Homeಕರ್ನಾಟಕ20 ವರ್ಷಗಳ ಹಿಂದೆ ಭೂಮಿ ಮಾರಿದವರು ಇಂದು ಬೀದಿ ಬಿಕಾರಿಗಳಾಗಿದ್ದಾರೆ: ವೀರಸಂಗಯ್ಯ

20 ವರ್ಷಗಳ ಹಿಂದೆ ಭೂಮಿ ಮಾರಿದವರು ಇಂದು ಬೀದಿ ಬಿಕಾರಿಗಳಾಗಿದ್ದಾರೆ: ವೀರಸಂಗಯ್ಯ

ರಾಜ್ಯದಲ್ಲಿರುವ 87 ಲಕ್ಷ ರೈತ ಕುಟುಂಬಗಳಲ್ಲಿ 69 ಲಕ್ಷ ಕುಟುಂಬಗಳು ಬಡ ರೈತರೆ ಇದ್ದಾರೆ. ಇವರನ್ನು ನಂಬಿ 4.5 ಕೋಟಿ ಜನರು ಇದ್ದಾರೆ. ಸರ್ಕಾರ ಈ ಮಸೂದೆಗಳನ್ನು ತಂದರೆ ಇವರೆಲ್ಲರೂ ನಿರುದ್ಯೋಗಿಗಳಾಗುತ್ತಾರೆ.

- Advertisement -
- Advertisement -

ಒಳ್ಳೆಯ ಬೆಲೆ ಸಿಗುತ್ತದೆ ಎಂದು ಇಪ್ಪತ್ತು ವರ್ಷಗಳ ಹಿಂದೆ ಭೂಮಿ ಕೊಟ್ಟವರು ಇಂದು ಬೀದಿ ಬಿಕಾರಿಯಾಗಿದ್ದಾರೆ. ಕೆಲವು ತಲೆ ಮಾಸಿದವರು, ರೈತರ ಬಗ್ಗೆ ತಿಳಿಯದೆ ಇರುವವರು, ಕಾರ್ಪೊರೇಟ್ ಬಂದರೆ ರೈತರ ಭೂಮಿಗೆ ಕೋಟಿಗಟ್ಟಲೆ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಇವರು ಯಾರೂ ರೈತರ ಮಕ್ಕಳಲ್ಲ. ಇವರು ಪಕ್ಕಾ ಅಪ್ರಮಾಣಿಕ ಬ್ಯುಸಿನೆಸ್‌ಗೆ ಹುಟ್ಟಿದವರು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಜೆ.ಎಂ. ವೀರಸಂಗಯ್ಯ ಕಿಡಿಕಾರಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಎದುರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಐಕ್ಯ ಹೋರಾಟ ಸಮಿತಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

“ದೇಶಕ್ಕೆ ಸ್ವಾತಂತ್ಯ್ರ ಬೇಡ, ಬ್ರಿಟೀಷರ ಆಡಳಿತವೆ ಇರಲಿ ಎಂದು ಹೇಳಿದವರು ದೇಶದಲ್ಲಿ ಅಧಿಕಾರ ಹಿಡಿದು ಕೂತಿದ್ದಾರೆ, ಇದು ದೇಶದ ಬಹುದೊಡ್ಡ ದುರಂತವಾಗಿದೆ. ಗಾಂಧೀಜಿಯನ್ನು ದೈಹಿಕ ಹಾಗೂ ತಾತ್ವಿಕವಾಗಿ ಕೊಂದು ಹಾಕಿರುವ ಈ ಸಮಯದಲ್ಲಿ ಕಾರ್ಮಿಕರು, ಮಹಿಳೆಯರು, ರೈತರು ಗಾಂಧಿಜಿಯ ಮಾರ್ಗದಲ್ಲಿ ಹೋರಾಟವನ್ನು ಪುನರ್‌ರೂಪಿಸುವ ಅಗತ್ಯವಿದೆ” ಎಂದು ಹೇಳಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕ ಕ್ಷೇತ್ರವನ್ನು ಉಳಿಸಬಾರದು ಎಂದು ಆಲೋಚಿಸಿವೆ. ಬ್ಯಾಂಕುಗಳು ಮುಚ್ಚುತ್ತಿರುವ ಈ ಸಮಯದಲ್ಲಿ ಶ್ರೀಮಂತರ ಹಣ ಬ್ಯಾಂಕುಗಳಲ್ಲಿ ಇಡಲು ಸಾಧ್ಯವಾಗದಿರುವುದರಿಂದ ರೈತರ ಭೂಮಿಯನ್ನು ಕೊಂಡುಕೊಳ್ಳುವ ಮೂಲಕ ಶ್ರೀಮಂತರ ಹಣವನ್ನು ಉಳಿಸಲು ಬೇಕಾಗಿಯೇ ರೈತ ವಿರೋಧಿ ಸುಗ್ರೀವಾಜ್ಞೆಯನ್ನು ಜಾರಿ ಮಾಡಿದ್ದಾರೆ” ಎಂದು ಅವರು ಆರೋಪಿಸಿದರು.

