Homeಮುಖಪುಟಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

ಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಬಿಬಿಸಿ ನ್ಯೂಸ್ ಚಾನೆಲ್‌ ಅನ್ನು ಹೊಗಳಿದ್ದ ಹಳೆಯ ವಿಡಿಯೊ ವೈರಲ್ ಆಗುತ್ತಿದೆ. ಜನರು ದೂರದರ್ಶನವನ್ನು ನಂಬದಿದ್ದರೂ ಬಿಬಿಸಿಯನ್ನು ನಂಬುತ್ತಾರೆಂದು ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿರುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

‘ಆಲ್ಟ್‌ನ್ಯೂಸ್‌’ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ರಿಟ್ವೀಟ್ ಮಾಡಿದ್ದಾರೆ. ಗುಜರಾತ್‌ ಗಲಭೆ ಕುರಿತು ಬಿಬಿಸಿ ಮಾಡಿರುವ ಸಾಕ್ಷ್ಯಾಚಿತ್ರವನ್ನು ಭಾರತದಲ್ಲಿ ಸರ್ಕಾರ ನಿರ್ಬಂಧಿಸಿರುವ ಬೆನ್ನಲ್ಲೇ, ‘ಬಿಬಿಸಿಯನ್ನು ಮೋದಿಯವರು ಹೊಗಳಿದ್ದ ವಿಡಿಯೊ’ ಮುನ್ನೆಲೆಗೆ ಬಂದಿದೆ. 2013ರಲ್ಲಿ ಮೋದಿಯವರು ಬಿಬಿಸಿಯನ್ನು ಹೊಗಳಿ ಮಾತನಾಡಿದ್ದರು. ಮಾಧ್ಯಮವೊಂದರ ವಿಶ್ವಾಸಾರ್ಹತೆಗೆ ದೇಶದ ನಾಯಕನೊಬ್ಬ ಸಲ್ಲಿಸಿದ ಮಹೋನ್ನತ ಗೌರವ ಇದಾಗಿದೆ ಎಂದೇ ಬಣ್ಣಿಸಲಾಗುತ್ತಿದೆ.

ವಿಡಿಯೊದಲ್ಲಿ ಏನಿದೆ?

“ಸಾಮಾನ್ಯ ಜನರು ಏನು ಮಾತನಾಡುತ್ತಾರೆ? ನಾನು ಇದನ್ನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ. ನಮ್ಮ ದೇಶದ ಆಲ್ ಇಂಡಿಯಾ ರೇಡಿಯೋವನ್ನು ಅವರು ನಂಬುವುದಿಲ್ಲ, ದೂರದರ್ಶನವನ್ನು ಅವರು ನಂಬುವುದಿಲ್ಲ, ಅವರು ಪತ್ರಿಕೆಯನ್ನು ನಂಬುವುದಿಲ್ಲ. ನಾನು ಬಿಬಿಸಿಯಲ್ಲಿ ಕೇಳಿದ್ದೇನೆ ಎನ್ನುತ್ತಾರೆ” ಎನ್ನುವ ಮೋದಿಯವರು “ಈ ರೀತಿಯ ವಿಶ್ವಾಸಾರ್ಹತೆ ಇರಬೇಕು” ಎಂಬ ಅಭಿಪ್ರಾಯ ತಾಳುತ್ತಾರೆ.

ವಿವಾದದಲ್ಲಿ ಸಾಕ್ಷ್ಯಾಚಿತ್ರ

ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯೂ ಜೆಎನ್‌ಯು ವಿದ್ಯಾರ್ಥಿಗಳು ಪ್ರಧಾನಿ ಮೋದಿ ಕುರಿತು ಬಿಬಿಸಿ ತಯಾರಿಸಿರುವ ‘ಇಂಡಿಯಾ – ದ ಮೋದಿ ಕ್ವಸ್ಚನ್’ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ಪ್ರದರ್ಶನ ಮಾಡಿದ್ದಾರೆ. ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನದಿಂದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಉಂಟಾಗಬಹುದು, ಆದ್ದರಿಂದ ಪ್ರದರ್ಶನವನ್ನು ರದ್ದುಗೊಳಿಸಬೇಕು ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅವರು ಸೂಚನೆ ನೀಡಿದ್ದರು.

ವಿದ್ಯಾರ್ಥಿ ಸಂಘವು ರಾತ್ರಿ ಒಂಬತ್ತು ಗಂಟೆಗೆ ಸಾಕ್ಷ್ಯಚಿತ್ರದ ಪ್ರದರ್ಶನ ಎಂದು ಹೇಳಿಕೊಂಡಿತ್ತು.‌ ಅದಕ್ಕಾಗಿ ವಿದ್ಯಾರ್ಥಿಗಳು ತಯಾರಿ ಕೂಡಾ ನಡೆಸಿದ್ದರು. ಆದರೆ, ಸುಮಾರು 8:30 ಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಶ್ವವಿದ್ಯಾಲಯದ ವಿದ್ಯುತ್ ಕಡಿತ ಮಾಡಿತ್ತು.‌ ಹೀಗಾಗಿ ನೆರೆದಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಲ್ಯಾಪ್‌ಟಾಪ್ ಮೂಲಕ ಸ್ಥಳದಲ್ಲೇ ತಮ್ಮ ಸ್ನೇಹಿತರ ಗುಂಪಿನೊಂದಿಗೆ ಬಿಬಿಸಿ ಸಾಕ್ಷ್ಯಚಿತ್ರವನ್ನು ನೋಡಿದ್ದಾರೆ.

ಸಾಕ್ಷ್ಯಚಿತ್ರ ಪ್ರದರ್ಶನಕ್ಕೂ ಮೊದಲು ಮಾತನಾಡಿದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌, “ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರ ಭಾರತದ ಯಾವ ಪ್ರದೇಶದಲ್ಲೂ ನಿಷೇಧವಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ನೋಡಬಾರದು ಎಂದು ತಡೆಹಿಡಿದಿದ್ದು ಮಾತ್ರವಾಗಿದೆ. ಇದರರ್ಥ ಅದನ್ನು ನಿಷೇಧ ಎಂದಲ್ಲ. ಹೀಗಿರುವಾಗ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲು ಅನುಮತಿ ಯಾಕೆ ಪಡೆಯಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...