Homeಕರ್ನಾಟಕಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನ ಭೂಮಿ ಕೊಡಲು ಸಿದ್ಧರಿಲ್ಲ: ಕಾರಳ್ಳಿ ಶ್ರೀನಿವಾಸ್

ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನ ಭೂಮಿ ಕೊಡಲು ಸಿದ್ಧರಿಲ್ಲ: ಕಾರಳ್ಳಿ ಶ್ರೀನಿವಾಸ್

- Advertisement -
- Advertisement -

ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿ ಜನರ ಒಗ್ಗಟ್ಟು ಒಡೆಯುವುದೇ ಭೂಸ್ವಾಧೀನ ಪರ ತಂಡದ ದುರುದ್ದೇಶ; ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನರು ನಮ್ಮ ಜೊತೆಗಿದ್ದಾರೆ ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

1195 ದಿನಗಳಿಂದ ಬಲವಂತದ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಅಂತಿಮ ಹಂತ ತಲುಪಿದ್ದು, ಜು.15 ರಂದು ತನ್ನ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮಧ್ಯೆ, ದೇವನಹಳ್ಳಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ನಾವು ಭೂಸ್ವಾಧೀನ ಪರವಾಗಿದ್ದೇವೆ ಎಂದು ಪತ್ರಿಕಾಗೋಷ್ಠಿ ನಡೆಸಿರುವುದು ನೈಜ ಹೋರಾಟಗಾರರ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರಳ್ಳಿ ಶ್ರೀನಿವಾಸ್, “1195 ದಿನಗಳ ಹೋರಾಟವನ್ನು ನೈಜ ರೈತರೇ ನಡೆಸಿದ್ದಾರೆ, ತಮ್ಮ ಹೊಲದಲ್ಲಿ ಬೆವರು ಸುರಿಸಿ ದುಡಿಯುವ ಜನರು ಇಂದು ಇಲ್ಲಿದ್ದಾರೆ. ಆದರೆ, ಭೂಮಿ ಮಾರುವವರು ಮತ್ತು ಮಧ್ಯವರ್ತಿಗಳು ಬೆಂಗಳೂರಿಗೆ ಹೊರಟಿದ್ದಾರೆ” ಎಂದರು.

“ಇತ್ತೀಚೆಗೆ ಭೂಮಿ ಕೊಡುವುದಾಗಿ ಹೇಳಿ ಕೆಲವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಹೋರಾಟ ನಿರ್ಣಾಯಕ ಹಂತ ತಲುಪಿರುವಾಗ ಈ ರೀತಿಯ ಪ್ರಚೋದನೆಗೆ ಸರ್ಕಾರವೇ ನೇರ ಕಾರಣ. ಜೂನ್ 25 ರ ‘ದೇವನಹಳ್ಳಿ ಹೋರಾಟ’ದ ಬಳಿಕ ನಮ್ಮ ಹೋರಾಟ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. 4 ನೇ ತಾರೀಕು ನಡೆದ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರ ತೆಗೆದುಕೊಳ್ಳಲು 10 ದಿನ ಸಮಯ ಕೇಳಿದ್ದರು, ಡಿನೋಟಿಫೈ ಮಾಡಲು ಕಾನೂನು ತೊಡಕಿದೆ ಎಂದು ಹೇಳಿದ್ದರು. ಹೀಗೆ ಹೇಳಿದ ಬಳಿಕ ಸರ್ಕಾರ ನಡೆದುಕೊಳ್ಳುತ್ತಿರುವುದು ಸರಿಯಲ್ಲ; ಸಚಿವ ಎಂ.ಬಿ. ಪಾಟೀಲ್ ಅವರ ನಡೆಯೂ ಒಪ್ಪುವುದಕ್ಕೆ ಸಾಧ್ಯವಿಲ್ಲ” ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದ ಮುಖ್ಯಮಂತ್ರಿ ಯಾರು?

“ನಮಗೆ ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಅನುಮಾನ ಕಾಡುತ್ತಿದೆ ಎಂ.ಬಿ. ಪಾಟೀಲ್ ಅಥವಾ ಸಿದ್ದರಾಮಯ್ಯನವರೋ? ಭೂಸ್ವಾಧೀನ ವಿಚಾರದಲ್ಲಿ ಅವರೇ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ” ಎಂದರು.

