Homeಮುಖಪುಟಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಕಣಕ್ಕಿಳಿದಿದ್ದ ಬಿಜೆಪಿ, ಶಿವಸೇನೆ ೧೫೮ ಸ್ಥಾನಗಳನ್ನು ಬಾಚಿಕೊಂಡಿವೆ. ಇತ್ತ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಮೈತ್ರಿ ೯೮ ಸ್ಥಾನಗಳನ್ನು ಗೆದ್ದಿದೆ. ಬಹುಮತ ಸಾಧಿಸಿರುವ ಬಿಜೆಪಿ ಮತ್ತು ಶಿವಸೇನೆಯಲ್ಲೀಗ ಸಿಎಂ ಹುದ್ದೆಗಾಗಿ ಜಟಾಪಟಿ ನಡೆದಿದೆ.

ಶಿವಸೇನೆ ತನ್ನ ಪತ್ರಿಕೆ ಸಾಮ್ನಾದಲ್ಲಿ ಚುನಾವಣಾ ಫಲಿತಾಂಶವನ್ನು ವಿಶ್ಲೇಷಿಸಿದೆ. ಮಹಾರಾಷ್ಟ್ರದಲ್ಲಿ ಜನಾದೇಶ ಅಧಿಕಾರದ ದುರಹಂಕಾರದಲ್ಲಿದ್ದವರಿಗೆ ಸರಿಯಾಗಿ ಏಟು ಕೊಟ್ಟಿದೆ. ’ಮಹಾ’ ಜನಾದೇಶ, ಕಾಂಗ್ರೆಸ್‌ ಚೇತರಿಕೆ ಕಂಡಿದ್ದು, ಹೆಚ್ಚು ಸುಧಾರಿಸುತ್ತಿದೆ ಎಂದು ಹೇಳುತ್ತಿದೆ. ಸಮೀಕ್ಷೆಗಿಂತ ಮತದಾರರ ಉತ್ತರ ಮುಖ್ಯ ವಿರೋಧ ಪಕ್ಷಗಳಾದ ಎನ್‌ಸಿಪಿ ಹಾಗೂ ಕಾಂಗ್ರೆಸ್‌ನತ್ತ ಒಲವು ತೋರಿದ್ದನ್ನು ಸ್ಪಷ್ಟಪಡಿಸಿವೆ. ವಿರೋಧ ಪಕ್ಷಗಳನ್ನು ರಾಜಕೀಯದಲ್ಲಿ ಸುಲಭಕ್ಕೆ ಮುಗಿಸಲು ಸಾಧ್ಯವಿಲ್ಲ ಎಂಬುದನ್ನು ಹೇಳಿವೆ ಎಂದು ಶಿವಸೇನೆ ತನ್ನ ಮಿತ್ರ ಬಿಜೆಪಿಯನ್ನು ಟೀಕಿಸಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ೨೮೮ ಕ್ಷೇತ್ರಗಳ ಪೈಕಿ ೨೦೦ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ೨೦೦ಕ್ಕೂ ಹೆಚ್ಚು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದರು. ಆದರೆ ಮಹಾರಾಷ್ಟ್ರ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕೇವಲ ೧೫೮ ಕ್ಷೇತ್ರಗಳನ್ನು ಗೆದ್ದಿದೆ.

’೨೦೧೪ಕ್ಕಿಂತ ಈ ಬಾರಿಯ ಚುನಾವಣಾ ಫಲಿತಾಂಶ ಕಡಿಮೆ ಬಂದಿದೆ. ಇವಿಎಂ ಮತ್ತು ವಿಪಕ್ಷಗಳನ್ನು ವಿಭಜಿಸುವ ತಂತ್ರಗಳ ಮೂಲಕ ಗೆಲ್ಲುತ್ತೇವೆ ಎಂಬ ನಂಬಿಕೆಯನ್ನು, ೨೦೧೯ರ ವಿಧಾನಸಭಾ ಚುನವಣಾ ಫಲಿತಾಂಶ ಹುಸಿಗೊಳಿಸಿದೆ ಎಂಬುದಾಗಿ ಶಿವಸೇನೆ ಹೇಳಿದೆ.

’ಸರಾಸರಿ ಲೆಕ್ಕಾಚಾರ ಹಾಕಿದರೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಹಿಂದೆಂದಿಗಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆದ್ದಿವೆ. ಇದು ವಿರೋಧ ಪಕ್ಷಗಳನ್ನು ಅಷ್ಟು ಸುಲಭಕ್ಕೆ ಮುಗಿಸಲು ಸಾಧ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದೆ. ಎನ್‌ಸಿಪಿ 50 ಸ್ಥಾನಗಳ ಗಡಿ ದಾಟಿದರೆ, ನಾಯಕರಿಲ್ಲದ ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಂಡಿದೆ. ಫಲಿತಾಂಶ ಅಧಿಕಾರದ ದುರಹಂಕಾರವನ್ನು ತೋರಿಸಿದರೆ ಸೋಲೊಂದೇ ಉತ್ತರ ಎಂಬುದನ್ನು ಮತದಾರರು ತೋರಿಸಿಕೊಟ್ಟಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷ ಹೇಳಿದೆ.

