Homeಕರ್ನಾಟಕ84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

84 ವರ್ಷದ ನಂದಿಪಾಪಯ್ಯರಿಗೆ ಕಳೆದ 65 ವರ್ಷಗಳಿಂದ ಸಾಗುವಳಿ ಮಾಡಿದರೂ ಸಿಗದ ಭೂಮಿ! ವಿಡಿಯೋ ನೋಡಿ

ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ ... ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ

- Advertisement -
- Advertisement -

84 ವರ್ಷದ ನಂದಿಪಾಪಯ್ಯ, ಕಳೆದ 65 ವರ್ಷಗಳಿಂದ ಮೊಳಕಾಲ್ಮೂರು ತಾಲ್ಲೂಕು ತುಮಕೂರ್ಲಹಳ್ಳಿ ಗ್ರಾಮದ ಸರ್ವೆ‌ ನಂ. 78 ರಲ್ಲಿ 3 ಎಕರೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬಂದಿದ್ದರೂ ಭೂಮಿ ಅವರದ್ದಾಗಿಲ್ಲ. ಅರಣ್ಯ ಹಕ್ಕು ಕಾಯ್ದೆಯನ್ವಯ ಭೂಮಿ ತನ್ನ ಹೆಸರಿಗೆ ಮಾಡಿಕೊಡಬೇಕೆಂದು ಅರ್ಜಿ‌ಸಲ್ಲಿಸಿದ್ದಾರೆ.
ಈ ವಯೋವೃದ್ದ ಪಾಪಯ್ಯ ಬದುಕಿಗಾಗಿ ಭೂಮಿಯನ್ನು ಪಡೆಯಬೇಕೆಂಬ ಛಲದಿಂದ ಹಲವಾರು ವರ್ಷಗಳಿಂದ ನಡೆಸುತ್ತಿರುವ ಪ್ರತಿಭಟನೆ, ಧರಣಿಯಿಂದ ಹಿಂದೆ ಸರಿದಿಲ್ಲ. “ನಾನು ಬಡ್ವ ಎಲ್ಡ್ ಎಕರೆ ಭೂಮಿ ಇರ್ಬೇಕೊ ಬ್ಯಾಡ್ವೋ … ನಾನು ಕೇಳುವುದರಲ್ಲಿ ನ್ಯಾಯ ಐತೋ ಇಲ್ವೋ” ಎಂಬ ಇವರ ಮಾತಿಗೆ ಯಾವ ಅಧಿಕಾರಿಯೂ ಉತ್ತರ ನೀಡಲು ತಬ್ಬಿಬ್ಬಾಗುತ್ತಾರೆ.

Posted by Kumar Samathala on Tuesday, June 25, 2019

ಆ ಊರಿನಲ್ಲಿ ಅರಣ್ಯ ಇಲಾಖೆಯವರು 38 ಕುಟುಂಬಗಳನ್ನು ಹೊರಹಾಕಿ ಜನರನ್ನು ಬೀದಿಗೆ ತಳ್ಳಿದ್ದಾರೆ. ಊರುಗೋಲ ಆಸರೆಯಲ್ಲೇ ಕಛೇರಿ ಕಛೇರಿಗಳನ್ನು ಅಲೆಯುತ್ತಿದ್ದರೂ ಪರಿಹಾರ ಸಿಕ್ಕಿಲ್ಲ. ಇವರು ಪ್ರತಿಭಟನೆಯು ಆರಂಭದಿಂದಲೂ ಪ್ರತಿದಿನ ತಪ್ಪದೇ ಭಾಗವಹಿಸುವ, ರಾತ್ರಿಯು ಪ್ರತಿಭಟನೆಯ ಜಾಗ ಬಿಟ್ಟು ಕದಲದ ವ್ಯಕ್ತಿ ನಂದಿಪಾಪಯ್ಯ.

ಅದೇ ರೀತಿ ಹೊಳಲ್ಕೆರೆ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿ ಒಂದೇ ಸಮುದಾಯದ 70 ಕುಟುಂಬಗಳು ಭೂಮಿಗಾಗಿ ಹೋರಾಡಿ ಕೇಸು ಹಾಕಿಸಿಕೊಂಡು ಜೈಲಿಗೂ ಹೋಗಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು, ಘಟನೆಗಳು ಕಳೆದ ಐದಾರು ದಶಕಗಳಿಂದಲೂ ನಡೆಯುತ್ತಲೇ ಇವೆ. ಕಂದಾಯ, ಅರಣ್ಯ ಭೂಮಿಗಳಲ್ಲಿ ಸಾಗುವಳಿ‌ ಮಾಡುತ್ತಾ ಹಕ್ಕುಪತ್ರಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಕುಟುಂಬಗಳು ಕಾಯುತ್ತಿವೆ ಆದರೆ ಅವರಿಗೆ ಸಿಕ್ಕಿರುವುದು ತೀವ್ರ ನಿರಾಶೆ ಮಾತ್ರ ಎನ್ನುತ್ತಾರೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವ ವಹಿಸಿರುವ ಕುಮಾರ್ ಸಮತಳ.

ಚಿತ್ರದುರ್ಗದ ಜಿಲ್ಲಾಡಳಿತ ಜನರ ಸಮಸ್ಯೆಗಳನ್ನು ಬಗೆ ಹರಿಸದೆ, ನಿಷ್ಕಾಳಜಿ, ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಕಳೆದ 10 ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಹಗಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ, ನಿಮ್ಮ ಸಮಸ್ಯೆ ಏನೆಂದು ಕೇಳುವ ಕನಿಷ್ಠ ವ್ಯವಧಾನವೂ ಅವರಿಗಿಲ್ಲ. ಜನಪ್ರತಿನಿಧಿಗಳಿಗೂ ಇಲ್ಲ. ಜನರು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಕಣ್ಣಿಗೆ ಕಾಣುತ್ತಾರೆ ಬಿಟ್ಟರೆ ಬಾಕಿ‌ ಸಮಯದಲ್ಲಿ ಕಾಣುವುದಿಲ್ಲ. ಅಂದರೆ ಅಧಿಕಾರಿಗಳು, ಕಾನೂನು ಜಾರಿ ಮಾಡಬೇಕಿರುವವರು, ಇದೇ ಜನರು ಬೆಳೆದ ಅನ್ನ ತಿನ್ನುತ್ತಿಲ್ಲವೇ? ಎಂದು ಕುಮಾರ್ ಸಮತಳ ಪ್ರಶ್ನಿಸಿದ್ದಾರೆ.

ಭೂಮಿ ವಸತಿಗಾಗಿ ಬಡವರು ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲೆಯ ಜನತೆ, ನಾಡಿನ ಪ್ರಜ್ಞಾವಂತರು, ಹೋರಾಟಗಾರರು ಬಡ ಜನರ ಕೂಗಿಗೆ ದ್ವನಿಗೂಡಿಸಬೇಕೆಂದು ಅವರು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಈ ಮೂಲಕ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...