Homeಕರ್ನಾಟಕ20 ವರ್ಷಗಳ ಹಿಂದೆ ಭೂಮಿ ಮಾರಿದವರು ಇಂದು ಬೀದಿ ಬಿಕಾರಿಗಳಾಗಿದ್ದಾರೆ: ವೀರಸಂಗಯ್ಯ

20 ವರ್ಷಗಳ ಹಿಂದೆ ಭೂಮಿ ಮಾರಿದವರು ಇಂದು ಬೀದಿ ಬಿಕಾರಿಗಳಾಗಿದ್ದಾರೆ: ವೀರಸಂಗಯ್ಯ

ರಾಜ್ಯದಲ್ಲಿರುವ 87 ಲಕ್ಷ ರೈತ ಕುಟುಂಬಗಳಲ್ಲಿ 69 ಲಕ್ಷ ಕುಟುಂಬಗಳು ಬಡ ರೈತರೆ ಇದ್ದಾರೆ. ಇವರನ್ನು ನಂಬಿ 4.5 ಕೋಟಿ ಜನರು ಇದ್ದಾರೆ. ಸರ್ಕಾರ ಈ ಮಸೂದೆಗಳನ್ನು ತಂದರೆ ಇವರೆಲ್ಲರೂ ನಿರುದ್ಯೋಗಿಗಳಾಗುತ್ತಾರೆ.

- Advertisement -
- Advertisement -

ಒಳ್ಳೆಯ ಬೆಲೆ ಸಿಗುತ್ತದೆ ಎಂದು ಇಪ್ಪತ್ತು ವರ್ಷಗಳ ಹಿಂದೆ ಭೂಮಿ ಕೊಟ್ಟವರು ಇಂದು ಬೀದಿ ಬಿಕಾರಿಯಾಗಿದ್ದಾರೆ. ಕೆಲವು ತಲೆ ಮಾಸಿದವರು, ರೈತರ ಬಗ್ಗೆ ತಿಳಿಯದೆ ಇರುವವರು, ಕಾರ್ಪೊರೇಟ್ ಬಂದರೆ ರೈತರ ಭೂಮಿಗೆ ಕೋಟಿಗಟ್ಟಲೆ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಇವರು ಯಾರೂ ರೈತರ ಮಕ್ಕಳಲ್ಲ. ಇವರು ಪಕ್ಕಾ ಅಪ್ರಮಾಣಿಕ ಬ್ಯುಸಿನೆಸ್‌ಗೆ ಹುಟ್ಟಿದವರು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಜೆ.ಎಂ. ವೀರಸಂಗಯ್ಯ ಕಿಡಿಕಾರಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಎದುರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಐಕ್ಯ ಹೋರಾಟ ಸಮಿತಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಪಂಜಾಬ್‌: ರೈತರ ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಮುತ್ತಿಗೆ

“ದೇಶಕ್ಕೆ ಸ್ವಾತಂತ್ಯ್ರ ಬೇಡ, ಬ್ರಿಟೀಷರ ಆಡಳಿತವೆ ಇರಲಿ ಎಂದು ಹೇಳಿದವರು ದೇಶದಲ್ಲಿ ಅಧಿಕಾರ ಹಿಡಿದು ಕೂತಿದ್ದಾರೆ, ಇದು ದೇಶದ ಬಹುದೊಡ್ಡ ದುರಂತವಾಗಿದೆ. ಗಾಂಧೀಜಿಯನ್ನು ದೈಹಿಕ ಹಾಗೂ ತಾತ್ವಿಕವಾಗಿ ಕೊಂದು ಹಾಕಿರುವ ಈ ಸಮಯದಲ್ಲಿ ಕಾರ್ಮಿಕರು, ಮಹಿಳೆಯರು, ರೈತರು ಗಾಂಧಿಜಿಯ ಮಾರ್ಗದಲ್ಲಿ ಹೋರಾಟವನ್ನು ಪುನರ್‌ರೂಪಿಸುವ ಅಗತ್ಯವಿದೆ” ಎಂದು ಹೇಳಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕ ಕ್ಷೇತ್ರವನ್ನು ಉಳಿಸಬಾರದು ಎಂದು ಆಲೋಚಿಸಿವೆ. ಬ್ಯಾಂಕುಗಳು ಮುಚ್ಚುತ್ತಿರುವ ಈ ಸಮಯದಲ್ಲಿ ಶ್ರೀಮಂತರ ಹಣ ಬ್ಯಾಂಕುಗಳಲ್ಲಿ ಇಡಲು ಸಾಧ್ಯವಾಗದಿರುವುದರಿಂದ ರೈತರ ಭೂಮಿಯನ್ನು ಕೊಂಡುಕೊಳ್ಳುವ ಮೂಲಕ ಶ್ರೀಮಂತರ ಹಣವನ್ನು ಉಳಿಸಲು ಬೇಕಾಗಿಯೇ ರೈತ ವಿರೋಧಿ ಸುಗ್ರೀವಾಜ್ಞೆಯನ್ನು ಜಾರಿ ಮಾಡಿದ್ದಾರೆ” ಎಂದು ಅವರು ಆರೋಪಿಸಿದರು.

