ದೆಹಲಿ ಫಲಿತಾಂಶದ ಸೂಚನೆಗಳ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಭಿನಂದಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ‘ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ’ ಎಂದು ಹೇಳಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಎಎಪಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ಹಾಗಾಗಿ ಮಮತಾ ಬ್ಯಾನರ್ಜಿಯವರು “ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಅಭಿವೃದ್ಧಿ ಮಾತ್ರ ಕೆಲಸ ಮಾಡುತ್ತದೆ, ಸಿಎಎ, ಎನ್ಆರ್ಸಿ ಮತ್ತು ಎನ್ಪಿಆರ್ ಅನ್ನು ತಿರಸ್ಕರಿಸಲಾಗುವುದು” ಎಂದು ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
Congratulations @ArvindKejriwal as #DelhiResults show @AamAadmiParty all set to win #DelhiElection2020 with a thumping majority yet again. Leaders playing on faith through hate speech & divisive politics should take a cue, as only those who deliver on their promises are rewarded.
— Mamata Banerjee (@MamataOfficial) February 11, 2020
“ದೆಹಲಿ ಫಲಿತಾಂಶಗಳನ್ನು ನೋಡಿದರೆ ಆಮ್ ಆದ್ಮಿ ಪಕ್ಷವು ಮತ್ತೊಮ್ಮೆ ಬಹುಮತದೊಂದಿಗೆ ಗೆಲ್ಲುವುದು ಸ್ಪಷ್ಟವಾಗಿದೆ. ದ್ವೇಷದ ಮಾತು ಮತ್ತು ವಿಭಜಕ ರಾಜಕಾರಣ ಮಾಡುವವರಿಗಗೆ ಒಂದು ಮಾತು ಹೇಳಲು ಬಯಸುತ್ತೇನೆ. ಕೊಟ್ಟ ಭರವಸೆಗಳನ್ನು ಪೂರೈಸುವವರು ಮಾತ್ರ ಗೌರವಿಸಲ್ಪಡುತ್ತಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.