Homeಕರ್ನಾಟಕತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

ತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

- Advertisement -
- Advertisement -

ಅಡುಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸುಮಾರು 40 ಸಾವಿರ ಲೀಟರ್ ಗ್ಯಾಸ್ ಸೋರಿಕೆಯಾಗಿದೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮುರರಾಯನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ಗೊತ್ತಿಲ್ಲದ ಜನರು ತೀವ್ರ ಆತಂಕಗೊಂಡಿದ್ದು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ತೆರಳಿ ಜನರಲ್ಲಿನ ಆತಂಕ ನಿವಾರಣೆಗೆ ಯತ್ನಿಸಿದರು. ಆದರೂ ಜನರು ಸ್ವಯಂಪ್ರೇರಿತರಾಗಿ ಗ್ರಾಮ ತೊರೆಯುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಮ್ಮತ್ತಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮುರರಾಯನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆಯಿತು. ಪರಿಣಾಮ ಗ್ಯಾಸ್ ಟ್ಯಾಂಕರ್ ಮುಚ್ಚಳ ಬಿಚ್ಚಿಕೊಂಡು ನೀರಿನಂತೆ ಹರಿಯತೊಡಗಿದ್ದು, ಸುಮಾರು ನಾಲ್ಕು ಗಂಟೆ ಕಾಲ ನೀರು ಧುಮಿಕ್ಕುವಂತೆ ಹರಿಯಿದೆ. ಗ್ಯಾಸ್ ಸುತ್ತಲಿನ ಪರಿಸರದಲ್ಲಿ ಹರಡಿದ್ದರಿಂದ ಜನರ ಕಣ್ಣು ಉರಿಯತೊಡಗಿದ್ದು  ಇದರಿಂದ ಮತ್ತಷ್ಟು ಭೀತಿಗೊಂಡಿದ್ದಾರೆ.

ಸ್ಥಳೀಯ ನಿವಾಸಿ ಈ. ಶಿವಣ್ಣ ಮಾತನಾಡಿ, ಅಗ್ನಿಶಾಮಕದಳದ ಸಿಬ್ಬಂದಿ ಬಂದಿದೆ. ಗ್ಯಾಸ್ ವ್ಯಾಪಿಸದಂತೆ ತಡೆಯುವ ಪ್ರಯತ್ನದಲ್ಲಿ ತೊಡಗಿದೆ. ಆದರೂ ಜನರು ಹೆದರಿಕೊಂಡಿದ್ದು ಒಬ್ಬೊಬ್ಬರೇ ಗ್ರಾಮ ತೊರೆಯುತ್ತಿದ್ದಾರೆ ಅಗ್ನಿಶಾಮಕ ದಳದ ಸಿಬ್ಬಂದಿ ಮನವರಿಕೆ ಮಾಡಿದರೂ ಒಂದು ವಾರದ ಮಟ್ಟಿಗೆ ಬೇರೆ ಕಡೆ ವಾಸ ಮಾಡಲು ತರೆಳುತ್ತಿದ್ದಾರೆ. ಮುಂದೆ ಏನಾದರೂ ಅಪಾಯ ಸಂಭವಿಸಬಹುದು ಎಂಬ ಆತಂಕ ಗ್ರಾಮಸ್ಥರದ್ದು ಎಂದು ನಾನುಗೌರಿ.ಕಾಮ್ ಗೆ ತಿಳಿಸಿದರು.

ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾಗಿರುವುದರಿಂದ ಪರಿಸರಕ್ಕೆ ಏನಾದರೂ ಅಪಾಯವಾಗಬಹುದೇ? ಜನರಿಗೆ ತೊಂದರೆಯಾಗಬಹುದೇ ಎಂಬುದನ್ನು ಅಧ್ಯಯನ ಮಾಡಲು ಬೆಂಗಳೂರಿನಿಂದ ತಜ್ಞರ ತಂಡವೊಂದು ಬರುತ್ತಿದೆ ಎಂದು ವರದಿಯಾಗಿದೆ. ನಂತರ ಸಂಫೂರ್ಣ ಮಾಹಿತಿ ಕಲೆಹಾಕಿ ಅಗತ್ಯ ಮಾಹಿತಿ ನೀಡಲಿದೆ ಎಂದು ತಿಳಿದುಬಂದಿದೆ. ವೆಲ್ಟಿಂಗ್ ಮಾಡುವ ಗ್ಯಾಸ್ ಇರಬಹುದು ಎಂದು ಅಗ್ನಿಶಾಮಕ ದಳ ಹೇಳುತ್ತಿದ್ದರೆ, ತಹಶೀಲ್ದಾರ್ ವರದರಾಜು ‘ಅದು ಎಚ್.ಪಿ. ಗ್ಯಾಸ್ ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟೀಕರಣ ನೀಡಿದರು.

ಗ್ಯಾಸ್ ಸೋರಿಕೆಯು ಸುತ್ತಲ ಮೂರ್ನಾಲ್ಕು ಗ್ರಾಮಗಳಿಗೆ ಪರಿಣಾಮ ಬೀರಿದೆ. ಕೆಟ್ಟ ವಾಸನೆ ಬರುತ್ತಿದ್ದು, ಇದರಿಂದಾಗಿ ಗ್ಯಾಸ್ ಸೋರಿಕೆ ಅಪಾಯದಿಂದ ಗ್ರಾಮದ ಒಬ್ಬೊಬ್ಬರೇ ತೊರೆದು ಬೇರೆ ಕಡೆ ಹೋಗುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿ ಜನರಿಗೆ ಅಭಯ ನೀಡಬೇಕು ಹಾಗೂ ಜನರಲ್ಲಿರುವ ಆತಂಕ ದೂರಮಾಡುವ ಕೆಲಸ ಮಾಡಬೇಕಾಗಿದೆ ಜನರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳ ಸುಳ್ಳು : ರೇಬಿಸ್‍ನಂತಹ ಭಯಾನಕ ರೋಗ ಲಕ್ಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...