Homeಮುಖಪುಟಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಕಣಕ್ಕಿಳಿದಿದ್ದ ಬಿಜೆಪಿ, ಶಿವಸೇನೆ ೧೫೮ ಸ್ಥಾನಗಳನ್ನು ಬಾಚಿಕೊಂಡಿವೆ. ಇತ್ತ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಮೈತ್ರಿ ೯೮ ಸ್ಥಾನಗಳನ್ನು ಗೆದ್ದಿದೆ. ಬಹುಮತ ಸಾಧಿಸಿರುವ ಬಿಜೆಪಿ ಮತ್ತು ಶಿವಸೇನೆಯಲ್ಲೀಗ ಸಿಎಂ ಹುದ್ದೆಗಾಗಿ ಜಟಾಪಟಿ ನಡೆದಿದೆ.

ಶಿವಸೇನೆ ತನ್ನ ಪತ್ರಿಕೆ ಸಾಮ್ನಾದಲ್ಲಿ ಚುನಾವಣಾ ಫಲಿತಾಂಶವನ್ನು ವಿಶ್ಲೇಷಿಸಿದೆ. ಮಹಾರಾಷ್ಟ್ರದಲ್ಲಿ ಜನಾದೇಶ ಅಧಿಕಾರದ ದುರಹಂಕಾರದಲ್ಲಿದ್ದವರಿಗೆ ಸರಿಯಾಗಿ ಏಟು ಕೊಟ್ಟಿದೆ. ’ಮಹಾ’ ಜನಾದೇಶ, ಕಾಂಗ್ರೆಸ್‌ ಚೇತರಿಕೆ ಕಂಡಿದ್ದು, ಹೆಚ್ಚು ಸುಧಾರಿಸುತ್ತಿದೆ ಎಂದು ಹೇಳುತ್ತಿದೆ. ಸಮೀಕ್ಷೆಗಿಂತ ಮತದಾರರ ಉತ್ತರ ಮುಖ್ಯ ವಿರೋಧ ಪಕ್ಷಗಳಾದ ಎನ್‌ಸಿಪಿ ಹಾಗೂ ಕಾಂಗ್ರೆಸ್‌ನತ್ತ ಒಲವು ತೋರಿದ್ದನ್ನು ಸ್ಪಷ್ಟಪಡಿಸಿವೆ. ವಿರೋಧ ಪಕ್ಷಗಳನ್ನು ರಾಜಕೀಯದಲ್ಲಿ ಸುಲಭಕ್ಕೆ ಮುಗಿಸಲು ಸಾಧ್ಯವಿಲ್ಲ ಎಂಬುದನ್ನು ಹೇಳಿವೆ ಎಂದು ಶಿವಸೇನೆ ತನ್ನ ಮಿತ್ರ ಬಿಜೆಪಿಯನ್ನು ಟೀಕಿಸಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ೨೮೮ ಕ್ಷೇತ್ರಗಳ ಪೈಕಿ ೨೦೦ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ೨೦೦ಕ್ಕೂ ಹೆಚ್ಚು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದರು. ಆದರೆ ಮಹಾರಾಷ್ಟ್ರ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕೇವಲ ೧೫೮ ಕ್ಷೇತ್ರಗಳನ್ನು ಗೆದ್ದಿದೆ.

’೨೦೧೪ಕ್ಕಿಂತ ಈ ಬಾರಿಯ ಚುನಾವಣಾ ಫಲಿತಾಂಶ ಕಡಿಮೆ ಬಂದಿದೆ. ಇವಿಎಂ ಮತ್ತು ವಿಪಕ್ಷಗಳನ್ನು ವಿಭಜಿಸುವ ತಂತ್ರಗಳ ಮೂಲಕ ಗೆಲ್ಲುತ್ತೇವೆ ಎಂಬ ನಂಬಿಕೆಯನ್ನು, ೨೦೧೯ರ ವಿಧಾನಸಭಾ ಚುನವಣಾ ಫಲಿತಾಂಶ ಹುಸಿಗೊಳಿಸಿದೆ ಎಂಬುದಾಗಿ ಶಿವಸೇನೆ ಹೇಳಿದೆ.

’ಸರಾಸರಿ ಲೆಕ್ಕಾಚಾರ ಹಾಕಿದರೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಹಿಂದೆಂದಿಗಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆದ್ದಿವೆ. ಇದು ವಿರೋಧ ಪಕ್ಷಗಳನ್ನು ಅಷ್ಟು ಸುಲಭಕ್ಕೆ ಮುಗಿಸಲು ಸಾಧ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದೆ. ಎನ್‌ಸಿಪಿ 50 ಸ್ಥಾನಗಳ ಗಡಿ ದಾಟಿದರೆ, ನಾಯಕರಿಲ್ಲದ ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಂಡಿದೆ. ಫಲಿತಾಂಶ ಅಧಿಕಾರದ ದುರಹಂಕಾರವನ್ನು ತೋರಿಸಿದರೆ ಸೋಲೊಂದೇ ಉತ್ತರ ಎಂಬುದನ್ನು ಮತದಾರರು ತೋರಿಸಿಕೊಟ್ಟಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷ ಹೇಳಿದೆ.

