Homeಕರ್ನಾಟಕಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ''100% ಬದ್ಧತೆ''ಯ ಸರ್ಕಾರ ಬೇಕು: ಶಶಿ ತರೂರ್

ಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ”100% ಬದ್ಧತೆ”ಯ ಸರ್ಕಾರ ಬೇಕು: ಶಶಿ ತರೂರ್

- Advertisement -
- Advertisement -

ಕರ್ನಾಟಕದ ಜನರು 40% ಕಮಿಷನ್‌ನಿಂದ ಬೇಸತ್ತಿದ್ದಾರೆ ಮತ್ತು ”ಶೇ 100 ರಷ್ಟು ಬದ್ಧತೆ”ಯನ್ನು ನೀಡುವ ಕಾಂಗ್ರೆಸ್ ಪಕ್ಷವನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಬಯಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರ ಮಟ್ಟದ ಆಡಳಿತದಲ್ಲಿನ ”ಗಂಭೀರ ಸಮಸ್ಯಗಳನ್ನು” ನಿಭಾಯಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ತಿರುವನಂತಪುರಂ ಸಂಸದ ತರೂರ್ಅವರು, ”ಈ ರಾಜ್ಯದ ಜನರು ಶೇಕಡಾ 40 ರಷ್ಟು ಕಮಿಷನ್‌ನಿಂದ ಬೇಸತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅವರಿಗೆ ಬೇಕಾಗಿರುವುದು 100 ಪ್ರತಿಶತ ಬದ್ಧತೆ ಮತ್ತು ಅದನ್ನೇ ನಾವು ನೀಡುತ್ತೇವೆ” ಎಂದು ತಿಳಿಸಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿರುವಾಗ ಮತ್ತೆ ರಾಜ್ಯ ಬಿಜೆಪಿ ಸರ್ಕಾರದ 40% ಕಮೀಷನ್ ಆರೋಪವನ್ನು ಪುನರುಚ್ಚಿಸಿರುವ ತರೂರ್, ”ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಗುತ್ತಿಗೆದಾರರು, ಅನುದಾನರಹಿತ ಖಾಸಗಿ ಶಾಲೆಗಳು ಮತ್ತು ಕೆಲವು ಧಾರ್ಮಿಕ ಸಂಸ್ಥೆಗಳಿಂದ ಪಡೆದ ಅನುದಾನದಲ್ಲಿ ಶೇಕಡಾ 40 ರಷ್ಟು ಕಮಿಷನ್ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ದುರಾಡಳಿ ನಡೆಯುತ್ತಿದ್ದು, ಮೂಲಸೌಕರ್ಯಗಳ ವಿಚಾರದಲ್ಲಿ ಬೆಂಗಳೂರು ನಗರ ಮುಜುಗರಕ್ಕಿಡಾಗುತ್ತಿದೆ ಎಂದು ತರೂರ್ ಹೇಳಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

”ನಮ್ಮ ಸಂದೇಶವು ತುಂಬಾ ಸರಳವಾಗಿದೆ. ದುರದೃಷ್ಟವಶಾತ್, ನಾಲ್ಕು ವರ್ಷಗಳಿಂದ ನಾವು ಅತ್ಯಂತ ಕೆಟ್ಟ ಆಡಳಿತವನ್ನು ನೋಡಿದ್ದೇವೆ. ಈ ಕೆಟ್ಟ ಆಡಳಿತದಿಂದ ಬೇಸತ್ತಿರುವ ಜನರು ಅನಿವಾರ್ಯವಾಗಿ ಬೇರೆ ಸರ್ಕಾರ ಬೇಕು ಎಂದು ಬಯಸುತ್ತಿದ್ದಾರೆ” ಎಂದು ತರೂರ್ ಹೇಳಿದರು.

ಈ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಾಗಿಲ್ಲ ಹಾಗಾಗಿ ಆ ಅಗತ್ಯಗಳನ್ನು ಪೂರೈಸಲು ಕಾಂಗ್ರೆಸ್ ಪಕ್ಷವು ಈಗಾಗಲೇ ಹಲವಾರು ”ಗ್ಯಾರೆಂಟಿ ಭರವಸೆಗಳನ್ನು” ಹೊರತಂದಿದೆ ಎಂದು ಹೇಳಿದರು.

