Homeಮುಖಪುಟಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ - ಬಿಜೆಪಿಯಿಂದ ದೂರವಿರಿ ಎಂದು ವ್ಯಂಗ್ಯವಾಡಲಾಗಿದೆ.

- Advertisement -
- Advertisement -

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳದ ‘ಬಿಜೆಪಿಗೆ ಮತ ನೀಡಬೇಡಿ’ ಎಂಬ ರೈತ ಹೋರಾಟಗಾರರು ನೀಡಿರುವ ಕರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ತಾರಕಕ್ಕೇರುತ್ತಿರುವ ಸಮಯದಲ್ಲಿ ಈ ಅಭಿಯಾನ ಹೆಚ್ಚು ಸದ್ದು ಮಾಡುತ್ತಿದ್ದು, ಮದುವೆ ಮನೆಗಳಲ್ಲಿಯೂ ಬಿಜೆಪಿಗೆ ಮತ ನೀಡಬೇಡಿ ಎಂಬ ಕರೆ ವೈರಲ್ ಆಗುತ್ತಿದೆ.

No Vote To BJP ಎಂಬ ಹೆಸರಿನಲ್ಲಿ ಟ್ವಿಟರ್ ಖಾತೆಯೊಂದನ್ನು ತೆರಯಲಾಗಿದ್ದು ಬಿಜೆಪಿ ವಿರುದ್ಧ ನಿರಂತರವಾಗಿ ಪ್ರಚಾರ ನಡೆಸುತ್ತಿದೆ. ಅದು ಮದುವೆ ಸಮಾರಂಭವೊಂದರಲ್ಲಿ ಅತಿಥಿಗಳು ಸೇರಿ ವದು ವರದು ಬಿಜೆಪಿಗೆ ಮತ ನೀಡಬೇಡಿ ಎಂದು ಫ್ಲಕಾರ್ಡುಗಳನ್ನು ಹಿಡಿದಿರುವ ಫೋಟೊವೊಂದನ್ನು ಪ್ರಕಟಿಸಿದೆ.

ಇನ್ನು ಟ್ವಿಟರ್‌ನಲ್ಲಿ ಕಳೆದ ಮೂರು ದಿನಗಳಿಂದಲೂ NoVoteToBJP ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿದೆ. ದೆಹಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತಾ ಕಿಸಾನ್ ಮೋರ್ಚಾದ ಮುಖವಾಣಿಯಾದ ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿ “ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ NoVoteToBJP ಘೋಷಣೆಯಡಿ ನಮ್ಮ ರೈತನಾಯಕರು ಪ್ರಚಾರ ಮಾಡಲು ನಿರ್ಧರಿಸಿದ್ದಾರೆ. ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದ ಬಿಜೆಪಿ ಪಕ್ಷದ ವಿರುದ್ಧ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸುತ್ತೇವೆ” ಎಂದಿದೆ. ಅಲ್ಲದು ಅದು ಎರಡು ನಿಮಿಷದ ವಿಡಿಯೋವೊಂದನ್ನು ಸಹ ಟ್ವೀಟ್ ಮಾಡಿದೆ.

ನೀವು ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿದೆ. ನಕರಾತ್ಮಕತೆ, ಔದಾರ್ಯದ ಕೊರತೆ ಮತ್ತು ಸತ್ಯ ನೋಡಲು ಇಷ್ಟಪಡದಿರುವ ಸೋಂಕು ತಗುಲಿರುವ ಜನರಿಂದ ದೂರಿವಿರಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಲಾಗಿದೆ.

ಇನ್ನು ನಿನ್ನೆ ಕೋಲ್ಕತ್ತದಲ್ಲಿ ಬಿಜೆಪಿಗೆ ಮತ ನೀಡಬೇಡಿ ಹೆಸರಿನಲ್ಲಿ ಬೃಹತ್ ರ್ಯಾಲಿ ನಡೆಸಲಾಗಿದೆ. “ಈ ಅಭಿಯಾನ ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗದೇ, ದೇಶದಲ್ಲಿ ನಡೆಯುತ್ತಿರುವ ಇಡೀ ಫ್ಯಾಸಿಸ್ಟ್ ಧೋರಣೆಯ‌ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಘೋಷಿಸಲಾಗಿದೆ. ಇಂದು ರೈತ ಮುಖಂಡ ರಾಕೇಶ್ ಟಿಕಾಯತ್ ಕೋಲ್ಕತ್ತಾದಲ್ಲಿ ಬಿಜೆಪಿಗೆ ಮತ ನೀಡಬೇಡಿ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

“ಪಟ್ರೋಲ್ ಬೆಲೆ 100 ರೂ ಆಗಿದೆ. ಸಿಲಿಂಡರ್ ಬೆಲೆ 1000 ರೂ ಆಗಿದೆ. ರಾಷ್ಟ್ರೀಯ ಸಂಪತ್ತುಗಳನ್ನು ಮಾರುವುದರಲ್ಲಿ ಸರ್ಕಾರ ನಿರತವಾಗಿದೆ. ಇಡೀ ವಿಶ್ವವೇ ಭಾರತವನ್ನು ಚುನಾವಣಾ ನಿರಂಕುಶಾಧಿಕಾರತ್ವದತ್ತ ಹೊರಳುತ್ತಿದೆ ಎಂದು ಹೇಳುತ್ತಿದೆ. ಈ ದುರಂತವನ್ನು ತಡೆಯಲು ನಿಮ್ಮ ಮತವನ್ನು ಬಳಸಿ. ಸ್ಪಷ್ಟವಾಗಿ ಮತ್ತು ಜೋರಾಗಿ ಬಿಜೆಪಿಗೆ ಮತವಿಲ್ಲ ಎಂದು ಹೇಳಿ” ಎಂದು ದೀಪಂಕರ್ ಟ್ವೀಟ್ ಮಾಡಿದ್ದಾರೆ.

3 ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ 106 ದಿನಗಳಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತೀವ್ರ ಚಳಿ ಮತ್ತು ತೀವ್ರ ಬಿಸಿಲನ್ನು ಅವರು ಎದುರಿಸಿದ್ದಾರೆ. ಹಲವಾರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲ ಕಾರಣವಾದ ಬಿಜೆಪಿಗೆ ಮತ ಹಾಕಬಾರದು ಎಂದು ಬಿಕೆಯು ಏಕ್ತಾ ಉಗ್ರಾಣ್ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...