Homeಕರ್ನಾಟಕತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

ತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

- Advertisement -
- Advertisement -

ಅಡುಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸುಮಾರು 40 ಸಾವಿರ ಲೀಟರ್ ಗ್ಯಾಸ್ ಸೋರಿಕೆಯಾಗಿದೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮುರರಾಯನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ಗೊತ್ತಿಲ್ಲದ ಜನರು ತೀವ್ರ ಆತಂಕಗೊಂಡಿದ್ದು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ತೆರಳಿ ಜನರಲ್ಲಿನ ಆತಂಕ ನಿವಾರಣೆಗೆ ಯತ್ನಿಸಿದರು. ಆದರೂ ಜನರು ಸ್ವಯಂಪ್ರೇರಿತರಾಗಿ ಗ್ರಾಮ ತೊರೆಯುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದೊಮ್ಮತ್ತಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮುರರಾಯನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆಯಿತು. ಪರಿಣಾಮ ಗ್ಯಾಸ್ ಟ್ಯಾಂಕರ್ ಮುಚ್ಚಳ ಬಿಚ್ಚಿಕೊಂಡು ನೀರಿನಂತೆ ಹರಿಯತೊಡಗಿದ್ದು, ಸುಮಾರು ನಾಲ್ಕು ಗಂಟೆ ಕಾಲ ನೀರು ಧುಮಿಕ್ಕುವಂತೆ ಹರಿಯಿದೆ. ಗ್ಯಾಸ್ ಸುತ್ತಲಿನ ಪರಿಸರದಲ್ಲಿ ಹರಡಿದ್ದರಿಂದ ಜನರ ಕಣ್ಣು ಉರಿಯತೊಡಗಿದ್ದು  ಇದರಿಂದ ಮತ್ತಷ್ಟು ಭೀತಿಗೊಂಡಿದ್ದಾರೆ.

ಸ್ಥಳೀಯ ನಿವಾಸಿ ಈ. ಶಿವಣ್ಣ ಮಾತನಾಡಿ, ಅಗ್ನಿಶಾಮಕದಳದ ಸಿಬ್ಬಂದಿ ಬಂದಿದೆ. ಗ್ಯಾಸ್ ವ್ಯಾಪಿಸದಂತೆ ತಡೆಯುವ ಪ್ರಯತ್ನದಲ್ಲಿ ತೊಡಗಿದೆ. ಆದರೂ ಜನರು ಹೆದರಿಕೊಂಡಿದ್ದು ಒಬ್ಬೊಬ್ಬರೇ ಗ್ರಾಮ ತೊರೆಯುತ್ತಿದ್ದಾರೆ ಅಗ್ನಿಶಾಮಕ ದಳದ ಸಿಬ್ಬಂದಿ ಮನವರಿಕೆ ಮಾಡಿದರೂ ಒಂದು ವಾರದ ಮಟ್ಟಿಗೆ ಬೇರೆ ಕಡೆ ವಾಸ ಮಾಡಲು ತರೆಳುತ್ತಿದ್ದಾರೆ. ಮುಂದೆ ಏನಾದರೂ ಅಪಾಯ ಸಂಭವಿಸಬಹುದು ಎಂಬ ಆತಂಕ ಗ್ರಾಮಸ್ಥರದ್ದು ಎಂದು ನಾನುಗೌರಿ.ಕಾಮ್ ಗೆ ತಿಳಿಸಿದರು.

ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾಗಿರುವುದರಿಂದ ಪರಿಸರಕ್ಕೆ ಏನಾದರೂ ಅಪಾಯವಾಗಬಹುದೇ? ಜನರಿಗೆ ತೊಂದರೆಯಾಗಬಹುದೇ ಎಂಬುದನ್ನು ಅಧ್ಯಯನ ಮಾಡಲು ಬೆಂಗಳೂರಿನಿಂದ ತಜ್ಞರ ತಂಡವೊಂದು ಬರುತ್ತಿದೆ ಎಂದು ವರದಿಯಾಗಿದೆ. ನಂತರ ಸಂಫೂರ್ಣ ಮಾಹಿತಿ ಕಲೆಹಾಕಿ ಅಗತ್ಯ ಮಾಹಿತಿ ನೀಡಲಿದೆ ಎಂದು ತಿಳಿದುಬಂದಿದೆ. ವೆಲ್ಟಿಂಗ್ ಮಾಡುವ ಗ್ಯಾಸ್ ಇರಬಹುದು ಎಂದು ಅಗ್ನಿಶಾಮಕ ದಳ ಹೇಳುತ್ತಿದ್ದರೆ, ತಹಶೀಲ್ದಾರ್ ವರದರಾಜು ‘ಅದು ಎಚ್.ಪಿ. ಗ್ಯಾಸ್ ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟೀಕರಣ ನೀಡಿದರು.

ಗ್ಯಾಸ್ ಸೋರಿಕೆಯು ಸುತ್ತಲ ಮೂರ್ನಾಲ್ಕು ಗ್ರಾಮಗಳಿಗೆ ಪರಿಣಾಮ ಬೀರಿದೆ. ಕೆಟ್ಟ ವಾಸನೆ ಬರುತ್ತಿದ್ದು, ಇದರಿಂದಾಗಿ ಗ್ಯಾಸ್ ಸೋರಿಕೆ ಅಪಾಯದಿಂದ ಗ್ರಾಮದ ಒಬ್ಬೊಬ್ಬರೇ ತೊರೆದು ಬೇರೆ ಕಡೆ ಹೋಗುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿ ಜನರಿಗೆ ಅಭಯ ನೀಡಬೇಕು ಹಾಗೂ ಜನರಲ್ಲಿರುವ ಆತಂಕ ದೂರಮಾಡುವ ಕೆಲಸ ಮಾಡಬೇಕಾಗಿದೆ ಜನರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳ ಸುಳ್ಳು : ರೇಬಿಸ್‍ನಂತಹ ಭಯಾನಕ ರೋಗ ಲಕ್ಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...