“ಎಸ್‌ಸಿ-ಎಸ್‌ಟಿ ಸಮುದಾಯವನ್ನು ಮುಂದೆ ಇಟ್ಟುಕೊಂಡು ಭೂಮಿ ಕೊಡುತ್ತಾರೆ ಎಂದು ಮಾರಾಟ ಮಾಡಿಸುವ ಮಧ್ಯವರ್ತಿಗಳು ಸುಳ್ಳು ಹೇಳುತ್ತಿದ್ದಾರೆ. ಜಮೀನು ಮಾರಾಟ ಮಾಡುವವರು ಮತ್ತು ಅದರ ಮಧ್ಯವರ್ತಿಗಳು ಬೆಂಗಳೂರಿಗೆ ಹೊರಟಿದ್ದಾರೆ. ಎಲ್ಲ ದಲಿತರೂ ಭೂಮಿ ಕೊಡುತ್ತಾರೆ ಎಂಬ ಮಧ್ಯವರ್ತಿಗಳ ಆರೋಪ ನಿಜವಲ್ಲ. ಹೊಲೆಯ ಮತ್ತು ಮಾದಿಗ ಸಮುದಾಯದ ಜಮೀನು ಮಾಲೀಕರು ಇಲ್ಲೇ ಇದ್ದಾರೆ. ಅವರು ಯಾವುದೇ ಕಾರಣಕ್ಕೂ ಭೂಮಿ ಕೊಡುವುದಕ್ಕೆ ಒಪ್ಪುವುದಿಲ್ಲ” ಎಂದು ಹೇಳಿದರು.

“ಹೊಲದಲ್ಲಿ ದುಡಿಯುವ ಎಲ್ಲ ಹಿಂದುಳಿದ ಜಾತಿ ಜನರೂ ಇಲ್ಲಿದ್ದಾರೆ, ಅವರೆಲ್ಲರೂ ಭೂಮಿ ಕೊಡುವುದಿಲ್ಲ ಎಂದು ಹೋರಾಟ ನಡೆಸುತ್ತಿದ್ದಾರೆ. ನಮ್ಮ ಒಗ್ಗಟ್ಟು ಮುರಿಯಲು ಜಗಳ ತಂದಿಡಲು ಯತ್ನಿಸುತ್ತಿದ್ದಾರೆ. ‘ಹಸಿರು ವಲಯ’ ಎಂದು ಹೇಳಿ ಭಯ ಹುಟ್ಟಿಸುತ್ತಿದ್ದಾರೆ. ಪತ್ರಿಕೆಯೊಂದರ ಊಹಾತ್ಮಕ ಸುದ್ದಿಯನ್ನೇ ಸರ್ಕಾರದ ಆದೇಶ ಎಂದು ಹೇಳುತ್ತಿದ್ದಾರೆ. ಜಮೀನು ಮಾರಾಟ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿಯೇ ರೈತರು ಇಷ್ಟು ದಿನದಿಂದ ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ, ಹೊಲವನ್ನು ಉತ್ತಿಬಿತ್ತಿ, ಅನ್ನ ಬೆಳೆಯುವ ರೈತರಿಗೆ ‘ಹಸಿರು ವಲಯ’ವೇ ಬೇಕು. ಮಧ್ಯವರ್ತಿಗಳು ಮಾತ್ರ ‘ಹಳದಿ ವಲಯ’ ಕೇಳುತ್ತಿದ್ದಾರೆ” ಎಂದರು.

“ಕೆಐಎಡಿಬಿ ನೋಟಿಸ್ ಕೊಡುವುದಕ್ಕೂ ಮೊದಲೇ ಭೂಮಿ ಮಾರಾಟಕ್ಕೆ ಅಗ್ರಿಮೆಂಟ್ (ಮಾರಾಟ ಒಪ್ಪಂದ) ಮಾಡಿಸಿಕೊಂಡಿದ್ದವರು ಆತಂಕದಿಂದ ಜನರನ್ನು ಕರೆದುಕೊಂಡು ಹೋಗಿದ್ದಾರೆ. ದಲಿತರಿಗೆ ಬೆದರಿಕೆ ಹಾಕುತ್ತಿರುವ ಇಂಥ ಪುಡಾರಿಗಳನ್ನು ಸರ್ಕಾರ ಒದ್ದು ಜೈಲಿಗೆ ಹಾಕಬೇಕು” ಎಂದು ಆಗ್ರಹಿಸಿದರು.