೨೦೧೪ರಲ್ಲಿ ಬಿಜೆಪಿ ೧೨೨ ಸ್ಥಾನ ಗೆದ್ದಿತ್ತು. ಆದರೆ ೨೦೧೯ರ ವೇಳೆಗೆ ೧೦೫ಕ್ಕೆ ಇಳಿದಿದೆ. ಶಿವಸೇನೆ ೨೦೧೪ರಲ್ಲಿ ೬೩ ಸ್ಥಾನ ಗೆದ್ದುಕೊಂಡಿತ್ತು. ಆದರೆ ಈ ಬಾರಿ ೫೬ ಸ್ಥಾನ ಗೆದ್ದಿದ್ದು, ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದಿರುವುದನ್ನು ತೋರಿಸುತ್ತಿದೆ. ೨೫ ಸ್ಥಾನಗಳನ್ನು ಇತರೆ ಪಕ್ಷದ ನಾಯಕರು ಗೆದ್ದಿದ್ದಾರೆ. ಇದೊಂದು ಎಚ್ಚರಿಕೆಯ ಕರೆಗಂಟೆಯಾಗಿದೆ. ’ನೀವು ಅಧಿಕಾರದ ದುರಂಹಕಾರ ತೋರಿಸಿದರೆ, ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಜನ ನೀಡಿದ್ದಾರೆ’ ಎಂದು ಹೇಳಿದೆ.

ಶಿವಾಜಿ ಮಹಾರಾಜರ ಸತಾರಾದಲ್ಲಿ ಬಿಜೆಪಿ ಅಭ್ಯರ್ಥಿ ಉದಯನ್‌ರಾಜೇ ಸೋತಿದ್ದಾರೆ. ಶಿವಾಜಿ ಮಹಾರಾಜರ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದನ್ನು ಜನ ಒಪ್ಪಿಲ್ಲ. ಶಿವಾಜಿ ಹೆಸರು ಹೇಳಿಕೊಂಡು ರಾಜಕೀಯ ಮಾಡುವುದು, ಅವಕಾಶ ತೆಗೆದುಕೊಳ್ಳುವುದನ್ನು ಜನ ವಿರೋಧಿಸಿದ್ದು, ಸೋಲಿನ ಕಹಿ ಉಣಿಸಿದ್ದಾರೆ.

ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಹೆಚ್ಚಿನ ಸೀಟು ಗೆಲ್ಲಲು ಹೇಗೆ ಸಾಧ್ಯವಾಯಿತು..? ಚುನಾವಣೆ ಪೂರ್ವ ಸಮೀಕ್ಷೆಗಳ ತೀರ್ಪಿಗೆ ಮತದಾರರ ತೀರ್ಪು ವಿರುದ್ಧವಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾಕಷ್ಟು ರ್‍ಯಾಲಿಗಳನ್ನು ನಡೆಸಿದರೂ ಸತಾರಾದಲ್ಲಿ ಉದಯನ್‌ರಾಜೇ ಗೆಲ್ಲಲು ಸಾಧ್ಯವಾಗಿಲ್ಲ. ಸತಾರಾದ ಜನತೆ ಎನ್‌ಸಿಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಅಲ್ಲದೇ ಬಿಜೆಪಿ ಸಿಎಂಗಿಂತ ಶರದ್‌ ಪವಾರ್‌ ಜನಪ್ರಿಯತೆ ಹೆಚ್ಚಿದೆ ಎಂಬುದನ್ನು ಸತಾರಾ ಜನತೆ ಸಾಬೀತುಪಡಿಸಿದ್ದಾರೆ ಎಂದು ಬರೆದಿದೆ.

ಇತ್ತ ಮರಾಠಿ ಪತ್ರಿಕೆಯೊಂದು ಬಿಜೆಪಿ, ಎನ್‌ಸಿಪಿಯನ್ನು ಹಣಿಯಲು ಸಾಕಷ್ಟು ಕಸರತ್ತು ನಡೆಸಿತು. ಆದರೂ ಸಹ ಶರದ್‌ ಪವಾರ್‌ ಪಕ್ಷಕ್ಕೆ ಮುಂದೆ ಭವಿಷ್ಯವಿದೆ ಎಂಬುದನ್ನು ಮಹಾ ಜನಾದೇಶ ಎತ್ತಿ ಹಿಡಿದಿದೆ ಎಂದು ವಿಶ್ಲೇಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...