Homeಕರ್ನಾಟಕಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ''100% ಬದ್ಧತೆ''ಯ ಸರ್ಕಾರ ಬೇಕು: ಶಶಿ ತರೂರ್

ಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ”100% ಬದ್ಧತೆ”ಯ ಸರ್ಕಾರ ಬೇಕು: ಶಶಿ ತರೂರ್

- Advertisement -
- Advertisement -

ಕರ್ನಾಟಕದ ಜನರು 40% ಕಮಿಷನ್‌ನಿಂದ ಬೇಸತ್ತಿದ್ದಾರೆ ಮತ್ತು ”ಶೇ 100 ರಷ್ಟು ಬದ್ಧತೆ”ಯನ್ನು ನೀಡುವ ಕಾಂಗ್ರೆಸ್ ಪಕ್ಷವನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಬಯಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರ ಮಟ್ಟದ ಆಡಳಿತದಲ್ಲಿನ ”ಗಂಭೀರ ಸಮಸ್ಯಗಳನ್ನು” ನಿಭಾಯಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ತಿರುವನಂತಪುರಂ ಸಂಸದ ತರೂರ್ಅವರು, ”ಈ ರಾಜ್ಯದ ಜನರು ಶೇಕಡಾ 40 ರಷ್ಟು ಕಮಿಷನ್‌ನಿಂದ ಬೇಸತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅವರಿಗೆ ಬೇಕಾಗಿರುವುದು 100 ಪ್ರತಿಶತ ಬದ್ಧತೆ ಮತ್ತು ಅದನ್ನೇ ನಾವು ನೀಡುತ್ತೇವೆ” ಎಂದು ತಿಳಿಸಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿರುವಾಗ ಮತ್ತೆ ರಾಜ್ಯ ಬಿಜೆಪಿ ಸರ್ಕಾರದ 40% ಕಮೀಷನ್ ಆರೋಪವನ್ನು ಪುನರುಚ್ಚಿಸಿರುವ ತರೂರ್, ”ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಗುತ್ತಿಗೆದಾರರು, ಅನುದಾನರಹಿತ ಖಾಸಗಿ ಶಾಲೆಗಳು ಮತ್ತು ಕೆಲವು ಧಾರ್ಮಿಕ ಸಂಸ್ಥೆಗಳಿಂದ ಪಡೆದ ಅನುದಾನದಲ್ಲಿ ಶೇಕಡಾ 40 ರಷ್ಟು ಕಮಿಷನ್ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ದುರಾಡಳಿ ನಡೆಯುತ್ತಿದ್ದು, ಮೂಲಸೌಕರ್ಯಗಳ ವಿಚಾರದಲ್ಲಿ ಬೆಂಗಳೂರು ನಗರ ಮುಜುಗರಕ್ಕಿಡಾಗುತ್ತಿದೆ ಎಂದು ತರೂರ್ ಹೇಳಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

”ನಮ್ಮ ಸಂದೇಶವು ತುಂಬಾ ಸರಳವಾಗಿದೆ. ದುರದೃಷ್ಟವಶಾತ್, ನಾಲ್ಕು ವರ್ಷಗಳಿಂದ ನಾವು ಅತ್ಯಂತ ಕೆಟ್ಟ ಆಡಳಿತವನ್ನು ನೋಡಿದ್ದೇವೆ. ಈ ಕೆಟ್ಟ ಆಡಳಿತದಿಂದ ಬೇಸತ್ತಿರುವ ಜನರು ಅನಿವಾರ್ಯವಾಗಿ ಬೇರೆ ಸರ್ಕಾರ ಬೇಕು ಎಂದು ಬಯಸುತ್ತಿದ್ದಾರೆ” ಎಂದು ತರೂರ್ ಹೇಳಿದರು.

ಈ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಾಗಿಲ್ಲ ಹಾಗಾಗಿ ಆ ಅಗತ್ಯಗಳನ್ನು ಪೂರೈಸಲು ಕಾಂಗ್ರೆಸ್ ಪಕ್ಷವು ಈಗಾಗಲೇ ಹಲವಾರು ”ಗ್ಯಾರೆಂಟಿ ಭರವಸೆಗಳನ್ನು” ಹೊರತಂದಿದೆ ಎಂದು ಹೇಳಿದರು.