೨೦೧೪ರಲ್ಲಿ ಬಿಜೆಪಿ ೧೨೨ ಸ್ಥಾನ ಗೆದ್ದಿತ್ತು. ಆದರೆ ೨೦೧೯ರ ವೇಳೆಗೆ ೧೦೫ಕ್ಕೆ ಇಳಿದಿದೆ. ಶಿವಸೇನೆ ೨೦೧೪ರಲ್ಲಿ ೬೩ ಸ್ಥಾನ ಗೆದ್ದುಕೊಂಡಿತ್ತು. ಆದರೆ ಈ ಬಾರಿ ೫೬ ಸ್ಥಾನ ಗೆದ್ದಿದ್ದು, ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದಿರುವುದನ್ನು ತೋರಿಸುತ್ತಿದೆ. ೨೫ ಸ್ಥಾನಗಳನ್ನು ಇತರೆ ಪಕ್ಷದ ನಾಯಕರು ಗೆದ್ದಿದ್ದಾರೆ. ಇದೊಂದು ಎಚ್ಚರಿಕೆಯ ಕರೆಗಂಟೆಯಾಗಿದೆ. ’ನೀವು ಅಧಿಕಾರದ ದುರಂಹಕಾರ ತೋರಿಸಿದರೆ, ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಜನ ನೀಡಿದ್ದಾರೆ’ ಎಂದು ಹೇಳಿದೆ.

ಶಿವಾಜಿ ಮಹಾರಾಜರ ಸತಾರಾದಲ್ಲಿ ಬಿಜೆಪಿ ಅಭ್ಯರ್ಥಿ ಉದಯನ್‌ರಾಜೇ ಸೋತಿದ್ದಾರೆ. ಶಿವಾಜಿ ಮಹಾರಾಜರ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದನ್ನು ಜನ ಒಪ್ಪಿಲ್ಲ. ಶಿವಾಜಿ ಹೆಸರು ಹೇಳಿಕೊಂಡು ರಾಜಕೀಯ ಮಾಡುವುದು, ಅವಕಾಶ ತೆಗೆದುಕೊಳ್ಳುವುದನ್ನು ಜನ ವಿರೋಧಿಸಿದ್ದು, ಸೋಲಿನ ಕಹಿ ಉಣಿಸಿದ್ದಾರೆ.

ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಹೆಚ್ಚಿನ ಸೀಟು ಗೆಲ್ಲಲು ಹೇಗೆ ಸಾಧ್ಯವಾಯಿತು..? ಚುನಾವಣೆ ಪೂರ್ವ ಸಮೀಕ್ಷೆಗಳ ತೀರ್ಪಿಗೆ ಮತದಾರರ ತೀರ್ಪು ವಿರುದ್ಧವಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾಕಷ್ಟು ರ್‍ಯಾಲಿಗಳನ್ನು ನಡೆಸಿದರೂ ಸತಾರಾದಲ್ಲಿ ಉದಯನ್‌ರಾಜೇ ಗೆಲ್ಲಲು ಸಾಧ್ಯವಾಗಿಲ್ಲ. ಸತಾರಾದ ಜನತೆ ಎನ್‌ಸಿಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಅಲ್ಲದೇ ಬಿಜೆಪಿ ಸಿಎಂಗಿಂತ ಶರದ್‌ ಪವಾರ್‌ ಜನಪ್ರಿಯತೆ ಹೆಚ್ಚಿದೆ ಎಂಬುದನ್ನು ಸತಾರಾ ಜನತೆ ಸಾಬೀತುಪಡಿಸಿದ್ದಾರೆ ಎಂದು ಬರೆದಿದೆ.

ಇತ್ತ ಮರಾಠಿ ಪತ್ರಿಕೆಯೊಂದು ಬಿಜೆಪಿ, ಎನ್‌ಸಿಪಿಯನ್ನು ಹಣಿಯಲು ಸಾಕಷ್ಟು ಕಸರತ್ತು ನಡೆಸಿತು. ಆದರೂ ಸಹ ಶರದ್‌ ಪವಾರ್‌ ಪಕ್ಷಕ್ಕೆ ಮುಂದೆ ಭವಿಷ್ಯವಿದೆ ಎಂಬುದನ್ನು ಮಹಾ ಜನಾದೇಶ ಎತ್ತಿ ಹಿಡಿದಿದೆ ಎಂದು ವಿಶ್ಲೇಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...