HomeಮುಖಪುಟED, CBI ರಾಜಕೀಯವನ್ನು ರಾಜಸ್ಥಾನದ ಜನರು ತಿರಸ್ಕರಿಸುತ್ತಾರೆ: ಜೈರಾಮ್ ರಮೇಶ್

ED, CBI ರಾಜಕೀಯವನ್ನು ರಾಜಸ್ಥಾನದ ಜನರು ತಿರಸ್ಕರಿಸುತ್ತಾರೆ: ಜೈರಾಮ್ ರಮೇಶ್

- Advertisement -
- Advertisement -

ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ತನ್ನ ಸರ್ಕಾರ ಮಾಡಿದ ಕೆಲಸಗಳ ಆಧಾರದ ಮೇಲೆ ಪಕ್ಷವು ಜನಾದೇಶವನ್ನು ಬಯಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಶನಿವಾರ ಹೇಳಿದ್ದಾರೆ.

ಬಿಜೆಪಿಯ ವಿಷಯಗಳೆಂದರೆ ಧ್ರುವೀಕರಣ, ಇಡಿ ಮತ್ತು ಸಿಬಿಐ ಮಾತ್ರ.. ಏಕೆಂದರೆ ಬಿಜೆಪಿಗೆ ಇದಕ್ಕಿಂತ ಬೇರೆ ಯಾವುದೇ ತಂತ್ರವಿಲ್ಲ. ಪ್ರಧಾನಿ ಭಯದಿಂದ ರಾಜಸ್ಥಾನ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಅವರ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ ಎಂದು ರಮೇಶ್ ಬಣ್ಣಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಉದಯಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರವು ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ ಎಂದು ಆರೋಪಿಸಿದ್ದರು.

”ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನವು ಮಾದರಿ ರಾಜ್ಯವಾಗಿದೆ ಹಾಗಾಗಿ ಇದು ಪ್ರಧಾನಿಗೆ ಭಯ ಉಂಟುಮಾಡಿದೆ ಮತ್ತು ತೊಂದರೆಯಾಗಿದೆ. ಪ್ರಧಾನಿಗೆ ಜನರ ಮುಂದೆ ಹೋಗಲು ಬೇರೆ ಯಾವುದೇ ವಿಚಾರಗಳು ಇಲ್ಲವಾದ್ದರಿಂದ, ಇಡಿ ಮತ್ತು ಸಿಬಿಐ ಕಳುಹಿಸಲಾಗಿದೆ. ಮತ್ತೆ ಮತ್ತೆ ಪ್ರಧಾನಿ ಮತ್ತು ಅವರ ಸಹಚರರು ಧ್ರುವೀಕರಣದ ಭಾಷೆ ಮಾತನಾಡುತ್ತಾರೆ” ರಮೇಶ್ ಜೈಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

”ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

”ಬಿಜೆಪಿಯವರು ಹೆದರುತ್ತಿದ್ದಾರೆ, ನಮ್ಮ ಸರ್ಕಾರದಿಂದ ಯಾವುದೇ ಸಮಸ್ಯೆ ಇಲ್ಲ. ಅದಕ್ಕಾಗಿಯೇ ಅವರು ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಕಾಂಗ್ರೆಸ್ ತುಷ್ಟೀಕರಣ ಮತ್ತು ನಿಷ್ಕ್ರಿಯತೆ ಆರೋಪ ಮಾಡುತ್ತಿದ್ದಾರೆ. ಇದು ಆಧಾರರಹಿತವಾಗಿದೆ, ಇದು ತಪ್ಪು ಮಾತ್ರವಲ್ಲ, ಇದು ಸುಳ್ಳು” ಎಂದು ಅವರು ಹೇಳಿದರು.

”ಈಗಾಗಲೇ ಕರ್ನಾಟಕದ ಜನರು ಧ್ರುವೀಕರಣವನ್ನು ತಿರಸ್ಕರಿಸಿದ್ದಾರೆ ಮತ್ತು ರಾಜಸ್ಥಾನದ ಜನರು ಹಣದುಬ್ಬರ, ನಿರುದ್ಯೋಗ ಮತ್ತು ಸೇಡಿನ ರಾಜಕೀಯದಿಂದ ಬೇಸತ್ತಿರುವ ಕಾರಣ ಮುಂಬರುವ ಚುನಾವಣೆಯಲ್ಲಿ ಇಡಿ ಮತ್ತು ಸಿಬಿಐ ಮತ್ತು ಧ್ರುವೀಕರಣದ ರಾಜಕೀಯವನ್ನು ತಿರಸ್ಕರಿಸುತ್ತಾರೆ” ಎಂದು ಅವರು ಹೇಳಿದರು.

”ಬಂದರುಗಳು, ವಿಮಾನ ನಿಲ್ದಾಣಗಳು ಮತ್ತು ಕೈಗಾರಿಕೆಗಳ ಖಾಸಗೀಕರಣವು ದೇಶದ ಹಿತಾಸಕ್ತಿಯಿಂದ ಕೂಡಿಲ್ಲ, ಇದು ಉದ್ಯೋಗ ಕುಸಿತಕ್ಕೆ ಕಾರಣವಾಗಿದೆ” ಎಂದು ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

”ಕೇಂದ್ರದ ನೀತಿಗಳಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಬಾಧಿತವಾಗಿವೆ” ಎಂದರು.

”ರಾಜ್ಯ ಸರ್ಕಾರದ ವಿರುದ್ಧ ಯಾವುದೇ ಆಡಳಿತ ವಿರೋಧಿ ಮತ್ತು ಅಸಮಾಧಾನ ಇಲ್ಲದ ಕಾರಣ ಕಾಂಗ್ರೆಸ್ ಮತ್ತೊಮ್ಮೆ ಜನಾದೇಶ ಪಡೆಯಲಿದೆ” ಎಂದು ರಮೇಶ್ ವಿಶ್ವಾಸ ವ್ಯಕ್ತಪಡಿಸಿದರು.

ನವೆಂಬರ್ 25 ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಉದಯಪುರ ಟೈಲರ್ ಹಂತಕರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ: ಗೆಹ್ಲೋಟ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...