Homeಕರ್ನಾಟಕಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ''100% ಬದ್ಧತೆ''ಯ ಸರ್ಕಾರ ಬೇಕು: ಶಶಿ ತರೂರ್

ಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ”100% ಬದ್ಧತೆ”ಯ ಸರ್ಕಾರ ಬೇಕು: ಶಶಿ ತರೂರ್

- Advertisement -
- Advertisement -

ಕರ್ನಾಟಕದ ಜನರು 40% ಕಮಿಷನ್‌ನಿಂದ ಬೇಸತ್ತಿದ್ದಾರೆ ಮತ್ತು ”ಶೇ 100 ರಷ್ಟು ಬದ್ಧತೆ”ಯನ್ನು ನೀಡುವ ಕಾಂಗ್ರೆಸ್ ಪಕ್ಷವನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಬಯಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರ ಮಟ್ಟದ ಆಡಳಿತದಲ್ಲಿನ ”ಗಂಭೀರ ಸಮಸ್ಯಗಳನ್ನು” ನಿಭಾಯಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ತಿರುವನಂತಪುರಂ ಸಂಸದ ತರೂರ್ಅವರು, ”ಈ ರಾಜ್ಯದ ಜನರು ಶೇಕಡಾ 40 ರಷ್ಟು ಕಮಿಷನ್‌ನಿಂದ ಬೇಸತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅವರಿಗೆ ಬೇಕಾಗಿರುವುದು 100 ಪ್ರತಿಶತ ಬದ್ಧತೆ ಮತ್ತು ಅದನ್ನೇ ನಾವು ನೀಡುತ್ತೇವೆ” ಎಂದು ತಿಳಿಸಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿರುವಾಗ ಮತ್ತೆ ರಾಜ್ಯ ಬಿಜೆಪಿ ಸರ್ಕಾರದ 40% ಕಮೀಷನ್ ಆರೋಪವನ್ನು ಪುನರುಚ್ಚಿಸಿರುವ ತರೂರ್, ”ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಗುತ್ತಿಗೆದಾರರು, ಅನುದಾನರಹಿತ ಖಾಸಗಿ ಶಾಲೆಗಳು ಮತ್ತು ಕೆಲವು ಧಾರ್ಮಿಕ ಸಂಸ್ಥೆಗಳಿಂದ ಪಡೆದ ಅನುದಾನದಲ್ಲಿ ಶೇಕಡಾ 40 ರಷ್ಟು ಕಮಿಷನ್ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ದುರಾಡಳಿ ನಡೆಯುತ್ತಿದ್ದು, ಮೂಲಸೌಕರ್ಯಗಳ ವಿಚಾರದಲ್ಲಿ ಬೆಂಗಳೂರು ನಗರ ಮುಜುಗರಕ್ಕಿಡಾಗುತ್ತಿದೆ ಎಂದು ತರೂರ್ ಹೇಳಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

”ನಮ್ಮ ಸಂದೇಶವು ತುಂಬಾ ಸರಳವಾಗಿದೆ. ದುರದೃಷ್ಟವಶಾತ್, ನಾಲ್ಕು ವರ್ಷಗಳಿಂದ ನಾವು ಅತ್ಯಂತ ಕೆಟ್ಟ ಆಡಳಿತವನ್ನು ನೋಡಿದ್ದೇವೆ. ಈ ಕೆಟ್ಟ ಆಡಳಿತದಿಂದ ಬೇಸತ್ತಿರುವ ಜನರು ಅನಿವಾರ್ಯವಾಗಿ ಬೇರೆ ಸರ್ಕಾರ ಬೇಕು ಎಂದು ಬಯಸುತ್ತಿದ್ದಾರೆ” ಎಂದು ತರೂರ್ ಹೇಳಿದರು.

ಈ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಾಗಿಲ್ಲ ಹಾಗಾಗಿ ಆ ಅಗತ್ಯಗಳನ್ನು ಪೂರೈಸಲು ಕಾಂಗ್ರೆಸ್ ಪಕ್ಷವು ಈಗಾಗಲೇ ಹಲವಾರು ”ಗ್ಯಾರೆಂಟಿ ಭರವಸೆಗಳನ್ನು” ಹೊರತಂದಿದೆ ಎಂದು ಹೇಳಿದರು.

