Homeಮುಖಪುಟಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

ಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಬಿಬಿಸಿ ನ್ಯೂಸ್ ಚಾನೆಲ್‌ ಅನ್ನು ಹೊಗಳಿದ್ದ ಹಳೆಯ ವಿಡಿಯೊ ವೈರಲ್ ಆಗುತ್ತಿದೆ. ಜನರು ದೂರದರ್ಶನವನ್ನು ನಂಬದಿದ್ದರೂ ಬಿಬಿಸಿಯನ್ನು ನಂಬುತ್ತಾರೆಂದು ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿರುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

‘ಆಲ್ಟ್‌ನ್ಯೂಸ್‌’ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ರಿಟ್ವೀಟ್ ಮಾಡಿದ್ದಾರೆ. ಗುಜರಾತ್‌ ಗಲಭೆ ಕುರಿತು ಬಿಬಿಸಿ ಮಾಡಿರುವ ಸಾಕ್ಷ್ಯಾಚಿತ್ರವನ್ನು ಭಾರತದಲ್ಲಿ ಸರ್ಕಾರ ನಿರ್ಬಂಧಿಸಿರುವ ಬೆನ್ನಲ್ಲೇ, ‘ಬಿಬಿಸಿಯನ್ನು ಮೋದಿಯವರು ಹೊಗಳಿದ್ದ ವಿಡಿಯೊ’ ಮುನ್ನೆಲೆಗೆ ಬಂದಿದೆ. 2013ರಲ್ಲಿ ಮೋದಿಯವರು ಬಿಬಿಸಿಯನ್ನು ಹೊಗಳಿ ಮಾತನಾಡಿದ್ದರು. ಮಾಧ್ಯಮವೊಂದರ ವಿಶ್ವಾಸಾರ್ಹತೆಗೆ ದೇಶದ ನಾಯಕನೊಬ್ಬ ಸಲ್ಲಿಸಿದ ಮಹೋನ್ನತ ಗೌರವ ಇದಾಗಿದೆ ಎಂದೇ ಬಣ್ಣಿಸಲಾಗುತ್ತಿದೆ.

ವಿಡಿಯೊದಲ್ಲಿ ಏನಿದೆ?

“ಸಾಮಾನ್ಯ ಜನರು ಏನು ಮಾತನಾಡುತ್ತಾರೆ? ನಾನು ಇದನ್ನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ. ನಮ್ಮ ದೇಶದ ಆಲ್ ಇಂಡಿಯಾ ರೇಡಿಯೋವನ್ನು ಅವರು ನಂಬುವುದಿಲ್ಲ, ದೂರದರ್ಶನವನ್ನು ಅವರು ನಂಬುವುದಿಲ್ಲ, ಅವರು ಪತ್ರಿಕೆಯನ್ನು ನಂಬುವುದಿಲ್ಲ. ನಾನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ” ಎನ್ನುವ ಮೋದಿಯವರು “ಈ ರೀತಿಯ ವಿಶ್ವಾಸಾರ್ಹತೆ ಇರಬೇಕು” ಎಂಬ ಅಭಿಪ್ರಾಯ ತಾಳುತ್ತಾರೆ.

ವಿವಾದದಲ್ಲಿ ಸಾಕ್ಷ್ಯಾಚಿತ್ರ

ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯೂ ಜೆಎನ್‌ಯು ವಿದ್ಯಾರ್ಥಿಗಳು ಪ್ರಧಾನಿ ಮೋದಿ ಕುರಿತು ಬಿಬಿಸಿ ತಯಾರಿಸಿರುವ ‘ಇಂಡಿಯಾ – ದ ಮೋದಿ ಕ್ವಸ್ಚನ್’ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ಪ್ರದರ್ಶನ ಮಾಡಿದ್ದಾರೆ. ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನದಿಂದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಉಂಟಾಗಬಹುದು, ಆದ್ದರಿಂದ ಪ್ರದರ್ಶನವನ್ನು ರದ್ದುಗೊಳಿಸಬೇಕು ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅವರು ಸೂಚನೆ ನೀಡಿದ್ದರು.

ವಿದ್ಯಾರ್ಥಿ ಸಂಘವು ರಾತ್ರಿ ಒಂಬತ್ತು ಗಂಟೆಗೆ ಸಾಕ್ಷ್ಯಚಿತ್ರದ ಪ್ರದರ್ಶನ ಎಂದು ಹೇಳಿಕೊಂಡಿತ್ತು.‌ ಅದಕ್ಕಾಗಿ ವಿದ್ಯಾರ್ಥಿಗಳು ತಯಾರಿ ಕೂಡಾ ನಡೆಸಿದ್ದರು. ಆದರೆ, ಸುಮಾರು 8:30 ಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಶ್ವವಿದ್ಯಾಲಯದ ವಿದ್ಯುತ್ ಕಡಿತ ಮಾಡಿತ್ತು.‌ ಹೀಗಾಗಿ ನೆರೆದಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಲ್ಯಾಪ್‌ಟಾಪ್ ಮೂಲಕ ಸ್ಥಳದಲ್ಲೇ ತಮ್ಮ ಸ್ನೇಹಿತರ ಗುಂಪಿನೊಂದಿಗೆ ಬಿಬಿಸಿ ಸಾಕ್ಷ್ಯಚಿತ್ರವನ್ನು ನೋಡಿದ್ದಾರೆ.

ಸಾಕ್ಷ್ಯಚಿತ್ರ ಪ್ರದರ್ಶನಕ್ಕೂ ಮೊದಲು ಮಾತನಾಡಿದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌, “ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರ ಭಾರತದ ಯಾವ ಪ್ರದೇಶದಲ್ಲೂ ನಿಷೇಧವಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ನೋಡಬಾರದು ಎಂದು ತಡೆಹಿಡಿದಿದ್ದು ಮಾತ್ರವಾಗಿದೆ. ಇದರರ್ಥ ಅದನ್ನು ನಿಷೇಧ ಎಂದಲ್ಲ. ಹೀಗಿರುವಾಗ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲು ಅನುಮತಿ ಯಾಕೆ ಪಡೆಯಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...