Homeಕರ್ನಾಟಕಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನ ಭೂಮಿ ಕೊಡಲು ಸಿದ್ಧರಿಲ್ಲ: ಕಾರಳ್ಳಿ ಶ್ರೀನಿವಾಸ್

ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನ ಭೂಮಿ ಕೊಡಲು ಸಿದ್ಧರಿಲ್ಲ: ಕಾರಳ್ಳಿ ಶ್ರೀನಿವಾಸ್

- Advertisement -
- Advertisement -

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿ ಜನರ ಒಗ್ಗಟ್ಟು ಒಡೆಯುವುದೇ ಭೂಸ್ವಾಧೀನ ಪರ ತಂಡದ ದುರುದ್ದೇಶ; ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನರು ನಮ್ಮ ಜೊತೆಗಿದ್ದಾರೆ ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

1195 ದಿನಗಳಿಂದ ಬಲವಂತದ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಅಂತಿಮ ಹಂತ ತಲುಪಿದ್ದು, ಜು.15 ರಂದು ತನ್ನ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮಧ್ಯೆ, ದೇವನಹಳ್ಳಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ನಾವು ಭೂಸ್ವಾಧೀನ ಪರವಾಗಿದ್ದೇವೆ ಎಂದು ಪತ್ರಿಕಾಗೋಷ್ಠಿ ನಡೆಸಿರುವುದು ನೈಜ ಹೋರಾಟಗಾರರ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರಳ್ಳಿ ಶ್ರೀನಿವಾಸ್, “1195 ದಿನಗಳ ಹೋರಾಟವನ್ನು ನೈಜ ರೈತರೇ ನಡೆಸಿದ್ದಾರೆ, ತಮ್ಮ ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನರು ಇಂದು ಇಲ್ಲಿದ್ದಾರೆ. ಆದರೆ, ಭೂಮಿ ಮಾರುವವರು ಮತ್ತು ಮಧ್ಯವರ್ತಿಗಳು ಬೆಂಗಳೂರಿಗೆ ಹೊರಟಿದ್ದಾರೆ” ಎಂದರು.

“ಇತ್ತೀಚೆಗೆ ಭೂಮಿ ಕೊಡುವುದಾಗಿ ಹೇಳಿ ಕೆಲವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಹೋರಾಟ ನಿರ್ಣಾಯಕ ಹಂತ ತಲುಪಿರುವಾಗ ಈ ರೀತಿಯ ಪ್ರಚೋದನೆಗೆ ಸರ್ಕಾರವೇ ನೇರ ಕಾರಣ. ಜೂನ್ 25 ರ ‘ದೇವನಹಳ್ಳಿ ಹೋರಾಟ’ದ ಬಳಿಕ ನಮ್ಮ ಹೋರಾಟ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. 4 ನೇ ತಾರೀಕು ನಡೆದ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರ ತೆಗೆದುಕೊಳ್ಳಲು 10 ದಿನ ಸಮಯ ಕೇಳಿದ್ದರು, ಡಿನೋಟಿಫೈ ಮಾಡಲು ಕಾನೂನು ತೊಡಕಿದೆ ಎಂದು ಹೇಳಿದ್ದರು. ಹೀಗೆ ಹೇಳಿದ ಬಳಿಕ ಸರ್ಕಾರ ನಡೆದುಕೊಳ್ಳುತ್ತಿರುವುದು ಸರಿಯಲ್ಲ; ಸಚಿವ ಎಂ.ಬಿ. ಪಾಟೀಲ್ ಅವರ ನಡೆಯೂ ಒಪ್ಪುವುದಕ್ಕೆ ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದ ಮುಖ್ಯಮಂತ್ರಿ ಯಾರು?

“ನಮಗೆ ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಅನುಮಾನ ಕಾಡುತ್ತಿದೆ ಎಂ.ಬಿ. ಪಾಟೀಲ್ ಅಥವಾ ಸಿದ್ದರಾಮಯ್ಯನವರೋ? ಭೂಸ್ವಾಧೀನ ವಿಚಾರದಲ್ಲಿ ಅವರೇ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ” ಎಂದರು.

