Homeಕರ್ನಾಟಕಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ''100% ಬದ್ಧತೆ''ಯ ಸರ್ಕಾರ ಬೇಕು: ಶಶಿ ತರೂರ್

ಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ”100% ಬದ್ಧತೆ”ಯ ಸರ್ಕಾರ ಬೇಕು: ಶಶಿ ತರೂರ್

- Advertisement -
- Advertisement -

ಕರ್ನಾಟಕದ ಜನರು 40% ಕಮಿಷನ್‌ನಿಂದ ಬೇಸತ್ತಿದ್ದಾರೆ ಮತ್ತು ”ಶೇ 100 ರಷ್ಟು ಬದ್ಧತೆ”ಯನ್ನು ನೀಡುವ ಕಾಂಗ್ರೆಸ್ ಪಕ್ಷವನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಬಯಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರ ಮಟ್ಟದ ಆಡಳಿತದಲ್ಲಿನ ”ಗಂಭೀರ ಸಮಸ್ಯಗಳನ್ನು” ನಿಭಾಯಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ತಿರುವನಂತಪುರಂ ಸಂಸದ ತರೂರ್ಅವರು, ”ಈ ರಾಜ್ಯದ ಜನರು ಶೇಕಡಾ 40 ರಷ್ಟು ಕಮಿಷನ್‌ನಿಂದ ಬೇಸತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅವರಿಗೆ ಬೇಕಾಗಿರುವುದು 100 ಪ್ರತಿಶತ ಬದ್ಧತೆ ಮತ್ತು ಅದನ್ನೇ ನಾವು ನೀಡುತ್ತೇವೆ” ಎಂದು ತಿಳಿಸಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿರುವಾಗ ಮತ್ತೆ ರಾಜ್ಯ ಬಿಜೆಪಿ ಸರ್ಕಾರದ 40% ಕಮೀಷನ್ ಆರೋಪವನ್ನು ಪುನರುಚ್ಚಿಸಿರುವ ತರೂರ್, ”ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಗುತ್ತಿಗೆದಾರರು, ಅನುದಾನರಹಿತ ಖಾಸಗಿ ಶಾಲೆಗಳು ಮತ್ತು ಕೆಲವು ಧಾರ್ಮಿಕ ಸಂಸ್ಥೆಗಳಿಂದ ಪಡೆದ ಅನುದಾನದಲ್ಲಿ ಶೇಕಡಾ 40 ರಷ್ಟು ಕಮಿಷನ್ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ದುರಾಡಳಿ ನಡೆಯುತ್ತಿದ್ದು, ಮೂಲಸೌಕರ್ಯಗಳ ವಿಚಾರದಲ್ಲಿ ಬೆಂಗಳೂರು ನಗರ ಮುಜುಗರಕ್ಕಿಡಾಗುತ್ತಿದೆ ಎಂದು ತರೂರ್ ಹೇಳಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

”ನಮ್ಮ ಸಂದೇಶವು ತುಂಬಾ ಸರಳವಾಗಿದೆ. ದುರದೃಷ್ಟವಶಾತ್, ನಾಲ್ಕು ವರ್ಷಗಳಿಂದ ನಾವು ಅತ್ಯಂತ ಕೆಟ್ಟ ಆಡಳಿತವನ್ನು ನೋಡಿದ್ದೇವೆ. ಈ ಕೆಟ್ಟ ಆಡಳಿತದಿಂದ ಬೇಸತ್ತಿರುವ ಜನರು ಅನಿವಾರ್ಯವಾಗಿ ಬೇರೆ ಸರ್ಕಾರ ಬೇಕು ಎಂದು ಬಯಸುತ್ತಿದ್ದಾರೆ” ಎಂದು ತರೂರ್ ಹೇಳಿದರು.

ಈ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಾಗಿಲ್ಲ ಹಾಗಾಗಿ ಆ ಅಗತ್ಯಗಳನ್ನು ಪೂರೈಸಲು ಕಾಂಗ್ರೆಸ್ ಪಕ್ಷವು ಈಗಾಗಲೇ ಹಲವಾರು ”ಗ್ಯಾರೆಂಟಿ ಭರವಸೆಗಳನ್ನು” ಹೊರತಂದಿದೆ ಎಂದು ಹೇಳಿದರು.

