಂದು ತೋರಿಸುವ ಕೆಲವು ಕಾರ್ಯಕ್ಷಮತೆಯ ಹಿನ್ನಲೆಯನ್ನು ನೀವು ಹೊಂದಿದ್ದರೆ ನಾವು ನೀವು ಹೇಳುವುದನ್ನು ಕೇಳುತ್ತೇವೆ. ಆದರೆ ಇದು ಯಾವುದೂ ಇಲ್ಲದೆ, ನಾವು ಯಾಕೆ ಇನ್ನೊಬ್ಬರ ಅಭಿಪ್ರಾಯವನ್ನು ಕೇಳಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಐಎಡಿಎಂಕೆ ಅಧಿಕಾರ ಕಿತ್ತಾಟ: ಇ.ಪಳನಿಸ್ವಾಮಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ತಮಿಳುನಾಡು ಸರ್ಕಾರವು ಒಕ್ಕೂಟ ಸರ್ಕಾರದ ಸಾಧನೆಗಿಂತ ಹೆಚ್ಚಿನ ಸಾಧನೆ ಮಾಡಿದೆ ಎಂದು ತ್ಯಾಗ ರಾಜನ್ ಅವರು ಪ್ರತಿಪಾದಿಸಿದ್ದಾರೆ.

“ನಾನು ಯಾರದೊ ದೃಷ್ಟಿಕೋನವನ್ನು ಯಾಕೆ ತೆಗೆದುಕೊಳ್ಳಬೇಕು? ಅದು ದೇವರ ವಾಕ್ಯವೇ? ನಾನು ದೇವರನ್ನು ನಂಬುತ್ತೇನೆ, ಆದರೆ ಮನುಷ್ಯನೊಬ್ಬ ದೇವರು ಎಂದು ನಾನು ನಂಬುವುದಿಲ್ಲ. ಇನ್ನೊಬ್ಬರ ದೃಷ್ಟಿಕೋನವನ್ನು ನಾನು ಯಾಕೆ ತೆಗೆದುಕೊಳ್ಳಬೇಕು? ನಾನು ಏನು ಮಾಡಬೇಕು ಎಂಬ ಅಧಿಕಾರವನ್ನು ಚುನಾವಣೆ ಮೂಲಕ ನನಗೆ ನೀಡಲಾಗಿದೆ. ನನ್ನ ಮುಖ್ಯಮಂತ್ರಿ ನನಗೆ ಕೆಲಸ ಕೊಟ್ಟಿದ್ದಾರೆ, ಅದನ್ನು ಚೆನ್ನಾಗಿ ಮಾಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

“ನಾನು ಒಕ್ಕೂಟ ಸರ್ಕಾರಕ್ಕಿಂತ ಹೆಚ್ಚಿನ ಸಾಧನೆ ಮಾಡುತ್ತಿದ್ದೇನೆ. ಮುಂದಿನ ಮೂರು ವರ್ಷವೂ ನಾನು ಚೆನ್ನಾಗಿ ಕೆಲಸ ಮಾಡುತ್ತೇನೆ ಎಂಬುವುದನ್ನು ಖಚಿತಪಡಿಸುತ್ತೇನೆ. ನಾವು ಒಕ್ಕೂಟ ಸರ್ಕಾರದ ಖಜಾನೆಗೆ ದೊಡ್ಡ ಕೊಡುಗೆದಾರರಾಗಿದ್ದು, ಅದಕ್ಕೆ ದೊಡ್ಡ ಮೊತ್ತವನ್ನು ನೀಡುತ್ತಿದ್ದೇವೆ. ಉದಾಹರಣೆಗೆ ಒಂದು ರುಪಾಯಿ ನಾವು ಒಕ್ಕೂಟ ಸರ್ಕಾರಕ್ಕೆ ನೀಡಿದರೆ ಅದು ನಮಗೆ 33-35 ಪೈಸೆ ಅಷ್ಟೆ ವಾಪಾಸು ನೀಡುತ್ತಿದೆ. ಇನ್ನೂ ನಮ್ಮಿಂದ ನಿಮಗೆ ಏನು ಬೇಕು?” ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ’ಉಚಿತ ಕೊಡುಗೆ’ ಒಂದು ರೋಗವೆ? ಸುಪ್ರೀಂ ಕೋರ್ಟಿನ ವಿಚಾರಣೆ ಮತ್ತು ಬಡ ಭಾರತದ ಪ್ರಜಾಪ್ರಭುತ್ವ

