Homeಮುಖಪುಟಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಕಣಕ್ಕಿಳಿದಿದ್ದ ಬಿಜೆಪಿ, ಶಿವಸೇನೆ ೧೫೮ ಸ್ಥಾನಗಳನ್ನು ಬಾಚಿಕೊಂಡಿವೆ. ಇತ್ತ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಮೈತ್ರಿ ೯೮ ಸ್ಥಾನಗಳನ್ನು ಗೆದ್ದಿದೆ. ಬಹುಮತ ಸಾಧಿಸಿರುವ ಬಿಜೆಪಿ ಮತ್ತು ಶಿವಸೇನೆಯಲ್ಲೀಗ ಸಿಎಂ ಹುದ್ದೆಗಾಗಿ ಜಟಾಪಟಿ ನಡೆದಿದೆ.

ಶಿವಸೇನೆ ತನ್ನ ಪತ್ರಿಕೆ ಸಾಮ್ನಾದಲ್ಲಿ ಚುನಾವಣಾ ಫಲಿತಾಂಶವನ್ನು ವಿಶ್ಲೇಷಿಸಿದೆ. ಮಹಾರಾಷ್ಟ್ರದಲ್ಲಿ ಜನಾದೇಶ ಅಧಿಕಾರದ ದುರಹಂಕಾರದಲ್ಲಿದ್ದವರಿಗೆ ಸರಿಯಾಗಿ ಏಟು ಕೊಟ್ಟಿದೆ. ’ಮಹಾ’ ಜನಾದೇಶ, ಕಾಂಗ್ರೆಸ್‌ ಚೇತರಿಕೆ ಕಂಡಿದ್ದು, ಹೆಚ್ಚು ಸುಧಾರಿಸುತ್ತಿದೆ ಎಂದು ಹೇಳುತ್ತಿದೆ. ಸಮೀಕ್ಷೆಗಿಂತ ಮತದಾರರ ಉತ್ತರ ಮುಖ್ಯ ವಿರೋಧ ಪಕ್ಷಗಳಾದ ಎನ್‌ಸಿಪಿ ಹಾಗೂ ಕಾಂಗ್ರೆಸ್‌ನತ್ತ ಒಲವು ತೋರಿದ್ದನ್ನು ಸ್ಪಷ್ಟಪಡಿಸಿವೆ. ವಿರೋಧ ಪಕ್ಷಗಳನ್ನು ರಾಜಕೀಯದಲ್ಲಿ ಸುಲಭಕ್ಕೆ ಮುಗಿಸಲು ಸಾಧ್ಯವಿಲ್ಲ ಎಂಬುದನ್ನು ಹೇಳಿವೆ ಎಂದು ಶಿವಸೇನೆ ತನ್ನ ಮಿತ್ರ ಬಿಜೆಪಿಯನ್ನು ಟೀಕಿಸಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ೨೮೮ ಕ್ಷೇತ್ರಗಳ ಪೈಕಿ ೨೦೦ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ೨೦೦ಕ್ಕೂ ಹೆಚ್ಚು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದರು. ಆದರೆ ಮಹಾರಾಷ್ಟ್ರ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕೇವಲ ೧೫೮ ಕ್ಷೇತ್ರಗಳನ್ನು ಗೆದ್ದಿದೆ.

’೨೦೧೪ಕ್ಕಿಂತ ಈ ಬಾರಿಯ ಚುನಾವಣಾ ಫಲಿತಾಂಶ ಕಡಿಮೆ ಬಂದಿದೆ. ಇವಿಎಂ ಮತ್ತು ವಿಪಕ್ಷಗಳನ್ನು ವಿಭಜಿಸುವ ತಂತ್ರಗಳ ಮೂಲಕ ಗೆಲ್ಲುತ್ತೇವೆ ಎಂಬ ನಂಬಿಕೆಯನ್ನು, ೨೦೧೯ರ ವಿಧಾನಸಭಾ ಚುನವಣಾ ಫಲಿತಾಂಶ ಹುಸಿಗೊಳಿಸಿದೆ ಎಂಬುದಾಗಿ ಶಿವಸೇನೆ ಹೇಳಿದೆ.

’ಸರಾಸರಿ ಲೆಕ್ಕಾಚಾರ ಹಾಕಿದರೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಹಿಂದೆಂದಿಗಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆದ್ದಿವೆ. ಇದು ವಿರೋಧ ಪಕ್ಷಗಳನ್ನು ಅಷ್ಟು ಸುಲಭಕ್ಕೆ ಮುಗಿಸಲು ಸಾಧ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದೆ. ಎನ್‌ಸಿಪಿ 50 ಸ್ಥಾನಗಳ ಗಡಿ ದಾಟಿದರೆ, ನಾಯಕರಿಲ್ಲದ ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಂಡಿದೆ. ಫಲಿತಾಂಶ ಅಧಿಕಾರದ ದುರಹಂಕಾರವನ್ನು ತೋರಿಸಿದರೆ ಸೋಲೊಂದೇ ಉತ್ತರ ಎಂಬುದನ್ನು ಮತದಾರರು ತೋರಿಸಿಕೊಟ್ಟಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷ ಹೇಳಿದೆ.

