Homeಮುಖಪುಟಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ - ಬಿಜೆಪಿಯಿಂದ ದೂರವಿರಿ ಎಂದು ವ್ಯಂಗ್ಯವಾಡಲಾಗಿದೆ.

- Advertisement -
- Advertisement -

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳದ ‘ಬಿಜೆಪಿಗೆ ಮತ ನೀಡಬೇಡಿ’ ಎಂಬ ರೈತ ಹೋರಾಟಗಾರರು ನೀಡಿರುವ ಕರೆಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ತಾರಕಕ್ಕೇರುತ್ತಿರುವ ಸಮಯದಲ್ಲಿ ಈ ಅಭಿಯಾನ ಹೆಚ್ಚು ಸದ್ದು ಮಾಡುತ್ತಿದ್ದು, ಮದುವೆ ಮನೆಗಳಲ್ಲಿಯೂ ಬಿಜೆಪಿಗೆ ಮತ ನೀಡಬೇಡಿ ಎಂಬ ಕರೆ ವೈರಲ್ ಆಗುತ್ತಿದೆ.

No Vote To BJP ಎಂಬ ಹೆಸರಿನಲ್ಲಿ ಟ್ವಿಟರ್ ಖಾತೆಯೊಂದನ್ನು ತೆರಯಲಾಗಿದ್ದು ಬಿಜೆಪಿ ವಿರುದ್ಧ ನಿರಂತರವಾಗಿ ಪ್ರಚಾರ ನಡೆಸುತ್ತಿದೆ. ಅದು ಮದುವೆ ಸಮಾರಂಭವೊಂದರಲ್ಲಿ ಅತಿಥಿಗಳು ಸೇರಿ ವದು ವರದು ಬಿಜೆಪಿಗೆ ಮತ ನೀಡಬೇಡಿ ಎಂದು ಫ್ಲಕಾರ್ಡುಗಳನ್ನು ಹಿಡಿದಿರುವ ಫೋಟೊವೊಂದನ್ನು ಪ್ರಕಟಿಸಿದೆ.

ಇನ್ನು ಟ್ವಿಟರ್‌ನಲ್ಲಿ ಕಳೆದ ಮೂರು ದಿನಗಳಿಂದಲೂ NoVoteToBJP ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿದೆ. ದೆಹಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತಾ ಕಿಸಾನ್ ಮೋರ್ಚಾದ ಮುಖವಾಣಿಯಾದ ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿ “ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ NoVoteToBJP ಘೋಷಣೆಯಡಿ ನಮ್ಮ ರೈತನಾಯಕರು ಪ್ರಚಾರ ಮಾಡಲು ನಿರ್ಧರಿಸಿದ್ದಾರೆ. ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದ ಬಿಜೆಪಿ ಪಕ್ಷದ ವಿರುದ್ಧ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸುತ್ತೇವೆ” ಎಂದಿದೆ. ಅಲ್ಲದು ಅದು ಎರಡು ನಿಮಿಷದ ವಿಡಿಯೋವೊಂದನ್ನು ಸಹ ಟ್ವೀಟ್ ಮಾಡಿದೆ.

ನೀವು ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿದೆ. ನಕರಾತ್ಮಕತೆ, ಔದಾರ್ಯದ ಕೊರತೆ ಮತ್ತು ಸತ್ಯ ನೋಡಲು ಇಷ್ಟಪಡದಿರುವ ಸೋಂಕು ತಗುಲಿರುವ ಜನರಿಂದ ದೂರಿವಿರಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಲಾಗಿದೆ.

ಇನ್ನು ನಿನ್ನೆ ಕೋಲ್ಕತ್ತದಲ್ಲಿ ಬಿಜೆಪಿಗೆ ಮತ ನೀಡಬೇಡಿ ಹೆಸರಿನಲ್ಲಿ ಬೃಹತ್ ರ್ಯಾಲಿ ನಡೆಸಲಾಗಿದೆ. “ಈ ಅಭಿಯಾನ ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗದೇ, ದೇಶದಲ್ಲಿ ನಡೆಯುತ್ತಿರುವ ಇಡೀ ಫ್ಯಾಸಿಸ್ಟ್ ಧೋರಣೆಯ‌ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ಘೋಷಿಸಲಾಗಿದೆ. ಇಂದು ರೈತ ಮುಖಂಡ ರಾಕೇಶ್ ಟಿಕಾಯತ್ ಕೋಲ್ಕತ್ತಾದಲ್ಲಿ ಬಿಜೆಪಿಗೆ ಮತ ನೀಡಬೇಡಿ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

“ಪಟ್ರೋಲ್ ಬೆಲೆ 100 ರೂ ಆಗಿದೆ. ಸಿಲಿಂಡರ್ ಬೆಲೆ 1000 ರೂ ಆಗಿದೆ. ರಾಷ್ಟ್ರೀಯ ಸಂಪತ್ತುಗಳನ್ನು ಮಾರುವುದರಲ್ಲಿ ಸರ್ಕಾರ ನಿರತವಾಗಿದೆ. ಇಡೀ ವಿಶ್ವವೇ ಭಾರತವನ್ನು ಚುನಾವಣಾ ನಿರಂಕುಶಾಧಿಕಾರತ್ವದತ್ತ ಹೊರಳುತ್ತಿದೆ ಎಂದು ಹೇಳುತ್ತಿದೆ. ಈ ದುರಂತವನ್ನು ತಡೆಯಲು ನಿಮ್ಮ ಮತವನ್ನು ಬಳಸಿ. ಸ್ಪಷ್ಟವಾಗಿ ಮತ್ತು ಜೋರಾಗಿ ಬಿಜೆಪಿಗೆ ಮತವಿಲ್ಲ ಎಂದು ಹೇಳಿ” ಎಂದು ದೀಪಂಕರ್ ಟ್ವೀಟ್ ಮಾಡಿದ್ದಾರೆ.

3 ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ 106 ದಿನಗಳಿಂದ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತೀವ್ರ ಚಳಿ ಮತ್ತು ತೀವ್ರ ಬಿಸಿಲನ್ನು ಅವರು ಎದುರಿಸಿದ್ದಾರೆ. ಹಲವಾರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲ ಕಾರಣವಾದ ಬಿಜೆಪಿಗೆ ಮತ ಹಾಕಬಾರದು ಎಂದು ಬಿಕೆಯು ಏಕ್ತಾ ಉಗ್ರಾಣ್ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...