Homeಕರ್ನಾಟಕ84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ ... ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ

- Advertisement -
- Advertisement -

84 ವರ್ಷದ ನಂದಿಪಾಪಯ್ಯ, ಕಳೆದ 65 ವರ್ಷಗಳಿಂದ ಮೊಳಕಾಲ್ಮೂರು ತಾಲ್ಲೂಕು ತುಮಕೂರ್ಲಹಳ್ಳಿ ಗ್ರಾಮದ ಸರ್ವೆ‌ ನಂ. 78 ರಲ್ಲಿ 3 ಎಕರೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬಂದಿದ್ದರೂ ಭೂಮಿ ಅವರದ್ದಾಗಿಲ್ಲ. ಅರಣ್ಯ ಹಕ್ಕು ಕಾಯ್ದೆಯನ್ವಯ ಭೂಮಿ ತನ್ನ ಹೆಸರಿಗೆ ಮಾಡಿಕೊಡಬೇಕೆಂದು ಅರ್ಜಿ‌ಸಲ್ಲಿಸಿದ್ದಾರೆ.
ಈ ವಯೋವೃದ್ದ ಪಾಪಯ್ಯ ಬದುಕಿಗಾಗಿ ಭೂಮಿಯನ್ನು ಪಡೆಯಬೇಕೆಂಬ ಛಲದಿಂದ ಹಲವಾರು ವರ್ಷಗಳಿಂದ ನಡೆಸುತ್ತಿರುವ ಪ್ರತಿಭಟನೆ, ಧರಣಿಯಿಂದ ಹಿಂದೆ ಸರಿದಿಲ್ಲ. “ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ … ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ” ಎಂಬ ಇವರ ಮಾತಿಗೆ ಯಾವ ಅಧಿಕಾರಿಯೂ ಉತ್ತರ ನೀಡಲು ತಬ್ಬಿಬ್ಬಾಗುತ್ತಾರೆ.

Posted by Kumar Samathala on Tuesday, June 25, 2019

ಆ ಊರಿನಲ್ಲಿ ಅರಣ್ಯ ಇಲಾಖೆಯವರು 38 ಕುಟುಂಬಗಳನ್ನು ಹೊರಹಾಕಿ ಜನರನ್ನು ಬೀದಿಗೆ ತಳ್ಳಿದ್ದಾರೆ. ಊರುಗೋಲ ಆಸರೆಯಲ್ಲೇ ಕಛೇರಿ ಕಛೇರಿಗಳನ್ನು ಅಲೆಯುತ್ತಿದ್ದರೂ ಪರಿಹಾರ ಸಿಕ್ಕಿಲ್ಲ. ಇವರು ಪ್ರತಿಭಟನೆಯು ಆರಂಭದಿಂದಲೂ ಪ್ರತಿದಿನ ತಪ್ಪದೇ ಭಾಗವಹಿಸುವ, ರಾತ್ರಿಯು ಪ್ರತಿಭಟನೆಯ ಜಾಗ ಬಿಟ್ಟು ಕದಲದ ವ್ಯಕ್ತಿ ನಂದಿಪಾಪಯ್ಯ.

ಅದೇ ರೀತಿ ಹೊಳಲ್ಕೆರೆ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿ ಒಂದೇ ಸಮುದಾಯದ 70 ಕುಟುಂಬಗಳು ಭೂಮಿಗಾಗಿ ಹೋರಾಡಿ ಕೇಸು ಹಾಕಿಸಿಕೊಂಡು ಜೈಲಿಗೂ ಹೋಗಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು, ಘಟನೆಗಳು ಕಳೆದ ಐದಾರು ದಶಕಗಳಿಂದಲೂ ನಡೆಯುತ್ತಲೇ ಇವೆ. ಕಂದಾಯ, ಅರಣ್ಯ ಭೂಮಿಗಳಲ್ಲಿ ಸಾಗುವಳಿ‌ ಮಾಡುತ್ತಾ ಹಕ್ಕುಪತ್ರಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಕುಟುಂಬಗಳು ಕಾಯುತ್ತಿವೆ ಆದರೆ ಅವರಿಗೆ ಸಿಕ್ಕಿರುವುದು ತೀವ್ರ ನಿರಾಶೆ ಮಾತ್ರ ಎನ್ನುತ್ತಾರೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವ ವಹಿಸಿರುವ ಕುಮಾರ್ ಸಮತಳ.

ಚಿತ್ರದುರ್ಗದ ಜಿಲ್ಲಾಡಳಿತ ಜನರ ಸಮಸ್ಯೆಗಳನ್ನು ಬಗೆ ಹರಿಸದೆ, ನಿಷ್ಕಾಳಜಿ, ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಕಳೆದ 10 ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಹಗಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ, ನಿಮ್ಮ ಸಮಸ್ಯೆ ಏನೆಂದು ಕೇಳುವ ಕನಿಷ್ಠ ವ್ಯವಧಾನವೂ ಅವರಿಗಿಲ್ಲ. ಜನಪ್ರತಿನಿಧಿಗಳಿಗೂ ಇಲ್ಲ. ಜನರು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಕಣ್ಣಿಗೆ ಕಾಣುತ್ತಾರೆ ಬಿಟ್ಟರೆ ಬಾಕಿ‌ ಸಮಯದಲ್ಲಿ ಕಾಣುವುದಿಲ್ಲ. ಅಂದರೆ ಅಧಿಕಾರಿಗಳು, ಕಾನೂನು ಜಾರಿ ಮಾಡಬೇಕಿರುವವರು, ಇದೇ ಜನರು ಬೆಳೆದ ಅನ್ನ ತಿನ್ನುತ್ತಿಲ್ಲವೇ? ಎಂದು ಕುಮಾರ್ ಸಮತಳ ಪ್ರಶ್ನಿಸಿದ್ದಾರೆ.

ಭೂಮಿ ವಸತಿಗಾಗಿ ಬಡವರು ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲೆಯ ಜನತೆ, ನಾಡಿನ ಪ್ರಜ್ಞಾವಂತರು, ಹೋರಾಟಗಾರರು ಬಡ ಜನರ ಕೂಗಿಗೆ ದ್ವನಿಗೂಡಿಸಬೇಕೆಂದು ಅವರು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಈ ಮೂಲಕ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...