Homeಮುಖಪುಟಜಮ್ಮು ಕಾಶ್ಮೀರದ ಜನರಿಗೆ ಬೇಕಾಗಿದ್ದು ಉದ್ಯೋಗ, ಸಿಕ್ಕಿದ್ದು ಬಿಜೆಪಿಯ ಬುಲ್ಡೋಜರ್: ರಾಹುಲ್ ಗಾಂಧಿ

ಜಮ್ಮು ಕಾಶ್ಮೀರದ ಜನರಿಗೆ ಬೇಕಾಗಿದ್ದು ಉದ್ಯೋಗ, ಸಿಕ್ಕಿದ್ದು ಬಿಜೆಪಿಯ ಬುಲ್ಡೋಜರ್: ರಾಹುಲ್ ಗಾಂಧಿ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಜನರಿಗೆ ಉದ್ಯೋಗ ನೀಡಲು ಭಾರತೀಯ ಜನತಾ ಪಕ್ಷ ವಿಫಲವಾಗಿದೆ ಮತ್ತು ಈ ಕೇಂದ್ರಾಡಳಿತ ಪ್ರದೇಶದ ನಿವಾಸಿಗಳನ್ನು ಹೊರಹಾಕಲು ಬುಲ್ಡೋಜರ್‌ಗಳನ್ನು ಕಳುಹಿಸಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಆಡಳಿತವು ಜನವರಿ 9 ರಂದು, ರಾಜ್ಯದಲ್ಲಿನ ಎಲ್ಲಾ ಅತಿಕ್ರಮಣಗಳನ್ನು ಜನವರಿ 31ರೊಳಗೆ ತೆಗೆದುಹಾಕುವುದಕ್ಕೆ ಕೇಂದ್ರಾಡಳಿತ ಪ್ರದೇಶದ ಉಪ ಆಯುಕ್ತರಿಗೆ ನಿರ್ದೇಶನ ನೀಡಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ 2.75 ಲಕ್ಷ ಎಕರೆ ಭೂಮಿಯನ್ನು (ಅಥವಾ ಸುಮಾರು 1,112.8 ಚದರ ಕಿಲೋಮೀಟರ್ ಭೂಮಿ) ಅತಿಕ್ರಮಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಈ ನೆಲಸಮ ಮಾಡುವ ಕಾರ್ಯಾಚರಣೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಕೈಗೊಂಡ ಅತಿ ದೊಡ್ಡ ಅತಿಕ್ರಮಣ ವಿರೋಧಿ ಕ್ರಮವಾಗಿದೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

”ಜಮ್ಮು ಮತ್ತು ಕಾಶ್ಮೀರದ ಜನರಿಗೆ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿ ಬೇಕಿತ್ತು, ಆದರೆ ಅವರಿಗೆ ಸಿಕ್ಕಿದ್ದೇನು? ಬಿಜೆಪಿಯ ಬುಲ್ಡೋಜರ್..” ಎಂದು ರಾಹುಲ್ ಗಾಂಧಿ ಭಾನುವಾರ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಹಲವು ದಶಕಗಳಿಂದ ಕಷ್ಟಪಟ್ಟು ಜನರು ನೀರಾವರಿ ಮಾಡಿಕೊಂಡಿದ್ದಾರೆ. ಆ ಭೂಮಿಯನ್ನುಇದೀಗ ಕಸಿದುಕೊಳ್ಳುತ್ತಿದ್ದಾರೆ. ಶಾಂತಿ ಮತ್ತು ಕಾಶ್ಮೀರವನ್ನು ಒಗ್ಗೂಡಿಸುವ ಮೂಲಕ ರಕ್ಷಿಸಬೇಕು, ಜನರನ್ನು ವಿಭಜಿಸುವ ಮತ್ತು ವಿಭಜನೆಯಿಂದ ಅಲ್ಲ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಜನವರಿ 31ರೊಳಗೆ ಸರ್ಕಾರಿ ಜಮೀನುಗಳಲ್ಲಿನ ಅತಿಕ್ರಮಣಗಳನ್ನು ತೆಗೆದುಹಾಕಲು ಜಮ್ಮು ಮತ್ತು ಕಾಶ್ಮೀರ ಆಡಳಿತದ ಸುತ್ತೋಲೆಗೆ ತಡೆ ನೀಡಲು ಜನವರಿ 20 ರಂದು ಸುಪ್ರೀಂ ಕೋರ್ಟ್ ನಿರಾಕರಿಸಿತು. ಇದೀಗ ಸ್ಥಳೀಯರು ತಮ್ಮ ಭೂಮಿಯನ್ನು ಕಳೆದುಕೊಳ್ಳುವ ಭಯದಲ್ಲಿದ್ದಾರೆ.

ಪ್ರಭಾವಿ ವ್ಯಕ್ತಿಗಳಿಂದ ಮಾತ್ರ ಭೂಮಿಯನ್ನು ಹಿಂಪಡೆಯುತ್ತಾರೆ ಎಂದು ಕಳೆದ ವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭರವಸೆ ನೀಡಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಅತಿಕ್ರಮಣ ವಿರೋಧಿ ಅಭಿಯಾನದಲ್ಲಿ ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿದೆ ಎಂದು ಕೆಲವರು ತಪ್ಪು ಮಾಹಿತಿ ಹರಡಲು ಯತ್ನಿಸಿದ್ದಾರೆ” ಎಂದು ಸಿನ್ಹಾ ಹೇಳಿದರು. “ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ಮತ್ತು ರಾಜ್ಯದ ಭೂಮಿಯನ್ನು ಅತಿಕ್ರಮಿಸಲು ಕಾನೂನನ್ನು ಉಲ್ಲಂಘಿಸಿದ ಪ್ರಭಾವಿ ಮತ್ತು ಶಕ್ತಿಯುತ ವ್ಯಕ್ತಿಗಳು ಮಾತ್ರ ದೇಶದ ಈ ಕಾನೂನನ್ನು ಎದುರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಕಾಶ್ಮೀರದ ಮಾಜಿ ಸಚಿವರಾದ ಪೀರ್ಜಾದಾ ಮೊಹಮ್ಮದ್ ಸಯೀದ್, ಮಕ್ಬೂಲ್ ದಾರ್, ಹಸೀಬ್ ದ್ರಾಬು, ತಾಜ್ ಮೊಹಿಯುದ್ದೀನ್ ಮತ್ತು ಅಲಿ ಮೊಹಮ್ಮದ್ ಸಾಗರ್ ಅವರ ಭೂಮಿಯನ್ನು ಅಧಿಕಾರಿಗಳು ಹಿಂಪಡೆದಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...