“ಇಷ್ಟೆಲ್ಲಾ ಆಗಿಯೂ ನಾನು ಯಾಕೆ ನಿಮ್ಮ ಮಾತನ್ನು ಪಾಲಿಸಬೇಕು? ನಿಮ್ಮ ಮಾತನ್ನು ನಾನು ಪಾಲಿಸಬೇಕು ಎಂಬುವುದಕ್ಕೆ ಯಾವ ಆಧಾರವಿದೆ? ಸಾಂವಿಧಾನಿಕ ಆಧಾರವಿಲ್ಲ, ನೀವು ಆರ್ಥಿಕ ತಜ್ಞರಲ್ಲ, ನಿಮಗೆ ನೊಬೆಲ್ ಪ್ರಶಸ್ತಿ ಬಂದಿದೆಯೆ? ನೀವು ನಮಗಿಂತ ಚೆನ್ನಾಗಿ ಕೆಲಸ ಮಾಡುತ್ತಿಲ್ಲ. ಆದರೂ ನಿಮಗಾಗಿ ನನ್ನ ನೀತಿಯನ್ನು ಯಾವ ಆಧಾರದ ಮೇಲೆ ಬದಲಾಯಿಸಬೇಕು? ದೇವಲೋಕದಿಂದ ಹೆಚ್ಚುವರಿ ಸಾಂವಿಧಾನಿಕ ಆದೇಶಗಳೇನಾದರೂ ಬರುತ್ತಿದೆಯೆ? ನೀವು ಏನು ಹೇಳುತ್ತಿದ್ದೀರಿ?” ಎಂದು ಡಾ.ಪಿ. ತ್ಯಾಗ ರಾಜನ್ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಉಚಿತ ಕೊಡುಗೆ’ ಸಂಸ್ಕೃತಿಯ ಚರ್ಚೆ ಇತ್ತೀಚೆಗೆ ರಾಜಕೀಯ ಚರ್ಚೆಯನ್ನು ಪಡೆದುಕೊಂಡಿದೆ. ಕಳೆದ ವಾರದ ಆರಂಭದಲ್ಲಿ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಹಣಕಾಸಿನ ಬಲವನ್ನು ಪರೀಕ್ಷಿಸಿ ಅದಕ್ಕೆ ಅನುಗುಣವಾಗಿ ಬಜೆಟ್ ನಿಬಂಧನೆಗಳನ್ನು ಮಾಡಿ ‘ಪುಕ್ಕಟೆ ಕೊಡುಗೆ’ಗಳ ನೀಡುವಂತೆ ರಾಜ್ಯಗಳಿಗೆ ಕೇಳಿಕೊಂಡಿದ್ದರು.

ಈ ಮಧ್ಯೆ, ಹಲವಾರು ಉನ್ನತ ರಾಜಕೀಯ ನಾಯಕರು ‘ಉಚಿತ ಕೊಡುಗೆ’ ನೀತಿಯನ್ನು ಬೆಂಬಲಿಸಿದ್ದು, ಇದು ಜನ ಕಲ್ಯಾಣಕ್ಕಾಗಿ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ 

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಉಚಿತ ಶಿಕ್ಷಣ ಮತ್ತು ಆರೋಗ್ಯ ‘ಉಚಿತ ಕೊಡುಗೆ’ಯಲ್ಲ ಎಂದು ಪ್ರತಿಪಾದಿಸಿದ್ದು, ಇವುಗಳು ಜನರಿಗೆ ಸಿಕ್ಕರೆ ಭಾರತವು ವಿಶ್ವದ ಅಗ್ರ ರಾಷ್ಟ್ರವಾಗಬಹುದು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...