ರಾಜ್ಯದಲ್ಲಿನ ನಿರುದ್ಯೋಗಿ ಪದವೀಧರರು ಮತ್ತು ನಿರುದ್ಯೋಗಿ ಡಿಪ್ಲೊಮಾ-ಹೋಲ್ಡರ್‌ಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ಬೆಂಬಲ ನೀಡಲು ಕಾಂಗ್ರೆಸ್ ಯುವನಿಧಿ ಎನ್ನುವ ಯೋಜನೆಯನ್ನು ತರುತ್ತಿದೆ ಎಂದು ಅವರು ಹೇಳಿದರು. ಇದರಿಂದಾಗಿ ಅವರು ಹುಡುಕುತ್ತಿರುವ ಸಂದರ್ಭದಲ್ಲಿ ಸ್ವಾಭಿಮಾನದಿಂದ ಬದುಕಬಹುದು. ಇನ್ನು ಮನೆಯ ಹೆಣ್ಣುಮಕ್ಕಳನ್ನು ಗೌರವಿಸಲು ಗೃಹಲಕ್ಷ್ಮೀ ಯೋಜನೆ ತರಲಾಗುತ್ತಿದೆ. ಇದರಿಂದ ವೇತನವಿಲ್ಲದೇ ಮನೆಯಲ್ಲಿ ದುಡಿಯುತ್ತಿರುವ ಗೃಹಿಣಿಯರು ಸ್ವಲ್ಪ ಪರಿಹಾರವನ್ನು ಪಡೆಯಬಹುದು ಎಂದು ಅವರು ಹೇಳಿದರು.

ಕೆಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ, ”ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಶಾಸಕರು ಮತ್ತು ಎಂಎಲ್‌ಸಿಗಳು ಸಹ ಇತರ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರಿದ್ದಾರೆ” ಎಂದು ತಿಳಿಸಿದರು.

”ಕರ್ನಾಟಕದ ಪರಿಸ್ಥಿತಿಯನ್ನು ಗಮನಿಸಿದರೆ, ಕಳೆದ ಕೆಲವು ತಿಂಗಳುಗಳಲ್ಲಿ ಐವರು ಶಾಸಕರು, ಇಬ್ಬರು ಎಂಎಲ್‌ಸಿಗಳು, 11 ಮಾಜಿ ಶಾಸಕರು, ನಾಲ್ವರು ಮಾಜಿ ಎಂಎಲ್‌ಸಿಗಳು ಮತ್ತು ಒಬ್ಬ ಮಾಜಿ ಸಂಸದರು ಕಾಂಗ್ರೆಸ್‌ಗೆ ಸೇರಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಇತರ ಪಕ್ಷದವರಿಗು ತಿಳಿದಿದೆ ಎಂದು ಅವರು ಹೇಳಿದರು.

ಆದರೆ, ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಸದಸ್ಯರ ಬಗ್ಗೆ ನನಗೆ ನಿರಾಸೆಯಾಗಿದೆ. ಅವರು ಕಾಂಗ್ರೆಸ್ ಬಿಡುವಾಗ ಅದೇ ಮೌಲ್ಯಗಳನ್ನು ಹೊಂದಿರುವ ಬೇರೆ ಯಾವ ಪಕ್ಷಕ್ಕಾದರೂ ಸೇರಬಹುದಿತ್ತು. ಆದರೆ ಕೋಮುವಾದಿ ಬಿಜೆಪಿ ಪಕ್ಷ ಸೇರಿದ್ದಾರೆ. ವಿರುದ್ಧವಾದ ಮೌಲ್ಯಗಳು ಮತ್ತು ತತ್ವಗಳನ್ನು ಹೊಂದಿರುವ ಪಕ್ಷಕ್ಕೆ ಅವರು ಹೇಗೆ ಹೋಗುತ್ತಾರೆ ಎಂದು ಅವರು ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...