Homeಕರ್ನಾಟಕ84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ ... ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ

- Advertisement -
- Advertisement -

84 ವರ್ಷದ ನಂದಿಪಾಪಯ್ಯ, ಕಳೆದ 65 ವರ್ಷಗಳಿಂದ ಮೊಳಕಾಲ್ಮೂರು ತಾಲ್ಲೂಕು ತುಮಕೂರ್ಲಹಳ್ಳಿ ಗ್ರಾಮದ ಸರ್ವೆ‌ ನಂ. 78 ರಲ್ಲಿ 3 ಎಕರೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬಂದಿದ್ದರೂ ಭೂಮಿ ಅವರದ್ದಾಗಿಲ್ಲ. ಅರಣ್ಯ ಹಕ್ಕು ಕಾಯ್ದೆಯನ್ವಯ ಭೂಮಿ ತನ್ನ ಹೆಸರಿಗೆ ಮಾಡಿಕೊಡಬೇಕೆಂದು ಅರ್ಜಿ‌ಸಲ್ಲಿಸಿದ್ದಾರೆ.
ಈ ವಯೋವೃದ್ದ ಪಾಪಯ್ಯ ಬದುಕಿಗಾಗಿ ಭೂಮಿಯನ್ನು ಪಡೆಯಬೇಕೆಂಬ ಛಲದಿಂದ ಹಲವಾರು ವರ್ಷಗಳಿಂದ ನಡೆಸುತ್ತಿರುವ ಪ್ರತಿಭಟನೆ, ಧರಣಿಯಿಂದ ಹಿಂದೆ ಸರಿದಿಲ್ಲ. “ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ … ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ” ಎಂಬ ಇವರ ಮಾತಿಗೆ ಯಾವ ಅಧಿಕಾರಿಯೂ ಉತ್ತರ ನೀಡಲು ತಬ್ಬಿಬ್ಬಾಗುತ್ತಾರೆ.

Posted by Kumar Samathala on Tuesday, June 25, 2019

ಆ ಊರಿನಲ್ಲಿ ಅರಣ್ಯ ಇಲಾಖೆಯವರು 38 ಕುಟುಂಬಗಳನ್ನು ಹೊರಹಾಕಿ ಜನರನ್ನು ಬೀದಿಗೆ ತಳ್ಳಿದ್ದಾರೆ. ಊರುಗೋಲ ಆಸರೆಯಲ್ಲೇ ಕಛೇರಿ ಕಛೇರಿಗಳನ್ನು ಅಲೆಯುತ್ತಿದ್ದರೂ ಪರಿಹಾರ ಸಿಕ್ಕಿಲ್ಲ. ಇವರು ಪ್ರತಿಭಟನೆಯು ಆರಂಭದಿಂದಲೂ ಪ್ರತಿದಿನ ತಪ್ಪದೇ ಭಾಗವಹಿಸುವ, ರಾತ್ರಿಯು ಪ್ರತಿಭಟನೆಯ ಜಾಗ ಬಿಟ್ಟು ಕದಲದ ವ್ಯಕ್ತಿ ನಂದಿಪಾಪಯ್ಯ.

ಅದೇ ರೀತಿ ಹೊಳಲ್ಕೆರೆ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿ ಒಂದೇ ಸಮುದಾಯದ 70 ಕುಟುಂಬಗಳು ಭೂಮಿಗಾಗಿ ಹೋರಾಡಿ ಕೇಸು ಹಾಕಿಸಿಕೊಂಡು ಜೈಲಿಗೂ ಹೋಗಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು, ಘಟನೆಗಳು ಕಳೆದ ಐದಾರು ದಶಕಗಳಿಂದಲೂ ನಡೆಯುತ್ತಲೇ ಇವೆ. ಕಂದಾಯ, ಅರಣ್ಯ ಭೂಮಿಗಳಲ್ಲಿ ಸಾಗುವಳಿ‌ ಮಾಡುತ್ತಾ ಹಕ್ಕುಪತ್ರಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಕುಟುಂಬಗಳು ಕಾಯುತ್ತಿವೆ ಆದರೆ ಅವರಿಗೆ ಸಿಕ್ಕಿರುವುದು ತೀವ್ರ ನಿರಾಶೆ ಮಾತ್ರ ಎನ್ನುತ್ತಾರೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವ ವಹಿಸಿರುವ ಕುಮಾರ್ ಸಮತಳ.

ಚಿತ್ರದುರ್ಗದ ಜಿಲ್ಲಾಡಳಿತ ಜನರ ಸಮಸ್ಯೆಗಳನ್ನು ಬಗೆ ಹರಿಸದೆ, ನಿಷ್ಕಾಳಜಿ, ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಕಳೆದ 10 ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಹಗಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ, ನಿಮ್ಮ ಸಮಸ್ಯೆ ಏನೆಂದು ಕೇಳುವ ಕನಿಷ್ಠ ವ್ಯವಧಾನವೂ ಅವರಿಗಿಲ್ಲ. ಜನಪ್ರತಿನಿಧಿಗಳಿಗೂ ಇಲ್ಲ. ಜನರು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಕಣ್ಣಿಗೆ ಕಾಣುತ್ತಾರೆ ಬಿಟ್ಟರೆ ಬಾಕಿ‌ ಸಮಯದಲ್ಲಿ ಕಾಣುವುದಿಲ್ಲ. ಅಂದರೆ ಅಧಿಕಾರಿಗಳು, ಕಾನೂನು ಜಾರಿ ಮಾಡಬೇಕಿರುವವರು, ಇದೇ ಜನರು ಬೆಳೆದ ಅನ್ನ ತಿನ್ನುತ್ತಿಲ್ಲವೇ? ಎಂದು ಕುಮಾರ್ ಸಮತಳ ಪ್ರಶ್ನಿಸಿದ್ದಾರೆ.

ಭೂಮಿ ವಸತಿಗಾಗಿ ಬಡವರು ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲೆಯ ಜನತೆ, ನಾಡಿನ ಪ್ರಜ್ಞಾವಂತರು, ಹೋರಾಟಗಾರರು ಬಡ ಜನರ ಕೂಗಿಗೆ ದ್ವನಿಗೂಡಿಸಬೇಕೆಂದು ಅವರು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಈ ಮೂಲಕ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...