ಸರ್ಕಾರ ಪತನವಾದರೂ ಆಗಬಹುದು

“ಈಗ ಭೂಸ್ವಾಧೀನ ಪರವಾಗಿ ಮಾತನಾಡುತ್ತಿರುವವರಿಗೆ ನಮ್ಮನ್ನು ನೇರವಾಗಿ ಎದುರಿಸಲು ತಾಕತ್ತಿಲ್ಲ; ಮೂರೂವರೆ ವರ್ಷದ ಹೋರಾಟ ನೋಡಿದ ಅವರಿಗೆ ನಮ್ಮ ಶಕ್ತಿ ಏನೆಂಬುದು ಗೊತ್ತಿದೆ. ನಮ್ಮ ತಂಟೆಗೆ ಒಂದರೆ ಏನೂ ಮಾಡಲು ಸಾಧ್ಯವಿಲ್ಲ ಎಂಬುದು ಅರಿವು ಅವರಿಗಿದೆ. ಜು.25ರಂದು ರೈತರ ಪರವಾಗಿ ನಿರ್ಧಾರ ತೆಗೆದುಕೊಳ್ಳದೇ ಇದ್ದರೆ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಇದೇ ಕಾರಣಕ್ಕೆ ಅವರ ಸರ್ಕಾರ ಪತನವಾದರೂ ಆಗಬಹುದು. ಒಂದು ವೇಳೆ ಈ ಸರ್ಕಾರ ನಮ್ಮ ವಿರುದ್ಧವೇನಾದರೂ ನಿರ್ಧಾರ ಮಾಡಿದರೆ, ನಮ್ಮ ಚಳವಳಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುತ್ತೇವೆ. ಇದು ರೈತರ ನೈಜ ಹೋರಾಟ, ನಮ್ಮ ಹೋರಾಟ ಬೆಂಬಲಿಸುವಂತೆ ಅನ್ನ ತಿನ್ನುವ ಎಲ್ಲ ಕೈಗಳಿಗೆ ಮನವಿ ಮಾಡುತ್ತೇವೆ” ಎಂದರು.

ಮಟ್ಟಬಾರ್ಲು ಗ್ರಾಮದ ರೈತ ಮಹಿಳೆ ಮುನಿವೆಂಕಟಮ್ಮ ಮಾತನಾಡಿ, “ಭೂಮಿ ಕೊಡಲು ಎಷ್ಟು ಜನ ಸಿದ್ಧರಿದ್ದಾರೆ ಎಂಬ ಬಗ್ಗೆ ಸರ್ಕಾರ ಪರಿಶೀಲಿಸಬೇಕು. ಜು.25ರಂದು ನಮ್ಮ ಪರವಾಗಿ ನಿರ್ಧಾರ ಮಾಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮತ್ತಷ್ಟು ತೀವ್ರವಾಗುತ್ತದೆ. ಏಕೆಂದರೆ, ರಾಜ್ಯದ ಎಲ್ಲ ಜನಪರ ಹೋರಾಟಗಾರರ ಬೆಂಬಲ ನಮಗಿದೆ” ಎಂದರು.

“ಸಚಿವ ಎಂ.ಬಿ. ಪಾಟೀಲ್‌ಗೆ ದುಡ್ಡು ಬೇಕಿದೆ; ಅದಕ್ಕಾಗಿ ನಕಲಿ ಜನರನ್ನು ಸೃಷ್ಟಿ ಮಾಡಿದ್ದಾರೆ. ಆ ಮೂಲಕ ನಮ್ಮ ಒಗ್ಗಟ್ಟು ಒಡೆಯುವ ಕುತಂತ್ರ ಮಾಡುತ್ತಿದ್ದಾರೆ. ಇದೆಲ್ಲಾ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಮುನಿಯಪ್ಪ ಅವರಿಗೆ ಕಾಣುತ್ತಿಲ್ಲವೇ? ಸುಳ್ಳು ಸಾಕ್ಷಿ ಹೇಳುವವರ ಮಾತು ಕೇಳುವ ಮೂಲಕ ನಮ್ಮ ಹೋರಾಟದ ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದರು.

ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚೀಮಾಚನಹಳ್ಳಿ ಲಕ್ಷ್ಮಿ ಮಾತನಾಡಿ, “ಕೆಲವರಿಗೆ ದುಡ್ಡಿನ ಆಸೆ ತೋರಿಸಿ ಹಾಗೂ ಹಸಿರು ವಲಯ ಆಗತ್ತದೆ ಎಂದು ಭಯ ಹುಟ್ಟಿಸಿ ಜನರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ನಮ್ಮಲ್ಲಿ ಶೇ.90 ರಷ್ಟು ಜನ ಭೂಮಿ ಕೊಡುವುದಿಲ್ಲ ಎಂದು ನಿರ್ಧರಿಸಿದ್ದಾರೆ. ಇಂದು ಬೆಂಗಳೂರಿಗೆ ಹೋಗಿರುವ ಬಹುತೇಕರನ್ನು ಬೆದರಿಸಲಾಗಿದೆ. ಕೆಲವೇಕೆಲವು ಜನಕ್ಕೆ ಮಾತ್ರ ದುಡ್ಡು ಬೇಕು. ಆದರೆ, ಬಹುತೇಕರ ಆಯ್ಕೆ ಕೃಷಿ ಆಗಿದೆ” ಎಂದರು.

