Homeಕರ್ನಾಟಕಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

ಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆ ಎಲ್ಲ ಕುತೂಹಲಕ್ಕೆ ಫಲಿತಾಂಶ ಉತ್ತರದಾಯಿಯಾಗಿದೆ. ಹರ್ಯಾಣದಲ್ಲಿ ಗೆಲ್ಲುವ ಹಮ್ಮಿನಲ್ಲಿದ್ದ ಬಿಜೆಪಿ ಮಕಾಡೆ ಮಲಗಿದೆ. ಇತ್ತ ಕಾಂಗ್ರೆಸ್‌, ಜೆಜೆಪಿ ಪಕ್ಷಗಳಿಗೂ ಬಹುಮತ ಸಿಕ್ಕಿಲ್ಲ. ಒಟ್ಟು ೯೦ ವಿಧಾನಸಭಾ ಸ್ಥಾನ ಹೊಂದಿರುವ ಹರ್ಯಾಣದಲ್ಲಿ ಮತದಾರರು ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ೪೬ ಸ್ಥಾನಗಳು ಬೇಕು.

ಕಾಂಗ್ರೆಸ್‌ ೩೦ ಸ್ಥಾನ, ಬಿಜೆಪಿ ೪೦ ಸ್ಥಾನ, ಜೆಜೆಪಿ ೧೦, ಇತರರು ೧೦ ಸ್ಥಾನ ಗೆದ್ದಿದ್ದಾರೆ. ಹರ್ಯಾಣ ಫಲಿತಾಂಶವನ್ನು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ’ ಹರಿಯಾಣದ ಜನ ಬದಲಾವಣೆ ಬಯಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ. ಹರಿಯಾಣದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸದ ಕಾರಣ ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಿದೆ’ ಎಂದು ಫೇಸ್‌ಬುಕ್‌ನಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳಾಗಲಿ, ಪ್ರಧಾನಿ ನರೇಂದ್ರ ಮೋದಿಯವರಾಗಲಿ ತಮ್ಮ ಸರ್ಕಾರಗಳ ಸಾಧನೆ ಬಗ್ಗೆ ಮಾತಾಡಲೇ ಇಲ್ಲ. ಭಾವನಾತ್ಮಕ ವಿಚಾರಗಳಾದ ಕಾಶ್ಮೀರ ವಿವಾದ ಮತ್ತು ಪಾಕಿಸ್ತಾನವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರೂ ಸಹ ಜನ ಅವರನ್ನು ತಿರಸ್ಕರಿಸಿದ್ದಾರೆ. ಹರಿಯಾಣ ಮತ್ತು ಮಹಾರಾಷ್ಟ್ರಗಳೆರಡೂ ರಾಜ್ಯಗಳಲ್ಲಿ ಚುನಾವಣಾ ಪೂರ್ವದಲ್ಲಿ ನಡೆದ ಪಕ್ಷಾಂತರ, ಸಂಘಟನೆಯಲ್ಲಿನ ಲೋಪಗಳು ಮತ್ತು ಸಂಪನ್ಮೂಲದ ಕೊರತೆಯಿಂದಾಗಿ ಕಾಂಗ್ರೆಸ್‌ಗೆ ಕೊಂಚ ಹಿನ್ನಡೆಯಾಯಿತು. ಇಲ್ಲದೆ ಇದ್ದಿದ್ದರೆ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಎಲ್ಲ ಅವಕಾಶಗಳು ಇತ್ತು. ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ, ಮಹಾರಾಷ್ಟ್ರದಲ್ಲಿ 120 ಸ್ಥಾನದಿಂದ ನೂರರ ಆಸುಪಾಸಿಗೆ ಬಂದಿದೆ. ಹರ್ಯಾಣದಲ್ಲಿ 47 ರಿಂದ 41ಕ್ಕೆ ಇಳಿದಿದೆ. ಬಿಜೆಪಿ ಭಾರೀ ಬಹುಮತ ಗಳಿಸಲಿದೆ ಎಂದು ಹೇಳುತ್ತಿದ್ದ ಸಮೀಕ್ಷೆಗಳೆಲ್ಲ ಹುಸಿಯಾಗಿವೆ.

ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ನರೇಂದ್ರ ಮೋದಿಯವರ ಕುಸಿಯುತ್ತಿರುವ ಜನಪ್ರಿಯತೆಯ ದಿಕ್ಸೂಚಿ.‌ ಎರಡೂ ಕಡೆ ಮೋದಿ-ಶಾ ಜೋಡಿ ಹಲವಾರು ರ್‍ಯಾಲಿಗಳನ್ನು ಮಾಡಿದ ಹೊರತಾಗಿಯೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾಗಿರುವುದು ಅವರ ಕ್ಷೀಣಿಸುತ್ತಿರುವ ಜನಪ್ರಿಯತೆಗೆ ಸಾಕ್ಷಿ. ಹರಿಯಾಣದಲ್ಲಿ ಐದು ತಿಂಗಳ ಹಿಂದೆ‌ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ 10ಕ್ಕೆ 10 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದೆ.‌ ಇದು ಮೋದಿಯವರ ಜನಪ್ರಿಯತೆ ಕುಸಿದಿರುವುದಕ್ಕೆ ಇನ್ನೊಂದು ಸಾಕ್ಷಿ. ನಾನು ಪ್ರಚಾರಕ್ಕೆ ಹೋಗಿದ್ದ ಮಹಾರಾಷ್ಟ್ರದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ, ಕೇರಳದ ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ ಗೆದ್ದಿರುವುದು ಸಂತಸ ಉಂಟು ಮಾಡಿದೆ.

ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇವಿಎಂ ಅನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಇಂದು ಪತ್ರಿಕೆಯೊಂದು ವರದಿ ಮಾಡಿದೆ. ಇಷ್ಟಾದರೂ ಬಿಜೆಪಿಯವರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಿ ಮತ ಚೀಟಿ ಪದ್ದತಿಯನ್ನು ಜಾರಿಗೆ ತರಲು ಮನಸಿಲ್ಲ. ಬಿಜೆಪಿಯವರಿಗೆ ಏಕೆ ಇವಿಎಂ ಮೇಲೆ ಅತಿಯಾದ ವ್ಯಾಮೋಹವೋ ಅರ್ಥವಾಗುತ್ತಿಲ್ಲ. ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಹರ್ಯಾಣದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ, ಆರ್ಥಿಕ ಕುಸಿತ, ನಿರುದ್ಯೋಗದಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಇನ್ನು ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದರ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್‌ ಬರಾಲಾ, ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಫಲಿತಾಂಶ ಪ್ರಕಟವಾದ ಮರುಕ್ಷಣವೇ ಬಿಜೆಪಿಯ ಒಂದು ವಿಕೆಟ್‌ ಪತನವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಸ್ವತಃ ಸುಭಾಷ್‌ ಬರಾಲಾ ಸ್ಪರ್ಧಿಸಿದ್ದ ತೋಹಾನಾ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಈಗ ಹರ್ಯಾಣದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...