Homeಮುಖಪುಟಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ - ಬಿಜೆಪಿಯಿಂದ ದೂರವಿರಿ ಎಂದು ವ್ಯಂಗ್ಯವಾಡಲಾಗಿದೆ.

- Advertisement -
- Advertisement -

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳದ ‘ಬಿಜೆಪಿಗೆ ಮತ ನೀಡಬೇಡಿ’ ಎಂಬ ರೈತ ಹೋರಾಟಗಾರರು ನೀಡಿರುವ ಕರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ತಾರಕಕ್ಕೇರುತ್ತಿರುವ ಸಮಯದಲ್ಲಿ ಈ ಅಭಿಯಾನ ಹೆಚ್ಚು ಸದ್ದು ಮಾಡುತ್ತಿದ್ದು, ಮದುವೆ ಮನೆಗಳಲ್ಲಿಯೂ ಬಿಜೆಪಿಗೆ ಮತ ನೀಡಬೇಡಿ ಎಂಬ ಕರೆ ವೈರಲ್ ಆಗುತ್ತಿದೆ.

No Vote To BJP ಎಂಬ ಹೆಸರಿನಲ್ಲಿ ಟ್ವಿಟರ್ ಖಾತೆಯೊಂದನ್ನು ತೆರಯಲಾಗಿದ್ದು ಬಿಜೆಪಿ ವಿರುದ್ಧ ನಿರಂತರವಾಗಿ ಪ್ರಚಾರ ನಡೆಸುತ್ತಿದೆ. ಅದು ಮದುವೆ ಸಮಾರಂಭವೊಂದರಲ್ಲಿ ಅತಿಥಿಗಳು ಸೇರಿ ವದು ವರದು ಬಿಜೆಪಿಗೆ ಮತ ನೀಡಬೇಡಿ ಎಂದು ಫ್ಲಕಾರ್ಡುಗಳನ್ನು ಹಿಡಿದಿರುವ ಫೋಟೊವೊಂದನ್ನು ಪ್ರಕಟಿಸಿದೆ.

ಇನ್ನು ಟ್ವಿಟರ್‌ನಲ್ಲಿ ಕಳೆದ ಮೂರು ದಿನಗಳಿಂದಲೂ NoVoteToBJP ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿದೆ. ದೆಹಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತಾ ಕಿಸಾನ್ ಮೋರ್ಚಾದ ಮುಖವಾಣಿಯಾದ ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿ “ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ NoVoteToBJP ಘೋಷಣೆಯಡಿ ನಮ್ಮ ರೈತನಾಯಕರು ಪ್ರಚಾರ ಮಾಡಲು ನಿರ್ಧರಿಸಿದ್ದಾರೆ. ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದ ಬಿಜೆಪಿ ಪಕ್ಷದ ವಿರುದ್ಧ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸುತ್ತೇವೆ” ಎಂದಿದೆ. ಅಲ್ಲದು ಅದು ಎರಡು ನಿಮಿಷದ ವಿಡಿಯೋವೊಂದನ್ನು ಸಹ ಟ್ವೀಟ್ ಮಾಡಿದೆ.

ನೀವು ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿದೆ. ನಕರಾತ್ಮಕತೆ, ಔದಾರ್ಯದ ಕೊರತೆ ಮತ್ತು ಸತ್ಯ ನೋಡಲು ಇಷ್ಟಪಡದಿರುವ ಸೋಂಕು ತಗುಲಿರುವ ಜನರಿಂದ ದೂರಿವಿರಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಲಾಗಿದೆ.

ಇನ್ನು ನಿನ್ನೆ ಕೋಲ್ಕತ್ತದಲ್ಲಿ ಬಿಜೆಪಿಗೆ ಮತ ನೀಡಬೇಡಿ ಹೆಸರಿನಲ್ಲಿ ಬೃಹತ್ ರ್ಯಾಲಿ ನಡೆಸಲಾಗಿದೆ. “ಈ ಅಭಿಯಾನ ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗದೇ, ದೇಶದಲ್ಲಿ ನಡೆಯುತ್ತಿರುವ ಇಡೀ ಫ್ಯಾಸಿಸ್ಟ್ ಧೋರಣೆಯ‌ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಘೋಷಿಸಲಾಗಿದೆ. ಇಂದು ರೈತ ಮುಖಂಡ ರಾಕೇಶ್ ಟಿಕಾಯತ್ ಕೋಲ್ಕತ್ತಾದಲ್ಲಿ ಬಿಜೆಪಿಗೆ ಮತ ನೀಡಬೇಡಿ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

“ಪಟ್ರೋಲ್ ಬೆಲೆ 100 ರೂ ಆಗಿದೆ. ಸಿಲಿಂಡರ್ ಬೆಲೆ 1000 ರೂ ಆಗಿದೆ. ರಾಷ್ಟ್ರೀಯ ಸಂಪತ್ತುಗಳನ್ನು ಮಾರುವುದರಲ್ಲಿ ಸರ್ಕಾರ ನಿರತವಾಗಿದೆ. ಇಡೀ ವಿಶ್ವವೇ ಭಾರತವನ್ನು ಚುನಾವಣಾ ನಿರಂಕುಶಾಧಿಕಾರತ್ವದತ್ತ ಹೊರಳುತ್ತಿದೆ ಎಂದು ಹೇಳುತ್ತಿದೆ. ಈ ದುರಂತವನ್ನು ತಡೆಯಲು ನಿಮ್ಮ ಮತವನ್ನು ಬಳಸಿ. ಸ್ಪಷ್ಟವಾಗಿ ಮತ್ತು ಜೋರಾಗಿ ಬಿಜೆಪಿಗೆ ಮತವಿಲ್ಲ ಎಂದು ಹೇಳಿ” ಎಂದು ದೀಪಂಕರ್ ಟ್ವೀಟ್ ಮಾಡಿದ್ದಾರೆ.

3 ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ 106 ದಿನಗಳಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತೀವ್ರ ಚಳಿ ಮತ್ತು ತೀವ್ರ ಬಿಸಿಲನ್ನು ಅವರು ಎದುರಿಸಿದ್ದಾರೆ. ಹಲವಾರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲ ಕಾರಣವಾದ ಬಿಜೆಪಿಗೆ ಮತ ಹಾಕಬಾರದು ಎಂದು ಬಿಕೆಯು ಏಕ್ತಾ ಉಗ್ರಾಣ್ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...