Homeಮುಖಪುಟಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಕಣಕ್ಕಿಳಿದಿದ್ದ ಬಿಜೆಪಿ, ಶಿವಸೇನೆ ೧೫೮ ಸ್ಥಾನಗಳನ್ನು ಬಾಚಿಕೊಂಡಿವೆ. ಇತ್ತ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಮೈತ್ರಿ ೯೮ ಸ್ಥಾನಗಳನ್ನು ಗೆದ್ದಿದೆ. ಬಹುಮತ ಸಾಧಿಸಿರುವ ಬಿಜೆಪಿ ಮತ್ತು ಶಿವಸೇನೆಯಲ್ಲೀಗ ಸಿಎಂ ಹುದ್ದೆಗಾಗಿ ಜಟಾಪಟಿ ನಡೆದಿದೆ.

ಶಿವಸೇನೆ ತನ್ನ ಪತ್ರಿಕೆ ಸಾಮ್ನಾದಲ್ಲಿ ಚುನಾವಣಾ ಫಲಿತಾಂಶವನ್ನು ವಿಶ್ಲೇಷಿಸಿದೆ. ಮಹಾರಾಷ್ಟ್ರದಲ್ಲಿ ಜನಾದೇಶ ಅಧಿಕಾರದ ದುರಹಂಕಾರದಲ್ಲಿದ್ದವರಿಗೆ ಸರಿಯಾಗಿ ಏಟು ಕೊಟ್ಟಿದೆ. ’ಮಹಾ’ ಜನಾದೇಶ, ಕಾಂಗ್ರೆಸ್‌ ಚೇತರಿಕೆ ಕಂಡಿದ್ದು, ಹೆಚ್ಚು ಸುಧಾರಿಸುತ್ತಿದೆ ಎಂದು ಹೇಳುತ್ತಿದೆ. ಸಮೀಕ್ಷೆಗಿಂತ ಮತದಾರರ ಉತ್ತರ ಮುಖ್ಯ ವಿರೋಧ ಪಕ್ಷಗಳಾದ ಎನ್‌ಸಿಪಿ ಹಾಗೂ ಕಾಂಗ್ರೆಸ್‌ನತ್ತ ಒಲವು ತೋರಿದ್ದನ್ನು ಸ್ಪಷ್ಟಪಡಿಸಿವೆ. ವಿರೋಧ ಪಕ್ಷಗಳನ್ನು ರಾಜಕೀಯದಲ್ಲಿ ಸುಲಭಕ್ಕೆ ಮುಗಿಸಲು ಸಾಧ್ಯವಿಲ್ಲ ಎಂಬುದನ್ನು ಹೇಳಿವೆ ಎಂದು ಶಿವಸೇನೆ ತನ್ನ ಮಿತ್ರ ಬಿಜೆಪಿಯನ್ನು ಟೀಕಿಸಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ೨೮೮ ಕ್ಷೇತ್ರಗಳ ಪೈಕಿ ೨೦೦ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ೨೦೦ಕ್ಕೂ ಹೆಚ್ಚು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದರು. ಆದರೆ ಮಹಾರಾಷ್ಟ್ರ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕೇವಲ ೧೫೮ ಕ್ಷೇತ್ರಗಳನ್ನು ಗೆದ್ದಿದೆ.

’೨೦೧೪ಕ್ಕಿಂತ ಈ ಬಾರಿಯ ಚುನಾವಣಾ ಫಲಿತಾಂಶ ಕಡಿಮೆ ಬಂದಿದೆ. ಇವಿಎಂ ಮತ್ತು ವಿಪಕ್ಷಗಳನ್ನು ವಿಭಜಿಸುವ ತಂತ್ರಗಳ ಮೂಲಕ ಗೆಲ್ಲುತ್ತೇವೆ ಎಂಬ ನಂಬಿಕೆಯನ್ನು, ೨೦೧೯ರ ವಿಧಾನಸಭಾ ಚುನವಣಾ ಫಲಿತಾಂಶ ಹುಸಿಗೊಳಿಸಿದೆ ಎಂಬುದಾಗಿ ಶಿವಸೇನೆ ಹೇಳಿದೆ.

’ಸರಾಸರಿ ಲೆಕ್ಕಾಚಾರ ಹಾಕಿದರೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಹಿಂದೆಂದಿಗಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆದ್ದಿವೆ. ಇದು ವಿರೋಧ ಪಕ್ಷಗಳನ್ನು ಅಷ್ಟು ಸುಲಭಕ್ಕೆ ಮುಗಿಸಲು ಸಾಧ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದೆ. ಎನ್‌ಸಿಪಿ 50 ಸ್ಥಾನಗಳ ಗಡಿ ದಾಟಿದರೆ, ನಾಯಕರಿಲ್ಲದ ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಂಡಿದೆ. ಫಲಿತಾಂಶ ಅಧಿಕಾರದ ದುರಹಂಕಾರವನ್ನು ತೋರಿಸಿದರೆ ಸೋಲೊಂದೇ ಉತ್ತರ ಎಂಬುದನ್ನು ಮತದಾರರು ತೋರಿಸಿಕೊಟ್ಟಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷ ಹೇಳಿದೆ.

