Homeಮುಖಪುಟದೇವಾಲಯದ ಹೆಸರಿನ ರಾಜಕೀಯ ಹೇಗೆ ಸರಿಪಡಿಸಬಹುದು ಎಂದು ಅಯೋಧ್ಯೆ ಜನ ತೋರಿಸಿಕೊಟ್ಟಿದ್ದಾರೆ: ಶರದ್ ಪವಾರ್

ದೇವಾಲಯದ ಹೆಸರಿನ ರಾಜಕೀಯ ಹೇಗೆ ಸರಿಪಡಿಸಬಹುದು ಎಂದು ಅಯೋಧ್ಯೆ ಜನ ತೋರಿಸಿಕೊಟ್ಟಿದ್ದಾರೆ: ಶರದ್ ಪವಾರ್

- Advertisement -
- Advertisement -

ಬಿಜೆಪಿಯ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ದೇವಾಲಯದ ರಾಜಕೀಯವನ್ನು  ಹೇಗೆ ಸರಿಪಡಿಸಬಹುದು ಎಂದು ಅಯೋಧ್ಯೆಯ ಜನರು ಸಂದೇಶವನ್ನು ಕಳುಹಿಸಿದ್ದಾರೆ ಎಂದು ಎನ್‌ಸಿಪಿ(ಎಸ್‌ಪಿ) ನಾಯಕ ಶರದ್ ಪವಾರ್ ಹೇಳಿದ್ದಾರೆ.

ಬಾರಾಮತಿಯಲ್ಲಿ ನಡೆದ ವರ್ತಕರ ಸಮಾವೇಶದಲ್ಲಿ ಮಾತನಾಡಿದ ಪವಾರ್, ಐದು ವರ್ಷಗಳ ಹಿಂದೆ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದರೆ, ಈ ಬಾರಿ ಅವರ ಸಂಖ್ಯೆ 240ಕ್ಕೆ ಇಳಿದಿದೆ, ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯಿದೆ. ಚುನಾವಣಾ ಫಲಿತಾಂಶವು ಬಿಜೆಪಿಗೆ 60 ಸ್ಥಾನಗಳು ಕಡಿಮೆಯಾಗಿರುವುದನ್ನು ಸೂಚಿಸುತ್ತದೆ. ಬಿಜೆಪಿಗೆ ಉತ್ತರಪ್ರದೇಶದ ಜನರು ದೊಡ್ಡ ಹೊಡೆತವನ್ನು ನೀಡಿದ್ದಾರೆ. ಅಲ್ಲಿನ ಜನರು ವಿಭಿನ್ನ ರೀತಿಯ ತೀರ್ಪು ನೀಡಿದ್ದಾರೆ ಎಂದು ಹೇಳಿದ್ದಾರೆ ಎಂದು ಹೇಳಿದ್ದಾರೆ.

ರಾಮಮಂದಿರ ಚುನಾವಣಾ ಅಜೆಂಡಾ ಆಗಿರುತ್ತದೆ ಮತ್ತು ಆಡಳಿತ ಪಕ್ಷವು ಮತಗಳನ್ನು ಪಡೆಯುತ್ತದೆ ಎಂದು ಅವರು ನಿರೀಕ್ಷಿಸಿದ್ದರು, ಆದರೆ ನಮ್ಮ ದೇಶದ ಜನರು ಸಾಕಷ್ಟು ಬುದ್ಧಿವಂತರಾಗಿದ್ದಾರೆ. ದೇವಸ್ಥಾನದ ಹೆಸರಿನಲ್ಲಿ ಮತ ಕೇಳಲಾಗುತ್ತಿದೆ ಎಂದು ಅವರು ಅರಿತುಕೊಂಡಾಗ ಅವರು ವಿಭಿನ್ನ ನಿಲುವು ತೆಗೆದುಕೊಳ್ಳಲು ನಿರ್ಧರಿಸಿದರು ಮತ್ತು ಬಿಜೆಪಿ ಸೋಲನ್ನು ಎದುರಿಸಬೇಕಾಯಿತು ಎಂದು ಶರದ್‌ ಪವಾರ್‌ ಹೇಳಿದ್ದಾರೆ.

ಅಯೋಧ್ಯೆ ದೇವಾಲಯವಿರುವ ಫೈಜಾಬಾದ್ ಸಂಸದೀಯ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅವಧೇಶ್ ಪ್ರಸಾದ್ ಹಾಲಿ ಬಿಜೆಪಿ ಸಂಸದ ಲಲ್ಲು ಸಿಂಗ್ ಅವರನ್ನು 54,567 ಮತಗಳ ಅಂತರದಿಂದ ಸೋಲಿಸಿದ್ದರು. ದೇವಸ್ಥಾನವನ್ನು ಚುನಾವಣಾ ಅಜೆಂಡಾವಾಗಿ ಬಳಸಿಕೊಳ್ಳುವ ಬಗ್ಗೆ ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸುತ್ತಿರುವಾಗ ಜನರು ವಿಭಿನ್ನ ನಿಲುವು ತಳೆದಿದ್ದಾರೆ. ಅಯೋಧ್ಯೆಯ ಜನರು ದೇವಸ್ಥಾನದ ಹೆಸರಿನಲ್ಲಿ ಮಾಡುತ್ತಿರುವ ರಾಜಕೀಯವನ್ನು ಹೇಗೆ ಸರಿಪಡಿಸಬಹುದು ಎಂಬುದನ್ನು ತೋರಿಸಿದ್ದಾರೆ ಎಂದು ಶರದ್‌ ಪವಾರ್‌ ಹೇಳಿದ್ದಾರೆ.

ಭಾರತದಲ್ಲಿ ಪ್ರಜಾಪ್ರಭುತ್ವವು ಅಖಂಡವಾಗಿದೆ. ಅದು ರಾಜಕೀಯದಿಂದಲ್ಲ, ಜನರ ಸಾಮೂಹಿಕ ಆತ್ಮಸಾಕ್ಷಿಯಿಂದ, ಕಳೆದ 10 ವರ್ಷಗಳಿಂದ, ಅಧಿಕಾರದಲ್ಲಿರುವವರು ತೀವ್ರ ನಿಲುವುಗಳನ್ನು ತೆಗೆದುಕೊಂಡಿದ್ದಾರೆ, ಆದರೆ ಜನರು ಅವರನ್ನು ಮತ್ತೆ ಹಿಂದಕ್ಕೆ ಕಳುಹಿಸಿದ್ದಾರೆ. ನರೇಂದ್ರ ಮೋದಿ ಅವರು ಸರ್ಕಾರವನ್ನು ರಚಿಸಿದ್ದರೂ, ಸ್ವಂತವಾಗಿ ಅಲ್ಲ, ಚಂದ್ರಬಾಬು ನಾಯ್ಡು (ಟಿಡಿಪಿ) ಮತ್ತು ನಿತೀಶ್ ಕುಮಾರ್ (ಜೆಡಿಯು) ಅವರ ಸಹಕಾರದಿಂದ ಎಂದು ಹೇಳಿದ್ದಾರೆ.

ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿಗೆ ದೇಶವನ್ನು ಮುನ್ನಡೆಸುವ ಜನಾದೇಶವಿದೆಯೇ ಎಂದು ಶರದ್‌ ಪವಾರ್‌ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...