Homeಕರ್ನಾಟಕಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

ಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆ ಎಲ್ಲ ಕುತೂಹಲಕ್ಕೆ ಫಲಿತಾಂಶ ಉತ್ತರದಾಯಿಯಾಗಿದೆ. ಹರ್ಯಾಣದಲ್ಲಿ ಗೆಲ್ಲುವ ಹಮ್ಮಿನಲ್ಲಿದ್ದ ಬಿಜೆಪಿ ಮಕಾಡೆ ಮಲಗಿದೆ. ಇತ್ತ ಕಾಂಗ್ರೆಸ್‌, ಜೆಜೆಪಿ ಪಕ್ಷಗಳಿಗೂ ಬಹುಮತ ಸಿಕ್ಕಿಲ್ಲ. ಒಟ್ಟು ೯೦ ವಿಧಾನಸಭಾ ಸ್ಥಾನ ಹೊಂದಿರುವ ಹರ್ಯಾಣದಲ್ಲಿ ಮತದಾರರು ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ೪೬ ಸ್ಥಾನಗಳು ಬೇಕು.

ಕಾಂಗ್ರೆಸ್‌ ೩೦ ಸ್ಥಾನ, ಬಿಜೆಪಿ ೪೦ ಸ್ಥಾನ, ಜೆಜೆಪಿ ೧೦, ಇತರರು ೧೦ ಸ್ಥಾನ ಗೆದ್ದಿದ್ದಾರೆ. ಹರ್ಯಾಣ ಫಲಿತಾಂಶವನ್ನು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ’ ಹರಿಯಾಣದ ಜನ ಬದಲಾವಣೆ ಬಯಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ. ಹರಿಯಾಣದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸದ ಕಾರಣ ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಿದೆ’ ಎಂದು ಫೇಸ್‌ಬುಕ್‌ನಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳಾಗಲಿ, ಪ್ರಧಾನಿ ನರೇಂದ್ರ ಮೋದಿಯವರಾಗಲಿ ತಮ್ಮ ಸರ್ಕಾರಗಳ ಸಾಧನೆ ಬಗ್ಗೆ ಮಾತಾಡಲೇ ಇಲ್ಲ. ಭಾವನಾತ್ಮಕ ವಿಚಾರಗಳಾದ ಕಾಶ್ಮೀರ ವಿವಾದ ಮತ್ತು ಪಾಕಿಸ್ತಾನವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರೂ ಸಹ ಜನ ಅವರನ್ನು ತಿರಸ್ಕರಿಸಿದ್ದಾರೆ. ಹರಿಯಾಣ ಮತ್ತು ಮಹಾರಾಷ್ಟ್ರಗಳೆರಡೂ ರಾಜ್ಯಗಳಲ್ಲಿ ಚುನಾವಣಾ ಪೂರ್ವದಲ್ಲಿ ನಡೆದ ಪಕ್ಷಾಂತರ, ಸಂಘಟನೆಯಲ್ಲಿನ ಲೋಪಗಳು ಮತ್ತು ಸಂಪನ್ಮೂಲದ ಕೊರತೆಯಿಂದಾಗಿ ಕಾಂಗ್ರೆಸ್‌ಗೆ ಕೊಂಚ ಹಿನ್ನಡೆಯಾಯಿತು. ಇಲ್ಲದೆ ಇದ್ದಿದ್ದರೆ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಎಲ್ಲ ಅವಕಾಶಗಳು ಇತ್ತು. ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ, ಮಹಾರಾಷ್ಟ್ರದಲ್ಲಿ 120 ಸ್ಥಾನದಿಂದ ನೂರರ ಆಸುಪಾಸಿಗೆ ಬಂದಿದೆ. ಹರ್ಯಾಣದಲ್ಲಿ 47 ರಿಂದ 41ಕ್ಕೆ ಇಳಿದಿದೆ. ಬಿಜೆಪಿ ಭಾರೀ ಬಹುಮತ ಗಳಿಸಲಿದೆ ಎಂದು ಹೇಳುತ್ತಿದ್ದ ಸಮೀಕ್ಷೆಗಳೆಲ್ಲ ಹುಸಿಯಾಗಿವೆ.

ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ನರೇಂದ್ರ ಮೋದಿಯವರ ಕುಸಿಯುತ್ತಿರುವ ಜನಪ್ರಿಯತೆಯ ದಿಕ್ಸೂಚಿ.‌ ಎರಡೂ ಕಡೆ ಮೋದಿ-ಶಾ ಜೋಡಿ ಹಲವಾರು ರ್‍ಯಾಲಿಗಳನ್ನು ಮಾಡಿದ ಹೊರತಾಗಿಯೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾಗಿರುವುದು ಅವರ ಕ್ಷೀಣಿಸುತ್ತಿರುವ ಜನಪ್ರಿಯತೆಗೆ ಸಾಕ್ಷಿ. ಹರಿಯಾಣದಲ್ಲಿ ಐದು ತಿಂಗಳ ಹಿಂದೆ‌ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ 10ಕ್ಕೆ 10 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದೆ.‌ ಇದು ಮೋದಿಯವರ ಜನಪ್ರಿಯತೆ ಕುಸಿದಿರುವುದಕ್ಕೆ ಇನ್ನೊಂದು ಸಾಕ್ಷಿ. ನಾನು ಪ್ರಚಾರಕ್ಕೆ ಹೋಗಿದ್ದ ಮಹಾರಾಷ್ಟ್ರದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ, ಕೇರಳದ ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ ಗೆದ್ದಿರುವುದು ಸಂತಸ ಉಂಟು ಮಾಡಿದೆ.

ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇವಿಎಂ ಅನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಇಂದು ಪತ್ರಿಕೆಯೊಂದು ವರದಿ ಮಾಡಿದೆ. ಇಷ್ಟಾದರೂ ಬಿಜೆಪಿಯವರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಿ ಮತ ಚೀಟಿ ಪದ್ದತಿಯನ್ನು ಜಾರಿಗೆ ತರಲು ಮನಸಿಲ್ಲ. ಬಿಜೆಪಿಯವರಿಗೆ ಏಕೆ ಇವಿಎಂ ಮೇಲೆ ಅತಿಯಾದ ವ್ಯಾಮೋಹವೋ ಅರ್ಥವಾಗುತ್ತಿಲ್ಲ. ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಹರ್ಯಾಣದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ, ಆರ್ಥಿಕ ಕುಸಿತ, ನಿರುದ್ಯೋಗದಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಇನ್ನು ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದರ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್‌ ಬರಾಲಾ, ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಫಲಿತಾಂಶ ಪ್ರಕಟವಾದ ಮರುಕ್ಷಣವೇ ಬಿಜೆಪಿಯ ಒಂದು ವಿಕೆಟ್‌ ಪತನವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಸ್ವತಃ ಸುಭಾಷ್‌ ಬರಾಲಾ ಸ್ಪರ್ಧಿಸಿದ್ದ ತೋಹಾನಾ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಈಗ ಹರ್ಯಾಣದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...