Homeಕರ್ನಾಟಕಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

ಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆ ಎಲ್ಲ ಕುತೂಹಲಕ್ಕೆ ಫಲಿತಾಂಶ ಉತ್ತರದಾಯಿಯಾಗಿದೆ. ಹರ್ಯಾಣದಲ್ಲಿ ಗೆಲ್ಲುವ ಹಮ್ಮಿನಲ್ಲಿದ್ದ ಬಿಜೆಪಿ ಮಕಾಡೆ ಮಲಗಿದೆ. ಇತ್ತ ಕಾಂಗ್ರೆಸ್‌, ಜೆಜೆಪಿ ಪಕ್ಷಗಳಿಗೂ ಬಹುಮತ ಸಿಕ್ಕಿಲ್ಲ. ಒಟ್ಟು ೯೦ ವಿಧಾನಸಭಾ ಸ್ಥಾನ ಹೊಂದಿರುವ ಹರ್ಯಾಣದಲ್ಲಿ ಮತದಾರರು ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ೪೬ ಸ್ಥಾನಗಳು ಬೇಕು.

ಕಾಂಗ್ರೆಸ್‌ ೩೦ ಸ್ಥಾನ, ಬಿಜೆಪಿ ೪೦ ಸ್ಥಾನ, ಜೆಜೆಪಿ ೧೦, ಇತರರು ೧೦ ಸ್ಥಾನ ಗೆದ್ದಿದ್ದಾರೆ. ಹರ್ಯಾಣ ಫಲಿತಾಂಶವನ್ನು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ’ ಹರಿಯಾಣದ ಜನ ಬದಲಾವಣೆ ಬಯಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ. ಹರಿಯಾಣದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸದ ಕಾರಣ ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಿದೆ’ ಎಂದು ಫೇಸ್‌ಬುಕ್‌ನಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳಾಗಲಿ, ಪ್ರಧಾನಿ ನರೇಂದ್ರ ಮೋದಿಯವರಾಗಲಿ ತಮ್ಮ ಸರ್ಕಾರಗಳ ಸಾಧನೆ ಬಗ್ಗೆ ಮಾತಾಡಲೇ ಇಲ್ಲ. ಭಾವನಾತ್ಮಕ ವಿಚಾರಗಳಾದ ಕಾಶ್ಮೀರ ವಿವಾದ ಮತ್ತು ಪಾಕಿಸ್ತಾನವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರೂ ಸಹ ಜನ ಅವರನ್ನು ತಿರಸ್ಕರಿಸಿದ್ದಾರೆ. ಹರಿಯಾಣ ಮತ್ತು ಮಹಾರಾಷ್ಟ್ರಗಳೆರಡೂ ರಾಜ್ಯಗಳಲ್ಲಿ ಚುನಾವಣಾ ಪೂರ್ವದಲ್ಲಿ ನಡೆದ ಪಕ್ಷಾಂತರ, ಸಂಘಟನೆಯಲ್ಲಿನ ಲೋಪಗಳು ಮತ್ತು ಸಂಪನ್ಮೂಲದ ಕೊರತೆಯಿಂದಾಗಿ ಕಾಂಗ್ರೆಸ್‌ಗೆ ಕೊಂಚ ಹಿನ್ನಡೆಯಾಯಿತು. ಇಲ್ಲದೆ ಇದ್ದಿದ್ದರೆ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಎಲ್ಲ ಅವಕಾಶಗಳು ಇತ್ತು. ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ, ಮಹಾರಾಷ್ಟ್ರದಲ್ಲಿ 120 ಸ್ಥಾನದಿಂದ ನೂರರ ಆಸುಪಾಸಿಗೆ ಬಂದಿದೆ. ಹರ್ಯಾಣದಲ್ಲಿ 47 ರಿಂದ 41ಕ್ಕೆ ಇಳಿದಿದೆ. ಬಿಜೆಪಿ ಭಾರೀ ಬಹುಮತ ಗಳಿಸಲಿದೆ ಎಂದು ಹೇಳುತ್ತಿದ್ದ ಸಮೀಕ್ಷೆಗಳೆಲ್ಲ ಹುಸಿಯಾಗಿವೆ.

ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ನರೇಂದ್ರ ಮೋದಿಯವರ ಕುಸಿಯುತ್ತಿರುವ ಜನಪ್ರಿಯತೆಯ ದಿಕ್ಸೂಚಿ.‌ ಎರಡೂ ಕಡೆ ಮೋದಿ-ಶಾ ಜೋಡಿ ಹಲವಾರು ರ್‍ಯಾಲಿಗಳನ್ನು ಮಾಡಿದ ಹೊರತಾಗಿಯೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾಗಿರುವುದು ಅವರ ಕ್ಷೀಣಿಸುತ್ತಿರುವ ಜನಪ್ರಿಯತೆಗೆ ಸಾಕ್ಷಿ. ಹರಿಯಾಣದಲ್ಲಿ ಐದು ತಿಂಗಳ ಹಿಂದೆ‌ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ 10ಕ್ಕೆ 10 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದೆ.‌ ಇದು ಮೋದಿಯವರ ಜನಪ್ರಿಯತೆ ಕುಸಿದಿರುವುದಕ್ಕೆ ಇನ್ನೊಂದು ಸಾಕ್ಷಿ. ನಾನು ಪ್ರಚಾರಕ್ಕೆ ಹೋಗಿದ್ದ ಮಹಾರಾಷ್ಟ್ರದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ, ಕೇರಳದ ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ ಗೆದ್ದಿರುವುದು ಸಂತಸ ಉಂಟು ಮಾಡಿದೆ.

ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇವಿಎಂ ಅನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಇಂದು ಪತ್ರಿಕೆಯೊಂದು ವರದಿ ಮಾಡಿದೆ. ಇಷ್ಟಾದರೂ ಬಿಜೆಪಿಯವರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಿ ಮತ ಚೀಟಿ ಪದ್ದತಿಯನ್ನು ಜಾರಿಗೆ ತರಲು ಮನಸಿಲ್ಲ. ಬಿಜೆಪಿಯವರಿಗೆ ಏಕೆ ಇವಿಎಂ ಮೇಲೆ ಅತಿಯಾದ ವ್ಯಾಮೋಹವೋ ಅರ್ಥವಾಗುತ್ತಿಲ್ಲ. ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಹರ್ಯಾಣದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ, ಆರ್ಥಿಕ ಕುಸಿತ, ನಿರುದ್ಯೋಗದಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಇನ್ನು ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದರ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್‌ ಬರಾಲಾ, ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಫಲಿತಾಂಶ ಪ್ರಕಟವಾದ ಮರುಕ್ಷಣವೇ ಬಿಜೆಪಿಯ ಒಂದು ವಿಕೆಟ್‌ ಪತನವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಸ್ವತಃ ಸುಭಾಷ್‌ ಬರಾಲಾ ಸ್ಪರ್ಧಿಸಿದ್ದ ತೋಹಾನಾ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಈಗ ಹರ್ಯಾಣದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...