“ಎಸ್‌ಸಿ-ಎಸ್‌ಟಿ ಸಮುದಾಯವನ್ನು ಮುಂದೆ ಇಟ್ಟುಕೊಂಡು ಭೂಮಿ ಕೊಡುತ್ತಾರೆ ಎಂದು ಮಾರಾಟ ಮಾಡಿಸುವ ಮಧ್ಯವರ್ತಿಗಳು ಸುಳ್ಳು ಹೇಳುತ್ತಿದ್ದಾರೆ. ಜಮೀನು ಮಾರಾಟ ಮಾಡುವವರು ಮತ್ತು ಅದರ ಮಧ್ಯವರ್ತಿಗಳು ಬೆಂಗಳೂರಿಗೆ ಹೊರಟಿದ್ದಾರೆ. ಎಲ್ಲ ದಲಿತರೂ ಭೂಮಿ ಕೊಡುತ್ತಾರೆ ಎಂಬ ಮಧ್ಯವರ್ತಿಗಳ ಆರೋಪ ನಿಜವಲ್ಲ. ಹೊಲೆಯ ಮತ್ತು ಮಾದಿಗ ಸಮುದಾಯದ ಜಮೀನು ಮಾಲೀಕರು ಇಲ್ಲೇ ಇದ್ದಾರೆ. ಅವರು ಯಾವುದೇ ಕಾರಣಕ್ಕೂ ಭೂಮಿ ಕೊಡುವುದಕ್ಕೆ ಒಪ್ಪುವುದಿಲ್ಲ” ಎಂದು ಹೇಳಿದರು.

“ಹೊಲದಲ್ಲಿ ದುಡಿಯುವ ಎಲ್ಲ ಹಿಂದುಳಿದ ಜಾತಿ ಜನರೂ ಇಲ್ಲಿದ್ದಾರೆ, ಅವರೆಲ್ಲರೂ ಭೂಮಿ ಕೊಡುವುದಿಲ್ಲ ಎಂದು ಹೋರಾಟ ನಡೆಸುತ್ತಿದ್ದಾರೆ. ನಮ್ಮ ಒಗ್ಗಟ್ಟು ಮುರಿಯಲು ಜಗಳ ತಂದಿಡಲು ಯತ್ನಿಸುತ್ತಿದ್ದಾರೆ. ‘ಹಸಿರು ವಲಯ’ ಎಂದು ಹೇಳಿ ಭಯ ಹುಟ್ಟಿಸುತ್ತಿದ್ದಾರೆ. ಪತ್ರಿಕೆಯೊಂದರ ಊಹಾತ್ಮಕ ಸುದ್ದಿಯನ್ನೇ ಸರ್ಕಾರದ ಆದೇಶ ಎಂದು ಹೇಳುತ್ತಿದ್ದಾರೆ. ಜಮೀನು ಮಾರಾಟ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿಯೇ ರೈತರು ಇಷ್ಟು ದಿನದಿಂದ ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ, ಹೊಲವನ್ನು ಉತ್ತಿಬಿತ್ತಿ, ಅನ್ನ ಬೆಳೆಯುವ ರೈತರಿಗೆ ‘ಹಸಿರು ವಲಯ’ವೇ ಬೇಕು. ಮಧ್ಯವರ್ತಿಗಳು ಮಾತ್ರ ‘ಹಳದಿ ವಲಯ’ ಕೇಳುತ್ತಿದ್ದಾರೆ” ಎಂದರು.

“ಕೆಐಎಡಿಬಿ ನೋಟಿಸ್ ಕೊಡುವುದಕ್ಕೂ ಮೊದಲೇ ಭೂಮಿ ಮಾರಾಟಕ್ಕೆ ಅಗ್ರಿಮೆಂಟ್ (ಮಾರಾಟ ಒಪ್ಪಂದ) ಮಾಡಿಸಿಕೊಂಡಿದ್ದವರು ಆತಂಕದಿಂದ ಜನರನ್ನು ಕರೆದುಕೊಂಡು ಹೋಗಿದ್ದಾರೆ. ದಲಿತರಿಗೆ ಬೆದರಿಕೆ ಹಾಕುತ್ತಿರುವ ಇಂಥ ಪುಡಾರಿಗಳನ್ನು ಸರ್ಕಾರ ಒದ್ದು ಜೈಲಿಗೆ ಹಾಕಬೇಕು” ಎಂದು ಆಗ್ರಹಿಸಿದರು.

