Homeಕರ್ನಾಟಕಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

ಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆ ಎಲ್ಲ ಕುತೂಹಲಕ್ಕೆ ಫಲಿತಾಂಶ ಉತ್ತರದಾಯಿಯಾಗಿದೆ. ಹರ್ಯಾಣದಲ್ಲಿ ಗೆಲ್ಲುವ ಹಮ್ಮಿನಲ್ಲಿದ್ದ ಬಿಜೆಪಿ ಮಕಾಡೆ ಮಲಗಿದೆ. ಇತ್ತ ಕಾಂಗ್ರೆಸ್‌, ಜೆಜೆಪಿ ಪಕ್ಷಗಳಿಗೂ ಬಹುಮತ ಸಿಕ್ಕಿಲ್ಲ. ಒಟ್ಟು ೯೦ ವಿಧಾನಸಭಾ ಸ್ಥಾನ ಹೊಂದಿರುವ ಹರ್ಯಾಣದಲ್ಲಿ ಮತದಾರರು ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ೪೬ ಸ್ಥಾನಗಳು ಬೇಕು.

ಕಾಂಗ್ರೆಸ್‌ ೩೦ ಸ್ಥಾನ, ಬಿಜೆಪಿ ೪೦ ಸ್ಥಾನ, ಜೆಜೆಪಿ ೧೦, ಇತರರು ೧೦ ಸ್ಥಾನ ಗೆದ್ದಿದ್ದಾರೆ. ಹರ್ಯಾಣ ಫಲಿತಾಂಶವನ್ನು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ’ ಹರಿಯಾಣದ ಜನ ಬದಲಾವಣೆ ಬಯಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ. ಹರಿಯಾಣದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸದ ಕಾರಣ ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಿದೆ’ ಎಂದು ಫೇಸ್‌ಬುಕ್‌ನಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳಾಗಲಿ, ಪ್ರಧಾನಿ ನರೇಂದ್ರ ಮೋದಿಯವರಾಗಲಿ ತಮ್ಮ ಸರ್ಕಾರಗಳ ಸಾಧನೆ ಬಗ್ಗೆ ಮಾತಾಡಲೇ ಇಲ್ಲ. ಭಾವನಾತ್ಮಕ ವಿಚಾರಗಳಾದ ಕಾಶ್ಮೀರ ವಿವಾದ ಮತ್ತು ಪಾಕಿಸ್ತಾನವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರೂ ಸಹ ಜನ ಅವರನ್ನು ತಿರಸ್ಕರಿಸಿದ್ದಾರೆ. ಹರಿಯಾಣ ಮತ್ತು ಮಹಾರಾಷ್ಟ್ರಗಳೆರಡೂ ರಾಜ್ಯಗಳಲ್ಲಿ ಚುನಾವಣಾ ಪೂರ್ವದಲ್ಲಿ ನಡೆದ ಪಕ್ಷಾಂತರ, ಸಂಘಟನೆಯಲ್ಲಿನ ಲೋಪಗಳು ಮತ್ತು ಸಂಪನ್ಮೂಲದ ಕೊರತೆಯಿಂದಾಗಿ ಕಾಂಗ್ರೆಸ್‌ಗೆ ಕೊಂಚ ಹಿನ್ನಡೆಯಾಯಿತು. ಇಲ್ಲದೆ ಇದ್ದಿದ್ದರೆ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಎಲ್ಲ ಅವಕಾಶಗಳು ಇತ್ತು. ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ, ಮಹಾರಾಷ್ಟ್ರದಲ್ಲಿ 120 ಸ್ಥಾನದಿಂದ ನೂರರ ಆಸುಪಾಸಿಗೆ ಬಂದಿದೆ. ಹರ್ಯಾಣದಲ್ಲಿ 47 ರಿಂದ 41ಕ್ಕೆ ಇಳಿದಿದೆ. ಬಿಜೆಪಿ ಭಾರೀ ಬಹುಮತ ಗಳಿಸಲಿದೆ ಎಂದು ಹೇಳುತ್ತಿದ್ದ ಸಮೀಕ್ಷೆಗಳೆಲ್ಲ ಹುಸಿಯಾಗಿವೆ.

ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ನರೇಂದ್ರ ಮೋದಿಯವರ ಕುಸಿಯುತ್ತಿರುವ ಜನಪ್ರಿಯತೆಯ ದಿಕ್ಸೂಚಿ.‌ ಎರಡೂ ಕಡೆ ಮೋದಿ-ಶಾ ಜೋಡಿ ಹಲವಾರು ರ್‍ಯಾಲಿಗಳನ್ನು ಮಾಡಿದ ಹೊರತಾಗಿಯೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾಗಿರುವುದು ಅವರ ಕ್ಷೀಣಿಸುತ್ತಿರುವ ಜನಪ್ರಿಯತೆಗೆ ಸಾಕ್ಷಿ. ಹರಿಯಾಣದಲ್ಲಿ ಐದು ತಿಂಗಳ ಹಿಂದೆ‌ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ 10ಕ್ಕೆ 10 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದೆ.‌ ಇದು ಮೋದಿಯವರ ಜನಪ್ರಿಯತೆ ಕುಸಿದಿರುವುದಕ್ಕೆ ಇನ್ನೊಂದು ಸಾಕ್ಷಿ. ನಾನು ಪ್ರಚಾರಕ್ಕೆ ಹೋಗಿದ್ದ ಮಹಾರಾಷ್ಟ್ರದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ, ಕೇರಳದ ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ ಗೆದ್ದಿರುವುದು ಸಂತಸ ಉಂಟು ಮಾಡಿದೆ.

ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇವಿಎಂ ಅನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಇಂದು ಪತ್ರಿಕೆಯೊಂದು ವರದಿ ಮಾಡಿದೆ. ಇಷ್ಟಾದರೂ ಬಿಜೆಪಿಯವರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಿ ಮತ ಚೀಟಿ ಪದ್ದತಿಯನ್ನು ಜಾರಿಗೆ ತರಲು ಮನಸಿಲ್ಲ. ಬಿಜೆಪಿಯವರಿಗೆ ಏಕೆ ಇವಿಎಂ ಮೇಲೆ ಅತಿಯಾದ ವ್ಯಾಮೋಹವೋ ಅರ್ಥವಾಗುತ್ತಿಲ್ಲ. ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಹರ್ಯಾಣದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ, ಆರ್ಥಿಕ ಕುಸಿತ, ನಿರುದ್ಯೋಗದಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಇನ್ನು ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದರ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್‌ ಬರಾಲಾ, ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಫಲಿತಾಂಶ ಪ್ರಕಟವಾದ ಮರುಕ್ಷಣವೇ ಬಿಜೆಪಿಯ ಒಂದು ವಿಕೆಟ್‌ ಪತನವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಸ್ವತಃ ಸುಭಾಷ್‌ ಬರಾಲಾ ಸ್ಪರ್ಧಿಸಿದ್ದ ತೋಹಾನಾ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಈಗ ಹರ್ಯಾಣದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...