ನಲ್ಲಪ್ಪನಹಳ್ಳಿಯ ಇಂಜಿನಿಯರಿಂಗ್ ಪದವೀಧರೆ ಬಿಂದು ಮಾತನಾಡಿ, “ಭೂಮಿ ಕೊಡುತ್ತೇವೆ ಎಂದು ಬೆಂಗಳೂರಿಗೆ ಹೋಗಿರುವವರು ದುಡ್ಡಿಗಾಗಿ ತೆರಳಿದ್ದಾರೆ. ಆದರೆ, ನಾವು ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಸುತ್ತಮುತ್ತಲಿನ ಕಾರ್ಖಾನೆಗಳಿಂದ ನಮ್ಮಲ್ಲಿ ಹೆಚ್ಚಿನ ಮಾಲಿನ್ಯ ಆಗುತ್ತಿದೆ. ಇದು ನಮ್ಮ ಅಸ್ತಿತ್ವದ ಪ್ರಶ್ನೆ; ಒಂದೇ ಕಡೆ ಕಾರ್ಖಾನೆಗಳನ್ನು ಕಟ್ಟುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಕಷ್ಟವಾಗುತ್ತದೆ” ಎಂದರು.

“ಇಂಜಿನಿಯರಿಂಗ್ ಪದವಿ ಮಾಡಿದ್ದರೂ ಕೃಷಿಯಲ್ಲಿ ನಾವು ನೆಮ್ಮದಿಯಾಗಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ‘ಹಸಿರು ಉಳಿಸಿ’ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಅವರು ಈಗ ನಮ್ಮ ಭೂಮಿಯನ್ನೇ ಕಿತ್ತುಕೊಳ್ಳುತ್ತಿದ್ದಾರೆ. ರೈತರನ್ನು ಬೆಂಬಲಿಸದ ಸರ್ಕಾರ ನಮಗೆ ಯಾಕೆ ಬೇಕು? ಸ್ವಾತಂತ್ರ್ಯ ಪೂರ್ವದಿಂದಲೂ ನಾವು ಹೋರಾಟ ಮಾಡಿಕೊಂಡೆ ಎಲ್ಲವನ್ನೂ ಪಡೆದುಕೊಳ್ಳಬೇಕು; ಈಗ ನಮ್ಮ ಭೂಮಿ ಉಳಿಸಿಕೊಳ್ಳಲೂ ಹೋರಾಡಬೇಕಿದೆ. ಮುಖ್ಯಮಂತ್ರಿಗಳು ರೈತರ ಪರವಾಗಿ ನಿಲ್ಲಲೇಬೇಕು” ಎಂದು ಬಿಂದು ಆಗ್ರಹಿಸಿದರು.

ನಲ್ಲಪ್ಪನಹಳ್ಳಿ ಗ್ರಾಮದ ಕೃಷಿ ಪದವೀಧರ, ಆಧುನಿಕ ಕೃಷಿಕ ವಿನಯ್ ಮಾತನಾಡಿ, “13 ಹಳ್ಳಿಗಳ ರೈತರಲ್ಲಿ ಒಗ್ಗಟ್ಟು ಇರಲಿಲ್ಲ ಎಂದಿದ್ದರೆ ನಮ್ಮ ಹೋರಾಟ 1200 ದಿನ ಪೂರೈಸುತ್ತಿರಲಿಲ್ಲ. ನಾವೆಲ್ಲರೂ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಭೂಮಿ ಮಾರಿಸುವ ಕೆಲ ಏಜೆಂಟ್‌ಗಳು ನಮ್ಮ ಒಗ್ಗಟ್ಟು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಮಗೆ ಕೃಷಿ ವಲಯ (ಹಸಿರು ವಲಯ) ಬೇಕು; ದಲ್ಲಾಳಿಗಳಿಗೆ ಹಳದಿ ವಲಯ ಬೇಕು. ಅದನ್ನೇ ಮುಂದಿಟ್ಟುಕೊಂಡು ಬೆದರಿಕೆ ಹಾಕುತ್ತಿದ್ದಾರೆ. ಆದರೆ, ಭೂಮಿ ನಂಬಿ ಬದುಕುತ್ತಿರುವ ನಮಗೆ ಹಸಿರು ವಲವೇ ಬೇಕು” ಎಂದು ಹೇಳಿದರು.

ದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...