Homeಕರ್ನಾಟಕ20 ವರ್ಷಗಳ ಹಿಂದೆ ಭೂಮಿ ಮಾರಿದವರು ಇಂದು ಬೀದಿ ಬಿಕಾರಿಗಳಾಗಿದ್ದಾರೆ: ವೀರಸಂಗಯ್ಯ

20 ವರ್ಷಗಳ ಹಿಂದೆ ಭೂಮಿ ಮಾರಿದವರು ಇಂದು ಬೀದಿ ಬಿಕಾರಿಗಳಾಗಿದ್ದಾರೆ: ವೀರಸಂಗಯ್ಯ

ರಾಜ್ಯದಲ್ಲಿರುವ 87 ಲಕ್ಷ ರೈತ ಕುಟುಂಬಗಳಲ್ಲಿ 69 ಲಕ್ಷ ಕುಟುಂಬಗಳು ಬಡ ರೈತರೆ ಇದ್ದಾರೆ. ಇವರನ್ನು ನಂಬಿ 4.5 ಕೋಟಿ ಜನರು ಇದ್ದಾರೆ. ಸರ್ಕಾರ ಈ ಮಸೂದೆಗಳನ್ನು ತಂದರೆ ಇವರೆಲ್ಲರೂ ನಿರುದ್ಯೋಗಿಗಳಾಗುತ್ತಾರೆ.

- Advertisement -
- Advertisement -

ಒಳ್ಳೆಯ ಬೆಲೆ ಸಿಗುತ್ತದೆ ಎಂದು ಇಪ್ಪತ್ತು ವರ್ಷಗಳ ಹಿಂದೆ ಭೂಮಿ ಕೊಟ್ಟವರು ಇಂದು ಬೀದಿ ಬಿಕಾರಿಯಾಗಿದ್ದಾರೆ. ಕೆಲವು ತಲೆ ಮಾಸಿದವರು, ರೈತರ ಬಗ್ಗೆ ತಿಳಿಯದೆ ಇರುವವರು, ಕಾರ್ಪೊರೇಟ್ ಬಂದರೆ ರೈತರ ಭೂಮಿಗೆ ಕೋಟಿಗಟ್ಟಲೆ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಇವರು ಯಾರೂ ರೈತರ ಮಕ್ಕಳಲ್ಲ. ಇವರು ಪಕ್ಕಾ ಅಪ್ರಮಾಣಿಕ ಬ್ಯುಸಿನೆಸ್‌ಗೆ ಹುಟ್ಟಿದವರು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಜೆ.ಎಂ. ವೀರಸಂಗಯ್ಯ ಕಿಡಿಕಾರಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಎದುರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಐಕ್ಯ ಹೋರಾಟ ಸಮಿತಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

“ದೇಶಕ್ಕೆ ಸ್ವಾತಂತ್ಯ್ರ ಬೇಡ, ಬ್ರಿಟೀಷರ ಆಡಳಿತವೆ ಇರಲಿ ಎಂದು ಹೇಳಿದವರು ದೇಶದಲ್ಲಿ ಅಧಿಕಾರ ಹಿಡಿದು ಕೂತಿದ್ದಾರೆ, ಇದು ದೇಶದ ಬಹುದೊಡ್ಡ ದುರಂತವಾಗಿದೆ. ಗಾಂಧೀಜಿಯನ್ನು ದೈಹಿಕ ಹಾಗೂ ತಾತ್ವಿಕವಾಗಿ ಕೊಂದು ಹಾಕಿರುವ ಈ ಸಮಯದಲ್ಲಿ ಕಾರ್ಮಿಕರು, ಮಹಿಳೆಯರು, ರೈತರು ಗಾಂಧಿಜಿಯ ಮಾರ್ಗದಲ್ಲಿ ಹೋರಾಟವನ್ನು ಪುನರ್‌ರೂಪಿಸುವ ಅಗತ್ಯವಿದೆ” ಎಂದು ಹೇಳಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕ ಕ್ಷೇತ್ರವನ್ನು ಉಳಿಸಬಾರದು ಎಂದು ಆಲೋಚಿಸಿವೆ. ಬ್ಯಾಂಕುಗಳು ಮುಚ್ಚುತ್ತಿರುವ ಈ ಸಮಯದಲ್ಲಿ ಶ್ರೀಮಂತರ ಹಣ ಬ್ಯಾಂಕುಗಳಲ್ಲಿ ಇಡಲು ಸಾಧ್ಯವಾಗದಿರುವುದರಿಂದ ರೈತರ ಭೂಮಿಯನ್ನು ಕೊಂಡುಕೊಳ್ಳುವ ಮೂಲಕ ಶ್ರೀಮಂತರ ಹಣವನ್ನು ಉಳಿಸಲು ಬೇಕಾಗಿಯೇ ರೈತ ವಿರೋಧಿ ಸುಗ್ರೀವಾಜ್ಞೆಯನ್ನು ಜಾರಿ ಮಾಡಿದ್ದಾರೆ” ಎಂದು ಅವರು ಆರೋಪಿಸಿದರು.