“ರಾಜ್ಯದಲ್ಲಿರುವ 87 ಲಕ್ಷ ರೈತ ಕುಟುಂಬಗಳಲ್ಲಿ 69 ಲಕ್ಷ ಕುಟುಂಬಗಳು ಬಡ ರೈತರೆ ಇದ್ದಾರೆ. ಇವರನ್ನು ನಂಬಿ 4.5 ಕೋಟಿ ಜನರು ಇದ್ದಾರೆ. ಸರ್ಕಾರ ಈ ಮಸೂದೆಗಳನ್ನು ತಂದರೆ ಇವರೆಲ್ಲರೂ ನಿರುದ್ಯೋಗಿಗಳಾಗುತ್ತಾರೆ. ಪ್ರಸ್ತುತ 168 ರೀತಿಯ ಬೆಳೆಗಳನ್ನು ರಾಜ್ಯದಲ್ಲಿ ಬೆಳೆಯುತ್ತಿದ್ದಾರೆ. ಈ ಕಾಯ್ದೆ ಬಂದರೆ ಲಾಭ ತರುವ ಏಕ ಬೆಳೆಯನ್ನು ಬೆಳೆದು ನಮ್ಮ ಆಹಾರ ಸಂಸ್ಕೃತಿಯನ್ನು ನಾಶ ಮಾಡುತ್ತಾರೆ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು.

“ಎಪಿಎಂಸಿಯ ಸಾವಿರಾರು ಎಕರೆ ಭೂಮಿಯನ್ನು, ಕಚೇರಿಯನ್ನು ಖಾಸಗಿಯವರಿಗೆ ಮಾರಾಟ ಮಾಡಿ ನುಂಗಿ ನೀರು ಕುಡಿಯಲು ಸರ್ಕಾರ ಹೊರಟಿದೆ. ಇದರಿಂದ ರೈತರಿಗೆ ಮಾರುಕಟ್ಟೆ ಇಲ್ಲದಂತೆ ಆಗುತ್ತದೆ. ಒಂದು ವೇಳೆ ಬೆಲೆ ಸಿಗುತ್ತದೆ ಎಂದು ಭಾವಿಸಿ ಭೂಮಿಯನ್ನು ಶ್ರೀಮಂತರಿಗೆ ಮಾರಿದರೆ, ಮತ್ತೆಂದೂ ರೈತರಿಗೆ ಭೂಮಿ ಸಿಗುವುದಿಲ್ಲ, ಗುಲಾಮರಾಗಿಯೆ ಇರಬೇಕಾಗುತ್ತದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿಯ ಕೆಲಸಕ್ಕೆ ಯಂತ್ರಗಳನ್ನು ತರುವುದರಿಂದ ಕೂಲಿ ಕೆಲಸನೂ ಸಿಗುವುದಿಲ್ಲ, ಹುಷಾರ್‌…” ಎಂದು ವೀರಸಂಗಯ್ಯ ರೈತರಿಗೆ ಎಚ್ಚರಿಸಿದರು.


ಇದನ್ನೂ ಓದಿ: ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...