೨೦೧೪ರಲ್ಲಿ ಬಿಜೆಪಿ ೧೨೨ ಸ್ಥಾನ ಗೆದ್ದಿತ್ತು. ಆದರೆ ೨೦೧೯ರ ವೇಳೆಗೆ ೧೦೫ಕ್ಕೆ ಇಳಿದಿದೆ. ಶಿವಸೇನೆ ೨೦೧೪ರಲ್ಲಿ ೬೩ ಸ್ಥಾನ ಗೆದ್ದುಕೊಂಡಿತ್ತು. ಆದರೆ ಈ ಬಾರಿ ೫೬ ಸ್ಥಾನ ಗೆದ್ದಿದ್ದು, ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದಿರುವುದನ್ನು ತೋರಿಸುತ್ತಿದೆ. ೨೫ ಸ್ಥಾನಗಳನ್ನು ಇತರೆ ಪಕ್ಷದ ನಾಯಕರು ಗೆದ್ದಿದ್ದಾರೆ. ಇದೊಂದು ಎಚ್ಚರಿಕೆಯ ಕರೆಗಂಟೆಯಾಗಿದೆ. ’ನೀವು ಅಧಿಕಾರದ ದುರಂಹಕಾರ ತೋರಿಸಿದರೆ, ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಜನ ನೀಡಿದ್ದಾರೆ’ ಎಂದು ಹೇಳಿದೆ.

ಶಿವಾಜಿ ಮಹಾರಾಜರ ಸತಾರಾದಲ್ಲಿ ಬಿಜೆಪಿ ಅಭ್ಯರ್ಥಿ ಉದಯನ್‌ರಾಜೇ ಸೋತಿದ್ದಾರೆ. ಶಿವಾಜಿ ಮಹಾರಾಜರ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದನ್ನು ಜನ ಒಪ್ಪಿಲ್ಲ. ಶಿವಾಜಿ ಹೆಸರು ಹೇಳಿಕೊಂಡು ರಾಜಕೀಯ ಮಾಡುವುದು, ಅವಕಾಶ ತೆಗೆದುಕೊಳ್ಳುವುದನ್ನು ಜನ ವಿರೋಧಿಸಿದ್ದು, ಸೋಲಿನ ಕಹಿ ಉಣಿಸಿದ್ದಾರೆ.

ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಹೆಚ್ಚಿನ ಸೀಟು ಗೆಲ್ಲಲು ಹೇಗೆ ಸಾಧ್ಯವಾಯಿತು..? ಚುನಾವಣೆ ಪೂರ್ವ ಸಮೀಕ್ಷೆಗಳ ತೀರ್ಪಿಗೆ ಮತದಾರರ ತೀರ್ಪು ವಿರುದ್ಧವಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾಕಷ್ಟು ರ್‍ಯಾಲಿಗಳನ್ನು ನಡೆಸಿದರೂ ಸತಾರಾದಲ್ಲಿ ಉದಯನ್‌ರಾಜೇ ಗೆಲ್ಲಲು ಸಾಧ್ಯವಾಗಿಲ್ಲ. ಸತಾರಾದ ಜನತೆ ಎನ್‌ಸಿಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಅಲ್ಲದೇ ಬಿಜೆಪಿ ಸಿಎಂಗಿಂತ ಶರದ್‌ ಪವಾರ್‌ ಜನಪ್ರಿಯತೆ ಹೆಚ್ಚಿದೆ ಎಂಬುದನ್ನು ಸತಾರಾ ಜನತೆ ಸಾಬೀತುಪಡಿಸಿದ್ದಾರೆ ಎಂದು ಬರೆದಿದೆ.

ಇತ್ತ ಮರಾಠಿ ಪತ್ರಿಕೆಯೊಂದು ಬಿಜೆಪಿ, ಎನ್‌ಸಿಪಿಯನ್ನು ಹಣಿಯಲು ಸಾಕಷ್ಟು ಕಸರತ್ತು ನಡೆಸಿತು. ಆದರೂ ಸಹ ಶರದ್‌ ಪವಾರ್‌ ಪಕ್ಷಕ್ಕೆ ಮುಂದೆ ಭವಿಷ್ಯವಿದೆ ಎಂಬುದನ್ನು ಮಹಾ ಜನಾದೇಶ ಎತ್ತಿ ಹಿಡಿದಿದೆ ಎಂದು ವಿಶ್ಲೇಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...