ಸರ್ಕಾರ ಪತನವಾದರೂ ಆಗಬಹುದು

“ಈಗ ಭೂಸ್ವಾಧೀನ ಪರವಾಗಿ ಮಾತನಾಡುತ್ತಿರುವವರಿಗೆ ನಮ್ಮನ್ನು ನೇರವಾಗಿ ಎದುರಿಸಲು ತಾಕತ್ತಿಲ್ಲ; ಮೂರೂವರೆ ವರ್ಷದ ಹೋರಾಟ ನೋಡಿದ ಅವರಿಗೆ ನಮ್ಮ ಶಕ್ತಿ ಏನೆಂಬುದು ಗೊತ್ತಿದೆ. ನಮ್ಮ ತಂಟೆಗೆ ಒಂದರೆ ಏನೂ ಮಾಡಲು ಸಾಧ್ಯವಿಲ್ಲ ಎಂಬುದು ಅರಿವು ಅವರಿಗಿದೆ. ಜು.25ರಂದು ರೈತರ ಪರವಾಗಿ ನಿರ್ಧಾರ ತೆಗೆದುಕೊಳ್ಳದೇ ಇದ್ದರೆ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಇದೇ ಕಾರಣಕ್ಕೆ ಅವರ ಸರ್ಕಾರ ಪತನವಾದರೂ ಆಗಬಹುದು. ಒಂದು ವೇಳೆ ಈ ಸರ್ಕಾರ ನಮ್ಮ ವಿರುದ್ಧವೇನಾದರೂ ನಿರ್ಧಾರ ಮಾಡಿದರೆ, ನಮ್ಮ ಚಳವಳಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುತ್ತೇವೆ. ಇದು ರೈತರ ನೈಜ ಹೋರಾಟ, ನಮ್ಮ ಹೋರಾಟ ಬೆಂಬಲಿಸುವಂತೆ ಅನ್ನ ತಿನ್ನುವ ಎಲ್ಲ ಕೈಗಳಿಗೆ ಮನವಿ ಮಾಡುತ್ತೇವೆ” ಎಂದರು.

ಮಟ್ಟಬಾರ್ಲು ಗ್ರಾಮದ ರೈತ ಮಹಿಳೆ ಮುನಿವೆಂಕಟಮ್ಮ ಮಾತನಾಡಿ, “ಭೂಮಿ ಕೊಡಲು ಎಷ್ಟು ಜನ ಸಿದ್ಧರಿದ್ದಾರೆ ಎಂಬ ಬಗ್ಗೆ ಸರ್ಕಾರ ಪರಿಶೀಲಿಸಬೇಕು. ಜು.25ರಂದು ನಮ್ಮ ಪರವಾಗಿ ನಿರ್ಧಾರ ಮಾಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮತ್ತಷ್ಟು ತೀವ್ರವಾಗುತ್ತದೆ. ಏಕೆಂದರೆ, ರಾಜ್ಯದ ಎಲ್ಲ ಜನಪರ ಹೋರಾಟಗಾರರ ಬೆಂಬಲ ನಮಗಿದೆ” ಎಂದರು.

“ಸಚಿವ ಎಂ.ಬಿ. ಪಾಟೀಲ್‌ಗೆ ದುಡ್ಡು ಬೇಕಿದೆ; ಅದಕ್ಕಾಗಿ ನಕಲಿ ಜನರನ್ನು ಸೃಷ್ಟಿ ಮಾಡಿದ್ದಾರೆ. ಆ ಮೂಲಕ ನಮ್ಮ ಒಗ್ಗಟ್ಟು ಒಡೆಯುವ ಕುತಂತ್ರ ಮಾಡುತ್ತಿದ್ದಾರೆ. ಇದೆಲ್ಲಾ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಮುನಿಯಪ್ಪ ಅವರಿಗೆ ಕಾಣುತ್ತಿಲ್ಲವೇ? ಸುಳ್ಳು ಸಾಕ್ಷಿ ಹೇಳುವವರ ಮಾತು ಕೇಳುವ ಮೂಲಕ ನಮ್ಮ ಹೋರಾಟದ ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದರು.

ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚೀಮಾಚನಹಳ್ಳಿ ಲಕ್ಷ್ಮಿ ಮಾತನಾಡಿ, “ಕೆಲವರಿಗೆ ದುಡ್ಡಿನ ಆಸೆ ತೋರಿಸಿ ಹಾಗೂ ಹಸಿರು ವಲಯ ಆಗತ್ತದೆ ಎಂದು ಭಯ ಹುಟ್ಟಿಸಿ ಜನರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ನಮ್ಮಲ್ಲಿ ಶೇ.90 ರಷ್ಟು ಜನ ಭೂಮಿ ಕೊಡುವುದಿಲ್ಲ ಎಂದು ನಿರ್ಧರಿಸಿದ್ದಾರೆ. ಇಂದು ಬೆಂಗಳೂರಿಗೆ ಹೋಗಿರುವ ಬಹುತೇಕರನ್ನು ಬೆದರಿಸಲಾಗಿದೆ. ಕೆಲವೇಕೆಲವು ಜನಕ್ಕೆ ಮಾತ್ರ ದುಡ್ಡು ಬೇಕು. ಆದರೆ, ಬಹುತೇಕರ ಆಯ್ಕೆ ಕೃಷಿ ಆಗಿದೆ” ಎಂದರು.