೨೦೧೪ರಲ್ಲಿ ಬಿಜೆಪಿ ೧೨೨ ಸ್ಥಾನ ಗೆದ್ದಿತ್ತು. ಆದರೆ ೨೦೧೯ರ ವೇಳೆಗೆ ೧೦೫ಕ್ಕೆ ಇಳಿದಿದೆ. ಶಿವಸೇನೆ ೨೦೧೪ರಲ್ಲಿ ೬೩ ಸ್ಥಾನ ಗೆದ್ದುಕೊಂಡಿತ್ತು. ಆದರೆ ಈ ಬಾರಿ ೫೬ ಸ್ಥಾನ ಗೆದ್ದಿದ್ದು, ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದಿರುವುದನ್ನು ತೋರಿಸುತ್ತಿದೆ. ೨೫ ಸ್ಥಾನಗಳನ್ನು ಇತರೆ ಪಕ್ಷದ ನಾಯಕರು ಗೆದ್ದಿದ್ದಾರೆ. ಇದೊಂದು ಎಚ್ಚರಿಕೆಯ ಕರೆಗಂಟೆಯಾಗಿದೆ. ’ನೀವು ಅಧಿಕಾರದ ದುರಂಹಕಾರ ತೋರಿಸಿದರೆ, ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಜನ ನೀಡಿದ್ದಾರೆ’ ಎಂದು ಹೇಳಿದೆ.

ಶಿವಾಜಿ ಮಹಾರಾಜರ ಸತಾರಾದಲ್ಲಿ ಬಿಜೆಪಿ ಅಭ್ಯರ್ಥಿ ಉದಯನ್‌ರಾಜೇ ಸೋತಿದ್ದಾರೆ. ಶಿವಾಜಿ ಮಹಾರಾಜರ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದನ್ನು ಜನ ಒಪ್ಪಿಲ್ಲ. ಶಿವಾಜಿ ಹೆಸರು ಹೇಳಿಕೊಂಡು ರಾಜಕೀಯ ಮಾಡುವುದು, ಅವಕಾಶ ತೆಗೆದುಕೊಳ್ಳುವುದನ್ನು ಜನ ವಿರೋಧಿಸಿದ್ದು, ಸೋಲಿನ ಕಹಿ ಉಣಿಸಿದ್ದಾರೆ.

ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಹೆಚ್ಚಿನ ಸೀಟು ಗೆಲ್ಲಲು ಹೇಗೆ ಸಾಧ್ಯವಾಯಿತು..? ಚುನಾವಣೆ ಪೂರ್ವ ಸಮೀಕ್ಷೆಗಳ ತೀರ್ಪಿಗೆ ಮತದಾರರ ತೀರ್ಪು ವಿರುದ್ಧವಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾಕಷ್ಟು ರ್‍ಯಾಲಿಗಳನ್ನು ನಡೆಸಿದರೂ ಸತಾರಾದಲ್ಲಿ ಉದಯನ್‌ರಾಜೇ ಗೆಲ್ಲಲು ಸಾಧ್ಯವಾಗಿಲ್ಲ. ಸತಾರಾದ ಜನತೆ ಎನ್‌ಸಿಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಅಲ್ಲದೇ ಬಿಜೆಪಿ ಸಿಎಂಗಿಂತ ಶರದ್‌ ಪವಾರ್‌ ಜನಪ್ರಿಯತೆ ಹೆಚ್ಚಿದೆ ಎಂಬುದನ್ನು ಸತಾರಾ ಜನತೆ ಸಾಬೀತುಪಡಿಸಿದ್ದಾರೆ ಎಂದು ಬರೆದಿದೆ.

ಇತ್ತ ಮರಾಠಿ ಪತ್ರಿಕೆಯೊಂದು ಬಿಜೆಪಿ, ಎನ್‌ಸಿಪಿಯನ್ನು ಹಣಿಯಲು ಸಾಕಷ್ಟು ಕಸರತ್ತು ನಡೆಸಿತು. ಆದರೂ ಸಹ ಶರದ್‌ ಪವಾರ್‌ ಪಕ್ಷಕ್ಕೆ ಮುಂದೆ ಭವಿಷ್ಯವಿದೆ ಎಂಬುದನ್ನು ಮಹಾ ಜನಾದೇಶ ಎತ್ತಿ ಹಿಡಿದಿದೆ ಎಂದು ವಿಶ್ಲೇಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....