“ರಾಜ್ಯದಲ್ಲಿರುವ 87 ಲಕ್ಷ ರೈತ ಕುಟುಂಬಗಳಲ್ಲಿ 69 ಲಕ್ಷ ಕುಟುಂಬಗಳು ಬಡ ರೈತರೆ ಇದ್ದಾರೆ. ಇವರನ್ನು ನಂಬಿ 4.5 ಕೋಟಿ ಜನರು ಇದ್ದಾರೆ. ಸರ್ಕಾರ ಈ ಮಸೂದೆಗಳನ್ನು ತಂದರೆ ಇವರೆಲ್ಲರೂ ನಿರುದ್ಯೋಗಿಗಳಾಗುತ್ತಾರೆ. ಪ್ರಸ್ತುತ 168 ರೀತಿಯ ಬೆಳೆಗಳನ್ನು ರಾಜ್ಯದಲ್ಲಿ ಬೆಳೆಯುತ್ತಿದ್ದಾರೆ. ಈ ಕಾಯ್ದೆ ಬಂದರೆ ಲಾಭ ತರುವ ಏಕ ಬೆಳೆಯನ್ನು ಬೆಳೆದು ನಮ್ಮ ಆಹಾರ ಸಂಸ್ಕೃತಿಯನ್ನು ನಾಶ ಮಾಡುತ್ತಾರೆ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು.

“ಎಪಿಎಂಸಿಯ ಸಾವಿರಾರು ಎಕರೆ ಭೂಮಿಯನ್ನು, ಕಚೇರಿಯನ್ನು ಖಾಸಗಿಯವರಿಗೆ ಮಾರಾಟ ಮಾಡಿ ನುಂಗಿ ನೀರು ಕುಡಿಯಲು ಸರ್ಕಾರ ಹೊರಟಿದೆ. ಇದರಿಂದ ರೈತರಿಗೆ ಮಾರುಕಟ್ಟೆ ಇಲ್ಲದಂತೆ ಆಗುತ್ತದೆ. ಒಂದು ವೇಳೆ ಬೆಲೆ ಸಿಗುತ್ತದೆ ಎಂದು ಭಾವಿಸಿ ಭೂಮಿಯನ್ನು ಶ್ರೀಮಂತರಿಗೆ ಮಾರಿದರೆ, ಮತ್ತೆಂದೂ ರೈತರಿಗೆ ಭೂಮಿ ಸಿಗುವುದಿಲ್ಲ, ಗುಲಾಮರಾಗಿಯೆ ಇರಬೇಕಾಗುತ್ತದೆ. ಕಾರ್ಪೊರೇಟ್‌ ಶಕ್ತಿಗಳು ಕೃಷಿಯ ಕೆಲಸಕ್ಕೆ ಯಂತ್ರಗಳನ್ನು ತರುವುದರಿಂದ ಕೂಲಿ ಕೆಲಸನೂ ಸಿಗುವುದಿಲ್ಲ, ಹುಷಾರ್‌…” ಎಂದು ವೀರಸಂಗಯ್ಯ ರೈತರಿಗೆ ಎಚ್ಚರಿಸಿದರು.


ಇದನ್ನೂ ಓದಿ: ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...