ರಾಜ್ಯದಲ್ಲಿನ ನಿರುದ್ಯೋಗಿ ಪದವೀಧರರು ಮತ್ತು ನಿರುದ್ಯೋಗಿ ಡಿಪ್ಲೊಮಾ-ಹೋಲ್ಡರ್‌ಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ಬೆಂಬಲ ನೀಡಲು ಕಾಂಗ್ರೆಸ್ ಯುವನಿಧಿ ಎನ್ನುವ ಯೋಜನೆಯನ್ನು ತರುತ್ತಿದೆ ಎಂದು ಅವರು ಹೇಳಿದರು. ಇದರಿಂದಾಗಿ ಅವರು ಹುಡುಕುತ್ತಿರುವ ಸಂದರ್ಭದಲ್ಲಿ ಸ್ವಾಭಿಮಾನದಿಂದ ಬದುಕಬಹುದು. ಇನ್ನು ಮನೆಯ ಹೆಣ್ಣುಮಕ್ಕಳನ್ನು ಗೌರವಿಸಲು ಗೃಹಲಕ್ಷ್ಮೀ ಯೋಜನೆ ತರಲಾಗುತ್ತಿದೆ. ಇದರಿಂದ ವೇತನವಿಲ್ಲದೇ ಮನೆಯಲ್ಲಿ ದುಡಿಯುತ್ತಿರುವ ಗೃಹಿಣಿಯರು ಸ್ವಲ್ಪ ಪರಿಹಾರವನ್ನು ಪಡೆಯಬಹುದು ಎಂದು ಅವರು ಹೇಳಿದರು.

ಕೆಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ, ”ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಶಾಸಕರು ಮತ್ತು ಎಂಎಲ್‌ಸಿಗಳು ಸಹ ಇತರ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರಿದ್ದಾರೆ” ಎಂದು ತಿಳಿಸಿದರು.

”ಕರ್ನಾಟಕದ ಪರಿಸ್ಥಿತಿಯನ್ನು ಗಮನಿಸಿದರೆ, ಕಳೆದ ಕೆಲವು ತಿಂಗಳುಗಳಲ್ಲಿ ಐವರು ಶಾಸಕರು, ಇಬ್ಬರು ಎಂಎಲ್‌ಸಿಗಳು, 11 ಮಾಜಿ ಶಾಸಕರು, ನಾಲ್ವರು ಮಾಜಿ ಎಂಎಲ್‌ಸಿಗಳು ಮತ್ತು ಒಬ್ಬ ಮಾಜಿ ಸಂಸದರು ಕಾಂಗ್ರೆಸ್‌ಗೆ ಸೇರಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಇತರ ಪಕ್ಷದವರಿಗು ತಿಳಿದಿದೆ ಎಂದು ಅವರು ಹೇಳಿದರು.

ಆದರೆ, ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಸದಸ್ಯರ ಬಗ್ಗೆ ನನಗೆ ನಿರಾಸೆಯಾಗಿದೆ. ಅವರು ಕಾಂಗ್ರೆಸ್ ಬಿಡುವಾಗ ಅದೇ ಮೌಲ್ಯಗಳನ್ನು ಹೊಂದಿರುವ ಬೇರೆ ಯಾವ ಪಕ್ಷಕ್ಕಾದರೂ ಸೇರಬಹುದಿತ್ತು. ಆದರೆ ಕೋಮುವಾದಿ ಬಿಜೆಪಿ ಪಕ್ಷ ಸೇರಿದ್ದಾರೆ. ವಿರುದ್ಧವಾದ ಮೌಲ್ಯಗಳು ಮತ್ತು ತತ್ವಗಳನ್ನು ಹೊಂದಿರುವ ಪಕ್ಷಕ್ಕೆ ಅವರು ಹೇಗೆ ಹೋಗುತ್ತಾರೆ ಎಂದು ಅವರು ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...