“ರಾಜ್ಯದಲ್ಲಿರುವ 87 ಲಕ್ಷ ರೈತ ಕುಟುಂಬಗಳಲ್ಲಿ 69 ಲಕ್ಷ ಕುಟುಂಬಗಳು ಬಡ ರೈತರೆ ಇದ್ದಾರೆ. ಇವರನ್ನು ನಂಬಿ 4.5 ಕೋಟಿ ಜನರು ಇದ್ದಾರೆ. ಸರ್ಕಾರ ಈ ಮಸೂದೆಗಳನ್ನು ತಂದರೆ ಇವರೆಲ್ಲರೂ ನಿರುದ್ಯೋಗಿಗಳಾಗುತ್ತಾರೆ. ಪ್ರಸ್ತುತ 168 ರೀತಿಯ ಬೆಳೆಗಳನ್ನು ರಾಜ್ಯದಲ್ಲಿ ಬೆಳೆಯುತ್ತಿದ್ದಾರೆ. ಈ ಕಾಯ್ದೆ ಬಂದರೆ ಲಾಭ ತರುವ ಏಕ ಬೆಳೆಯನ್ನು ಬೆಳೆದು ನಮ್ಮ ಆಹಾರ ಸಂಸ್ಕೃತಿಯನ್ನು ನಾಶ ಮಾಡುತ್ತಾರೆ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು.

“ಎಪಿಎಂಸಿಯ ಸಾವಿರಾರು ಎಕರೆ ಭೂಮಿಯನ್ನು, ಕಚೇರಿಯನ್ನು ಖಾಸಗಿಯವರಿಗೆ ಮಾರಾಟ ಮಾಡಿ ನುಂಗಿ ನೀರು ಕುಡಿಯಲು ಸರ್ಕಾರ ಹೊರಟಿದೆ. ಇದರಿಂದ ರೈತರಿಗೆ ಮಾರುಕಟ್ಟೆ ಇಲ್ಲದಂತೆ ಆಗುತ್ತದೆ. ಒಂದು ವೇಳೆ ಬೆಲೆ ಸಿಗುತ್ತದೆ ಎಂದು ಭಾವಿಸಿ ಭೂಮಿಯನ್ನು ಶ್ರೀಮಂತರಿಗೆ ಮಾರಿದರೆ, ಮತ್ತೆಂದೂ ರೈತರಿಗೆ ಭೂಮಿ ಸಿಗುವುದಿಲ್ಲ, ಗುಲಾಮರಾಗಿಯೆ ಇರಬೇಕಾಗುತ್ತದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿಯ ಕೆಲಸಕ್ಕೆ ಯಂತ್ರಗಳನ್ನು ತರುವುದರಿಂದ ಕೂಲಿ ಕೆಲಸನೂ ಸಿಗುವುದಿಲ್ಲ, ಹುಷಾರ್‌…” ಎಂದು ವೀರಸಂಗಯ್ಯ ರೈತರಿಗೆ ಎಚ್ಚರಿಸಿದರು.


ಇದನ್ನೂ ಓದಿ: ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...