Homeಕರ್ನಾಟಕತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

ತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

- Advertisement -
- Advertisement -

ಅಡುಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸುಮಾರು 40 ಸಾವಿರ ಲೀಟರ್ ಗ್ಯಾಸ್ ಸೋರಿಕೆಯಾಗಿದೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮುರರಾಯನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ಗೊತ್ತಿಲ್ಲದ ಜನರು ತೀವ್ರ ಆತಂಕಗೊಂಡಿದ್ದು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ತೆರಳಿ ಜನರಲ್ಲಿನ ಆತಂಕ ನಿವಾರಣೆಗೆ ಯತ್ನಿಸಿದರು. ಆದರೂ ಜನರು ಸ್ವಯಂಪ್ರೇರಿತರಾಗಿ ಗ್ರಾಮ ತೊರೆಯುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಮ್ಮತ್ತಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮುರರಾಯನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆಯಿತು. ಪರಿಣಾಮ ಗ್ಯಾಸ್ ಟ್ಯಾಂಕರ್ ಮುಚ್ಚಳ ಬಿಚ್ಚಿಕೊಂಡು ನೀರಿನಂತೆ ಹರಿಯತೊಡಗಿದ್ದು, ಸುಮಾರು ನಾಲ್ಕು ಗಂಟೆ ಕಾಲ ನೀರು ಧುಮಿಕ್ಕುವಂತೆ ಹರಿಯಿದೆ. ಗ್ಯಾಸ್ ಸುತ್ತಲಿನ ಪರಿಸರದಲ್ಲಿ ಹರಡಿದ್ದರಿಂದ ಜನರ ಕಣ್ಣು ಉರಿಯತೊಡಗಿದ್ದು  ಇದರಿಂದ ಮತ್ತಷ್ಟು ಭೀತಿಗೊಂಡಿದ್ದಾರೆ.

ಸ್ಥಳೀಯ ನಿವಾಸಿ ಈ. ಶಿವಣ್ಣ ಮಾತನಾಡಿ, ಅಗ್ನಿಶಾಮಕದಳದ ಸಿಬ್ಬಂದಿ ಬಂದಿದೆ. ಗ್ಯಾಸ್ ವ್ಯಾಪಿಸದಂತೆ ತಡೆಯುವ ಪ್ರಯತ್ನದಲ್ಲಿ ತೊಡಗಿದೆ. ಆದರೂ ಜನರು ಹೆದರಿಕೊಂಡಿದ್ದು ಒಬ್ಬೊಬ್ಬರೇ ಗ್ರಾಮ ತೊರೆಯುತ್ತಿದ್ದಾರೆ ಅಗ್ನಿಶಾಮಕ ದಳದ ಸಿಬ್ಬಂದಿ ಮನವರಿಕೆ ಮಾಡಿದರೂ ಒಂದು ವಾರದ ಮಟ್ಟಿಗೆ ಬೇರೆ ಕಡೆ ವಾಸ ಮಾಡಲು ತರೆಳುತ್ತಿದ್ದಾರೆ. ಮುಂದೆ ಏನಾದರೂ ಅಪಾಯ ಸಂಭವಿಸಬಹುದು ಎಂಬ ಆತಂಕ ಗ್ರಾಮಸ್ಥರದ್ದು ಎಂದು ನಾನುಗೌರಿ.ಕಾಮ್ ಗೆ ತಿಳಿಸಿದರು.

ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾಗಿರುವುದರಿಂದ ಪರಿಸರಕ್ಕೆ ಏನಾದರೂ ಅಪಾಯವಾಗಬಹುದೇ? ಜನರಿಗೆ ತೊಂದರೆಯಾಗಬಹುದೇ ಎಂಬುದನ್ನು ಅಧ್ಯಯನ ಮಾಡಲು ಬೆಂಗಳೂರಿನಿಂದ ತಜ್ಞರ ತಂಡವೊಂದು ಬರುತ್ತಿದೆ ಎಂದು ವರದಿಯಾಗಿದೆ. ನಂತರ ಸಂಫೂರ್ಣ ಮಾಹಿತಿ ಕಲೆಹಾಕಿ ಅಗತ್ಯ ಮಾಹಿತಿ ನೀಡಲಿದೆ ಎಂದು ತಿಳಿದುಬಂದಿದೆ. ವೆಲ್ಟಿಂಗ್ ಮಾಡುವ ಗ್ಯಾಸ್ ಇರಬಹುದು ಎಂದು ಅಗ್ನಿಶಾಮಕ ದಳ ಹೇಳುತ್ತಿದ್ದರೆ, ತಹಶೀಲ್ದಾರ್ ವರದರಾಜು ‘ಅದು ಎಚ್.ಪಿ. ಗ್ಯಾಸ್ ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟೀಕರಣ ನೀಡಿದರು.

ಗ್ಯಾಸ್ ಸೋರಿಕೆಯು ಸುತ್ತಲ ಮೂರ್ನಾಲ್ಕು ಗ್ರಾಮಗಳಿಗೆ ಪರಿಣಾಮ ಬೀರಿದೆ. ಕೆಟ್ಟ ವಾಸನೆ ಬರುತ್ತಿದ್ದು, ಇದರಿಂದಾಗಿ ಗ್ಯಾಸ್ ಸೋರಿಕೆ ಅಪಾಯದಿಂದ ಗ್ರಾಮದ ಒಬ್ಬೊಬ್ಬರೇ ತೊರೆದು ಬೇರೆ ಕಡೆ ಹೋಗುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿ ಜನರಿಗೆ ಅಭಯ ನೀಡಬೇಕು ಹಾಗೂ ಜನರಲ್ಲಿರುವ ಆತಂಕ ದೂರಮಾಡುವ ಕೆಲಸ ಮಾಡಬೇಕಾಗಿದೆ ಜನರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳ ಸುಳ್ಳು : ರೇಬಿಸ್‍ನಂತಹ ಭಯಾನಕ ರೋಗ ಲಕ್ಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...