Homeಕರ್ನಾಟಕಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

ಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆ ಎಲ್ಲ ಕುತೂಹಲಕ್ಕೆ ಫಲಿತಾಂಶ ಉತ್ತರದಾಯಿಯಾಗಿದೆ. ಹರ್ಯಾಣದಲ್ಲಿ ಗೆಲ್ಲುವ ಹಮ್ಮಿನಲ್ಲಿದ್ದ ಬಿಜೆಪಿ ಮಕಾಡೆ ಮಲಗಿದೆ. ಇತ್ತ ಕಾಂಗ್ರೆಸ್‌, ಜೆಜೆಪಿ ಪಕ್ಷಗಳಿಗೂ ಬಹುಮತ ಸಿಕ್ಕಿಲ್ಲ. ಒಟ್ಟು ೯೦ ವಿಧಾನಸಭಾ ಸ್ಥಾನ ಹೊಂದಿರುವ ಹರ್ಯಾಣದಲ್ಲಿ ಮತದಾರರು ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ೪೬ ಸ್ಥಾನಗಳು ಬೇಕು.

ಕಾಂಗ್ರೆಸ್‌ ೩೦ ಸ್ಥಾನ, ಬಿಜೆಪಿ ೪೦ ಸ್ಥಾನ, ಜೆಜೆಪಿ ೧೦, ಇತರರು ೧೦ ಸ್ಥಾನ ಗೆದ್ದಿದ್ದಾರೆ. ಹರ್ಯಾಣ ಫಲಿತಾಂಶವನ್ನು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ’ ಹರಿಯಾಣದ ಜನ ಬದಲಾವಣೆ ಬಯಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ. ಹರಿಯಾಣದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸದ ಕಾರಣ ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಿದೆ’ ಎಂದು ಫೇಸ್‌ಬುಕ್‌ನಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳಾಗಲಿ, ಪ್ರಧಾನಿ ನರೇಂದ್ರ ಮೋದಿಯವರಾಗಲಿ ತಮ್ಮ ಸರ್ಕಾರಗಳ ಸಾಧನೆ ಬಗ್ಗೆ ಮಾತಾಡಲೇ ಇಲ್ಲ. ಭಾವನಾತ್ಮಕ ವಿಚಾರಗಳಾದ ಕಾಶ್ಮೀರ ವಿವಾದ ಮತ್ತು ಪಾಕಿಸ್ತಾನವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರೂ ಸಹ ಜನ ಅವರನ್ನು ತಿರಸ್ಕರಿಸಿದ್ದಾರೆ. ಹರಿಯಾಣ ಮತ್ತು ಮಹಾರಾಷ್ಟ್ರಗಳೆರಡೂ ರಾಜ್ಯಗಳಲ್ಲಿ ಚುನಾವಣಾ ಪೂರ್ವದಲ್ಲಿ ನಡೆದ ಪಕ್ಷಾಂತರ, ಸಂಘಟನೆಯಲ್ಲಿನ ಲೋಪಗಳು ಮತ್ತು ಸಂಪನ್ಮೂಲದ ಕೊರತೆಯಿಂದಾಗಿ ಕಾಂಗ್ರೆಸ್‌ಗೆ ಕೊಂಚ ಹಿನ್ನಡೆಯಾಯಿತು. ಇಲ್ಲದೆ ಇದ್ದಿದ್ದರೆ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಎಲ್ಲ ಅವಕಾಶಗಳು ಇತ್ತು. ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ, ಮಹಾರಾಷ್ಟ್ರದಲ್ಲಿ 120 ಸ್ಥಾನದಿಂದ ನೂರರ ಆಸುಪಾಸಿಗೆ ಬಂದಿದೆ. ಹರ್ಯಾಣದಲ್ಲಿ 47 ರಿಂದ 41ಕ್ಕೆ ಇಳಿದಿದೆ. ಬಿಜೆಪಿ ಭಾರೀ ಬಹುಮತ ಗಳಿಸಲಿದೆ ಎಂದು ಹೇಳುತ್ತಿದ್ದ ಸಮೀಕ್ಷೆಗಳೆಲ್ಲ ಹುಸಿಯಾಗಿವೆ.

ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ನರೇಂದ್ರ ಮೋದಿಯವರ ಕುಸಿಯುತ್ತಿರುವ ಜನಪ್ರಿಯತೆಯ ದಿಕ್ಸೂಚಿ.‌ ಎರಡೂ ಕಡೆ ಮೋದಿ-ಶಾ ಜೋಡಿ ಹಲವಾರು ರ್‍ಯಾಲಿಗಳನ್ನು ಮಾಡಿದ ಹೊರತಾಗಿಯೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾಗಿರುವುದು ಅವರ ಕ್ಷೀಣಿಸುತ್ತಿರುವ ಜನಪ್ರಿಯತೆಗೆ ಸಾಕ್ಷಿ. ಹರಿಯಾಣದಲ್ಲಿ ಐದು ತಿಂಗಳ ಹಿಂದೆ‌ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ 10ಕ್ಕೆ 10 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದೆ.‌ ಇದು ಮೋದಿಯವರ ಜನಪ್ರಿಯತೆ ಕುಸಿದಿರುವುದಕ್ಕೆ ಇನ್ನೊಂದು ಸಾಕ್ಷಿ. ನಾನು ಪ್ರಚಾರಕ್ಕೆ ಹೋಗಿದ್ದ ಮಹಾರಾಷ್ಟ್ರದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ, ಕೇರಳದ ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ ಗೆದ್ದಿರುವುದು ಸಂತಸ ಉಂಟು ಮಾಡಿದೆ.

ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇವಿಎಂ ಅನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಇಂದು ಪತ್ರಿಕೆಯೊಂದು ವರದಿ ಮಾಡಿದೆ. ಇಷ್ಟಾದರೂ ಬಿಜೆಪಿಯವರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಿ ಮತ ಚೀಟಿ ಪದ್ದತಿಯನ್ನು ಜಾರಿಗೆ ತರಲು ಮನಸಿಲ್ಲ. ಬಿಜೆಪಿಯವರಿಗೆ ಏಕೆ ಇವಿಎಂ ಮೇಲೆ ಅತಿಯಾದ ವ್ಯಾಮೋಹವೋ ಅರ್ಥವಾಗುತ್ತಿಲ್ಲ. ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಹರ್ಯಾಣದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ, ಆರ್ಥಿಕ ಕುಸಿತ, ನಿರುದ್ಯೋಗದಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಇನ್ನು ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದರ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್‌ ಬರಾಲಾ, ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಫಲಿತಾಂಶ ಪ್ರಕಟವಾದ ಮರುಕ್ಷಣವೇ ಬಿಜೆಪಿಯ ಒಂದು ವಿಕೆಟ್‌ ಪತನವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಸ್ವತಃ ಸುಭಾಷ್‌ ಬರಾಲಾ ಸ್ಪರ್ಧಿಸಿದ್ದ ತೋಹಾನಾ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಈಗ ಹರ್ಯಾಣದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...