ರಾಜ್ಯದಲ್ಲಿನ ನಿರುದ್ಯೋಗಿ ಪದವೀಧರರು ಮತ್ತು ನಿರುದ್ಯೋಗಿ ಡಿಪ್ಲೊಮಾ-ಹೋಲ್ಡರ್‌ಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ಬೆಂಬಲ ನೀಡಲು ಕಾಂಗ್ರೆಸ್ ಯುವನಿಧಿ ಎನ್ನುವ ಯೋಜನೆಯನ್ನು ತರುತ್ತಿದೆ ಎಂದು ಅವರು ಹೇಳಿದರು. ಇದರಿಂದಾಗಿ ಅವರು ಹುಡುಕುತ್ತಿರುವ ಸಂದರ್ಭದಲ್ಲಿ ಸ್ವಾಭಿಮಾನದಿಂದ ಬದುಕಬಹುದು. ಇನ್ನು ಮನೆಯ ಹೆಣ್ಣುಮಕ್ಕಳನ್ನು ಗೌರವಿಸಲು ಗೃಹಲಕ್ಷ್ಮೀ ಯೋಜನೆ ತರಲಾಗುತ್ತಿದೆ. ಇದರಿಂದ ವೇತನವಿಲ್ಲದೇ ಮನೆಯಲ್ಲಿ ದುಡಿಯುತ್ತಿರುವ ಗೃಹಿಣಿಯರು ಸ್ವಲ್ಪ ಪರಿಹಾರವನ್ನು ಪಡೆಯಬಹುದು ಎಂದು ಅವರು ಹೇಳಿದರು.

ಕೆಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ, ”ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಶಾಸಕರು ಮತ್ತು ಎಂಎಲ್‌ಸಿಗಳು ಸಹ ಇತರ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರಿದ್ದಾರೆ” ಎಂದು ತಿಳಿಸಿದರು.

”ಕರ್ನಾಟಕದ ಪರಿಸ್ಥಿತಿಯನ್ನು ಗಮನಿಸಿದರೆ, ಕಳೆದ ಕೆಲವು ತಿಂಗಳುಗಳಲ್ಲಿ ಐವರು ಶಾಸಕರು, ಇಬ್ಬರು ಎಂಎಲ್‌ಸಿಗಳು, 11 ಮಾಜಿ ಶಾಸಕರು, ನಾಲ್ವರು ಮಾಜಿ ಎಂಎಲ್‌ಸಿಗಳು ಮತ್ತು ಒಬ್ಬ ಮಾಜಿ ಸಂಸದರು ಕಾಂಗ್ರೆಸ್‌ಗೆ ಸೇರಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಇತರ ಪಕ್ಷದವರಿಗು ತಿಳಿದಿದೆ ಎಂದು ಅವರು ಹೇಳಿದರು.

ಆದರೆ, ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಸದಸ್ಯರ ಬಗ್ಗೆ ನನಗೆ ನಿರಾಸೆಯಾಗಿದೆ. ಅವರು ಕಾಂಗ್ರೆಸ್ ಬಿಡುವಾಗ ಅದೇ ಮೌಲ್ಯಗಳನ್ನು ಹೊಂದಿರುವ ಬೇರೆ ಯಾವ ಪಕ್ಷಕ್ಕಾದರೂ ಸೇರಬಹುದಿತ್ತು. ಆದರೆ ಕೋಮುವಾದಿ ಬಿಜೆಪಿ ಪಕ್ಷ ಸೇರಿದ್ದಾರೆ. ವಿರುದ್ಧವಾದ ಮೌಲ್ಯಗಳು ಮತ್ತು ತತ್ವಗಳನ್ನು ಹೊಂದಿರುವ ಪಕ್ಷಕ್ಕೆ ಅವರು ಹೇಗೆ ಹೋಗುತ್ತಾರೆ ಎಂದು ಅವರು ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...