Homeಕರ್ನಾಟಕ84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ ... ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ

- Advertisement -
- Advertisement -

84 ವರ್ಷದ ನಂದಿಪಾಪಯ್ಯ, ಕಳೆದ 65 ವರ್ಷಗಳಿಂದ ಮೊಳಕಾಲ್ಮೂರು ತಾಲ್ಲೂಕು ತುಮಕೂರ್ಲಹಳ್ಳಿ ಗ್ರಾಮದ ಸರ್ವೆ‌ ನಂ. 78 ರಲ್ಲಿ 3 ಎಕರೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬಂದಿದ್ದರೂ ಭೂಮಿ ಅವರದ್ದಾಗಿಲ್ಲ. ಅರಣ್ಯ ಹಕ್ಕು ಕಾಯ್ದೆಯನ್ವಯ ಭೂಮಿ ತನ್ನ ಹೆಸರಿಗೆ ಮಾಡಿಕೊಡಬೇಕೆಂದು ಅರ್ಜಿ‌ಸಲ್ಲಿಸಿದ್ದಾರೆ.
ಈ ವಯೋವೃದ್ದ ಪಾಪಯ್ಯ ಬದುಕಿಗಾಗಿ ಭೂಮಿಯನ್ನು ಪಡೆಯಬೇಕೆಂಬ ಛಲದಿಂದ ಹಲವಾರು ವರ್ಷಗಳಿಂದ ನಡೆಸುತ್ತಿರುವ ಪ್ರತಿಭಟನೆ, ಧರಣಿಯಿಂದ ಹಿಂದೆ ಸರಿದಿಲ್ಲ. “ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ … ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ” ಎಂಬ ಇವರ ಮಾತಿಗೆ ಯಾವ ಅಧಿಕಾರಿಯೂ ಉತ್ತರ ನೀಡಲು ತಬ್ಬಿಬ್ಬಾಗುತ್ತಾರೆ.

Posted by Kumar Samathala on Tuesday, June 25, 2019

ಆ ಊರಿನಲ್ಲಿ ಅರಣ್ಯ ಇಲಾಖೆಯವರು 38 ಕುಟುಂಬಗಳನ್ನು ಹೊರಹಾಕಿ ಜನರನ್ನು ಬೀದಿಗೆ ತಳ್ಳಿದ್ದಾರೆ. ಊರುಗೋಲ ಆಸರೆಯಲ್ಲೇ ಕಛೇರಿ ಕಛೇರಿಗಳನ್ನು ಅಲೆಯುತ್ತಿದ್ದರೂ ಪರಿಹಾರ ಸಿಕ್ಕಿಲ್ಲ. ಇವರು ಪ್ರತಿಭಟನೆಯು ಆರಂಭದಿಂದಲೂ ಪ್ರತಿದಿನ ತಪ್ಪದೇ ಭಾಗವಹಿಸುವ, ರಾತ್ರಿಯು ಪ್ರತಿಭಟನೆಯ ಜಾಗ ಬಿಟ್ಟು ಕದಲದ ವ್ಯಕ್ತಿ ನಂದಿಪಾಪಯ್ಯ.

ಅದೇ ರೀತಿ ಹೊಳಲ್ಕೆರೆ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿ ಒಂದೇ ಸಮುದಾಯದ 70 ಕುಟುಂಬಗಳು ಭೂಮಿಗಾಗಿ ಹೋರಾಡಿ ಕೇಸು ಹಾಕಿಸಿಕೊಂಡು ಜೈಲಿಗೂ ಹೋಗಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು, ಘಟನೆಗಳು ಕಳೆದ ಐದಾರು ದಶಕಗಳಿಂದಲೂ ನಡೆಯುತ್ತಲೇ ಇವೆ. ಕಂದಾಯ, ಅರಣ್ಯ ಭೂಮಿಗಳಲ್ಲಿ ಸಾಗುವಳಿ‌ ಮಾಡುತ್ತಾ ಹಕ್ಕುಪತ್ರಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಕುಟುಂಬಗಳು ಕಾಯುತ್ತಿವೆ ಆದರೆ ಅವರಿಗೆ ಸಿಕ್ಕಿರುವುದು ತೀವ್ರ ನಿರಾಶೆ ಮಾತ್ರ ಎನ್ನುತ್ತಾರೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವ ವಹಿಸಿರುವ ಕುಮಾರ್ ಸಮತಳ.

ಚಿತ್ರದುರ್ಗದ ಜಿಲ್ಲಾಡಳಿತ ಜನರ ಸಮಸ್ಯೆಗಳನ್ನು ಬಗೆ ಹರಿಸದೆ, ನಿಷ್ಕಾಳಜಿ, ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಕಳೆದ 10 ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಹಗಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ, ನಿಮ್ಮ ಸಮಸ್ಯೆ ಏನೆಂದು ಕೇಳುವ ಕನಿಷ್ಠ ವ್ಯವಧಾನವೂ ಅವರಿಗಿಲ್ಲ. ಜನಪ್ರತಿನಿಧಿಗಳಿಗೂ ಇಲ್ಲ. ಜನರು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಕಣ್ಣಿಗೆ ಕಾಣುತ್ತಾರೆ ಬಿಟ್ಟರೆ ಬಾಕಿ‌ ಸಮಯದಲ್ಲಿ ಕಾಣುವುದಿಲ್ಲ. ಅಂದರೆ ಅಧಿಕಾರಿಗಳು, ಕಾನೂನು ಜಾರಿ ಮಾಡಬೇಕಿರುವವರು, ಇದೇ ಜನರು ಬೆಳೆದ ಅನ್ನ ತಿನ್ನುತ್ತಿಲ್ಲವೇ? ಎಂದು ಕುಮಾರ್ ಸಮತಳ ಪ್ರಶ್ನಿಸಿದ್ದಾರೆ.

ಭೂಮಿ ವಸತಿಗಾಗಿ ಬಡವರು ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲೆಯ ಜನತೆ, ನಾಡಿನ ಪ್ರಜ್ಞಾವಂತರು, ಹೋರಾಟಗಾರರು ಬಡ ಜನರ ಕೂಗಿಗೆ ದ್ವನಿಗೂಡಿಸಬೇಕೆಂದು ಅವರು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಈ ಮೂಲಕ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...