Homeಕರ್ನಾಟಕತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

ತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

- Advertisement -
- Advertisement -

ಅಡುಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸುಮಾರು 40 ಸಾವಿರ ಲೀಟರ್ ಗ್ಯಾಸ್ ಸೋರಿಕೆಯಾಗಿದೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮುರರಾಯನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ಗೊತ್ತಿಲ್ಲದ ಜನರು ತೀವ್ರ ಆತಂಕಗೊಂಡಿದ್ದು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ತೆರಳಿ ಜನರಲ್ಲಿನ ಆತಂಕ ನಿವಾರಣೆಗೆ ಯತ್ನಿಸಿದರು. ಆದರೂ ಜನರು ಸ್ವಯಂಪ್ರೇರಿತರಾಗಿ ಗ್ರಾಮ ತೊರೆಯುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಮ್ಮತ್ತಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮುರರಾಯನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆಯಿತು. ಪರಿಣಾಮ ಗ್ಯಾಸ್ ಟ್ಯಾಂಕರ್ ಮುಚ್ಚಳ ಬಿಚ್ಚಿಕೊಂಡು ನೀರಿನಂತೆ ಹರಿಯತೊಡಗಿದ್ದು, ಸುಮಾರು ನಾಲ್ಕು ಗಂಟೆ ಕಾಲ ನೀರು ಧುಮಿಕ್ಕುವಂತೆ ಹರಿಯಿದೆ. ಗ್ಯಾಸ್ ಸುತ್ತಲಿನ ಪರಿಸರದಲ್ಲಿ ಹರಡಿದ್ದರಿಂದ ಜನರ ಕಣ್ಣು ಉರಿಯತೊಡಗಿದ್ದು  ಇದರಿಂದ ಮತ್ತಷ್ಟು ಭೀತಿಗೊಂಡಿದ್ದಾರೆ.

ಸ್ಥಳೀಯ ನಿವಾಸಿ ಈ. ಶಿವಣ್ಣ ಮಾತನಾಡಿ, ಅಗ್ನಿಶಾಮಕದಳದ ಸಿಬ್ಬಂದಿ ಬಂದಿದೆ. ಗ್ಯಾಸ್ ವ್ಯಾಪಿಸದಂತೆ ತಡೆಯುವ ಪ್ರಯತ್ನದಲ್ಲಿ ತೊಡಗಿದೆ. ಆದರೂ ಜನರು ಹೆದರಿಕೊಂಡಿದ್ದು ಒಬ್ಬೊಬ್ಬರೇ ಗ್ರಾಮ ತೊರೆಯುತ್ತಿದ್ದಾರೆ ಅಗ್ನಿಶಾಮಕ ದಳದ ಸಿಬ್ಬಂದಿ ಮನವರಿಕೆ ಮಾಡಿದರೂ ಒಂದು ವಾರದ ಮಟ್ಟಿಗೆ ಬೇರೆ ಕಡೆ ವಾಸ ಮಾಡಲು ತರೆಳುತ್ತಿದ್ದಾರೆ. ಮುಂದೆ ಏನಾದರೂ ಅಪಾಯ ಸಂಭವಿಸಬಹುದು ಎಂಬ ಆತಂಕ ಗ್ರಾಮಸ್ಥರದ್ದು ಎಂದು ನಾನುಗೌರಿ.ಕಾಮ್ ಗೆ ತಿಳಿಸಿದರು.

ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾಗಿರುವುದರಿಂದ ಪರಿಸರಕ್ಕೆ ಏನಾದರೂ ಅಪಾಯವಾಗಬಹುದೇ? ಜನರಿಗೆ ತೊಂದರೆಯಾಗಬಹುದೇ ಎಂಬುದನ್ನು ಅಧ್ಯಯನ ಮಾಡಲು ಬೆಂಗಳೂರಿನಿಂದ ತಜ್ಞರ ತಂಡವೊಂದು ಬರುತ್ತಿದೆ ಎಂದು ವರದಿಯಾಗಿದೆ. ನಂತರ ಸಂಫೂರ್ಣ ಮಾಹಿತಿ ಕಲೆಹಾಕಿ ಅಗತ್ಯ ಮಾಹಿತಿ ನೀಡಲಿದೆ ಎಂದು ತಿಳಿದುಬಂದಿದೆ. ವೆಲ್ಟಿಂಗ್ ಮಾಡುವ ಗ್ಯಾಸ್ ಇರಬಹುದು ಎಂದು ಅಗ್ನಿಶಾಮಕ ದಳ ಹೇಳುತ್ತಿದ್ದರೆ, ತಹಶೀಲ್ದಾರ್ ವರದರಾಜು ‘ಅದು ಎಚ್.ಪಿ. ಗ್ಯಾಸ್ ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟೀಕರಣ ನೀಡಿದರು.

ಗ್ಯಾಸ್ ಸೋರಿಕೆಯು ಸುತ್ತಲ ಮೂರ್ನಾಲ್ಕು ಗ್ರಾಮಗಳಿಗೆ ಪರಿಣಾಮ ಬೀರಿದೆ. ಕೆಟ್ಟ ವಾಸನೆ ಬರುತ್ತಿದ್ದು, ಇದರಿಂದಾಗಿ ಗ್ಯಾಸ್ ಸೋರಿಕೆ ಅಪಾಯದಿಂದ ಗ್ರಾಮದ ಒಬ್ಬೊಬ್ಬರೇ ತೊರೆದು ಬೇರೆ ಕಡೆ ಹೋಗುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿ ಜನರಿಗೆ ಅಭಯ ನೀಡಬೇಕು ಹಾಗೂ ಜನರಲ್ಲಿರುವ ಆತಂಕ ದೂರಮಾಡುವ ಕೆಲಸ ಮಾಡಬೇಕಾಗಿದೆ ಜನರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳ ಸುಳ್ಳು : ರೇಬಿಸ್‍ನಂತಹ ಭಯಾನಕ ರೋಗ ಲಕ್ಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...