ನಲ್ಲಪ್ಪನಹಳ್ಳಿಯ ಇಂಜಿನಿಯರಿಂಗ್ ಪದವೀಧರೆ ಬಿಂದು ಮಾತನಾಡಿ, “ಭೂಮಿ ಕೊಡುತ್ತೇವೆ ಎಂದು ಬೆಂಗಳೂರಿಗೆ ಹೋಗಿರುವವರು ದುಡ್ಡಿಗಾಗಿ ತೆರಳಿದ್ದಾರೆ. ಆದರೆ, ನಾವು ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಸುತ್ತಮುತ್ತಲಿನ ಕಾರ್ಖಾನೆಗಳಿಂದ ನಮ್ಮಲ್ಲಿ ಹೆಚ್ಚಿನ ಮಾಲಿನ್ಯ ಆಗುತ್ತಿದೆ. ಇದು ನಮ್ಮ ಅಸ್ತಿತ್ವದ ಪ್ರಶ್ನೆ; ಒಂದೇ ಕಡೆ ಕಾರ್ಖಾನೆಗಳನ್ನು ಕಟ್ಟುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಕಷ್ಟವಾಗುತ್ತದೆ” ಎಂದರು.

“ಇಂಜಿನಿಯರಿಂಗ್ ಪದವಿ ಮಾಡಿದ್ದರೂ ಕೃಷಿಯಲ್ಲಿ ನಾವು ನೆಮ್ಮದಿಯಾಗಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ‘ಹಸಿರು ಉಳಿಸಿ’ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಅವರು ಈಗ ನಮ್ಮ ಭೂಮಿಯನ್ನೇ ಕಿತ್ತುಕೊಳ್ಳುತ್ತಿದ್ದಾರೆ. ರೈತರನ್ನು ಬೆಂಬಲಿಸದ ಸರ್ಕಾರ ನಮಗೆ ಯಾಕೆ ಬೇಕು? ಸ್ವಾತಂತ್ರ್ಯ ಪೂರ್ವದಿಂದಲೂ ನಾವು ಹೋರಾಟ ಮಾಡಿಕೊಂಡೆ ಎಲ್ಲವನ್ನೂ ಪಡೆದುಕೊಳ್ಳಬೇಕು; ಈಗ ನಮ್ಮ ಭೂಮಿ ಉಳಿಸಿಕೊಳ್ಳಲೂ ಹೋರಾಡಬೇಕಿದೆ. ಮುಖ್ಯಮಂತ್ರಿಗಳು ರೈತರ ಪರವಾಗಿ ನಿಲ್ಲಲೇಬೇಕು” ಎಂದು ಬಿಂದು ಆಗ್ರಹಿಸಿದರು.

ನಲ್ಲಪ್ಪನಹಳ್ಳಿ ಗ್ರಾಮದ ಕೃಷಿ ಪದವೀಧರ, ಆಧುನಿಕ ಕೃಷಿಕ ವಿನಯ್ ಮಾತನಾಡಿ, “13 ಹಳ್ಳಿಗಳ ರೈತರಲ್ಲಿ ಒಗ್ಗಟ್ಟು ಇರಲಿಲ್ಲ ಎಂದಿದ್ದರೆ ನಮ್ಮ ಹೋರಾಟ 1200 ದಿನ ಪೂರೈಸುತ್ತಿರಲಿಲ್ಲ. ನಾವೆಲ್ಲರೂ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಭೂಮಿ ಮಾರಿಸುವ ಕೆಲ ಏಜೆಂಟ್‌ಗಳು ನಮ್ಮ ಒಗ್ಗಟ್ಟು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಮಗೆ ಕೃಷಿ ವಲಯ (ಹಸಿರು ವಲಯ) ಬೇಕು; ದಲ್ಲಾಳಿಗಳಿಗೆ ಹಳದಿ ವಲಯ ಬೇಕು. ಅದನ್ನೇ ಮುಂದಿಟ್ಟುಕೊಂಡು ಬೆದರಿಕೆ ಹಾಕುತ್ತಿದ್ದಾರೆ. ಆದರೆ, ಭೂಮಿ ನಂಬಿ ಬದುಕುತ್ತಿರುವ ನಮಗೆ ಹಸಿರು ವಲವೇ ಬೇಕು” ಎಂದು ಹೇಳಿದರು.

ದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...