ರಾಜ್ಯದಲ್ಲಿನ ನಿರುದ್ಯೋಗಿ ಪದವೀಧರರು ಮತ್ತು ನಿರುದ್ಯೋಗಿ ಡಿಪ್ಲೊಮಾ-ಹೋಲ್ಡರ್‌ಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ಬೆಂಬಲ ನೀಡಲು ಕಾಂಗ್ರೆಸ್ ಯುವನಿಧಿ ಎನ್ನುವ ಯೋಜನೆಯನ್ನು ತರುತ್ತಿದೆ ಎಂದು ಅವರು ಹೇಳಿದರು. ಇದರಿಂದಾಗಿ ಅವರು ಹುಡುಕುತ್ತಿರುವ ಸಂದರ್ಭದಲ್ಲಿ ಸ್ವಾಭಿಮಾನದಿಂದ ಬದುಕಬಹುದು. ಇನ್ನು ಮನೆಯ ಹೆಣ್ಣುಮಕ್ಕಳನ್ನು ಗೌರವಿಸಲು ಗೃಹಲಕ್ಷ್ಮೀ ಯೋಜನೆ ತರಲಾಗುತ್ತಿದೆ. ಇದರಿಂದ ವೇತನವಿಲ್ಲದೇ ಮನೆಯಲ್ಲಿ ದುಡಿಯುತ್ತಿರುವ ಗೃಹಿಣಿಯರು ಸ್ವಲ್ಪ ಪರಿಹಾರವನ್ನು ಪಡೆಯಬಹುದು ಎಂದು ಅವರು ಹೇಳಿದರು.

ಕೆಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ, ”ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಶಾಸಕರು ಮತ್ತು ಎಂಎಲ್‌ಸಿಗಳು ಸಹ ಇತರ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರಿದ್ದಾರೆ” ಎಂದು ತಿಳಿಸಿದರು.

”ಕರ್ನಾಟಕದ ಪರಿಸ್ಥಿತಿಯನ್ನು ಗಮನಿಸಿದರೆ, ಕಳೆದ ಕೆಲವು ತಿಂಗಳುಗಳಲ್ಲಿ ಐವರು ಶಾಸಕರು, ಇಬ್ಬರು ಎಂಎಲ್‌ಸಿಗಳು, 11 ಮಾಜಿ ಶಾಸಕರು, ನಾಲ್ವರು ಮಾಜಿ ಎಂಎಲ್‌ಸಿಗಳು ಮತ್ತು ಒಬ್ಬ ಮಾಜಿ ಸಂಸದರು ಕಾಂಗ್ರೆಸ್‌ಗೆ ಸೇರಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಇತರ ಪಕ್ಷದವರಿಗು ತಿಳಿದಿದೆ ಎಂದು ಅವರು ಹೇಳಿದರು.

ಆದರೆ, ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಸದಸ್ಯರ ಬಗ್ಗೆ ನನಗೆ ನಿರಾಸೆಯಾಗಿದೆ. ಅವರು ಕಾಂಗ್ರೆಸ್ ಬಿಡುವಾಗ ಅದೇ ಮೌಲ್ಯಗಳನ್ನು ಹೊಂದಿರುವ ಬೇರೆ ಯಾವ ಪಕ್ಷಕ್ಕಾದರೂ ಸೇರಬಹುದಿತ್ತು. ಆದರೆ ಕೋಮುವಾದಿ ಬಿಜೆಪಿ ಪಕ್ಷ ಸೇರಿದ್ದಾರೆ. ವಿರುದ್ಧವಾದ ಮೌಲ್ಯಗಳು ಮತ್ತು ತತ್ವಗಳನ್ನು ಹೊಂದಿರುವ ಪಕ್ಷಕ್ಕೆ ಅವರು ಹೇಗೆ ಹೋಗುತ್ತಾರೆ ಎಂದು ಅವರು ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...